ಶಾರ್ಜಾದಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ.

ಕೊಚ್ಚಿ.ಜ.30-ಶಾರ್ಜಾದಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.

ಆತಂಕದ ನಡುವೆ ವಿಮಾನವು ರಾತ್ರಿ 8:26ಕ್ಕೆ ಸುರಕ್ಷಿತವಾಗಿ ಇಳಿದಿದೆ ಶಾರ್ಜಾದಿಂದ ಕೊಚ್ಚಿಗೆ ಬರುತ್ತಿದ್ದ ಏರ್ ಇಂಡಿಯ-412 ವಿಮಾನದ ಪೈಲಟ್ ಚಕ್ರದ ಹೈಡ್ರಾಲಿಕ್ ವೈಫಲ್ಯಕಂಡುಬಂದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣ ನಿಯಂತ್ರಣ (ಎಟಿಸಿ ) ಗಮನಕ್ಕೆ ತಂದರು.

ಕೂಡಲೆ ರಾತ್ರಿ 8:04ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು.

ಅದೃಷ್ಠವೆಂಬಂತೆ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಕೊಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ರನ್‍ವೇ ಬಳಿಯೂ ಯಾವುದೇ ಸಮಸ್ಯೆ ಆಗಿಲ್ಲ. ನಂತರ ವಿಮಾನ ನಿಲ್ದಾಣದ ಕಾರ್ಯಾಚರಣೆಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ವಕ್ತಾರರು, ಶಾರ್ಜಾ-ಕೊಚ್ಚಿ ವಿಮಾನವು ತುರ್ತು ಭೂಸ್ಪರ್ಶ ಮಾಡಿಲ್ಲ ಸಹಜವಾಗಿ ಇಳಿದಿದೆ ಎಂದಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಿನ್ನಮತ ಸಹಿಸಲ್ಲ, ಶಾ ವಾರ್‍ನಿಂಗ್.

Mon Jan 30 , 2023
ಬಿಜೆಪಿಯ ಭದ್ರ ಕೋಟೆಯಾಗಿರುವ ಬೆಳಗಾವಿಯಲ್ಲಿ ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವತ್ತ ಗಮನ ಕೊಡಿ, ಭಿನ್ನಮತ ಇವುಗಳನ್ನೆಲ್ಲ ಸಹಿಸಲ್ಲ. ಮುಂದಿನ ಬಾರಿ ನಾನು ರಾಜ್ಯಕ್ಕೆ ಬರುವ ಹೊತ್ತಿಗೆ ಯಾವುದೇ ಭಿನ್ನಾಭಿಪ್ರಾಯಗಳು ಯಾರಲ್ಲೂ ಇರಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರುಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ಬೆಳಗಾವಿ ಬಿಜೆಪಿ ನಾಯಕರಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನದ ಸಂಬಂಧ ನಿನ್ನೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಎಲ್ಲ ಮುಖಂಡರ ಜತೆ […]

Advertisement

Wordpress Social Share Plugin powered by Ultimatelysocial