ಮಗಳಿಗೆ ಅಂತಿಮ ವಿದಾಯ ಹೇಳಿದ ಜಿಟಿಡಿ ಪುತ್ರ: ಅಂತ್ಯಕ್ರಿಯೆ ವೇಳೆ ಆಕ್ರಂದನ

ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಬಾಲಕಿ ಗೌರಿ ಶನಿವಾರ ರಾತ್ರಿ ಇಹಲೋಹ ತ್ಯಜಿಸಿದ್ದಳು.ಮೈಸೂರು: ಎಂಸಿಡಿಸಿಸಿ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ ಅವರ ಮಗಳು ಸಾವಿಗೀಡಾಗಿದ್ದು, ತಂದೆಯು ಮಗಳ ಮೃತದೇಹ ತಬ್ಬಿ ಗೋಳಾಡುತ್ತಿದ್ದ ದೃಶ್ಯ ಎಲ್ಲರ ಕಣ್ಣಂಚಲಿ ನೀರುತಂದಿದೆ.ಮೈಸೂರಿನ ಗುಂಗ್ರಾಲ್ ಛತ್ರದ ತೋಟದ ಮನೆಯಲ್ಲಿ ಹರೀಶ್ ಗೌಡ ಅವರು ತಮ್ಮ ಮಗಳಾದ ಮೂವರು ವರ್ಷದ ಕಂದಮ್ಮ ಗೌರಿಯ ಅಂತ್ಯಕ್ರಿಯೆ‌ ನೆರವೇರಿಸಿದರು. ಮಗಳಿಗೆ ಅಂತಿಮ ವಿದಾಯ ಹೇಳುವಾಗ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಗೌರಿ ಶನಿವಾರ ರಾತ್ರಿ ಇಹಲೋಹ ತ್ಯಜಿಸಿದ್ದಳು. ಇಂದು ಸಂಪ್ರದಾಯದಂತೆ ಗೌರಿಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಅವರ ಕುಟುಂಬಸ್ಥರು, ಜೆಡಿಎಸ್​ ಯುವ ಮುಖಂಡ ನಿಖಿಲ್​ ಕುಮಾರಸ್ವಾಮಿ ಹಾಗೂ ಗ್ರಾಮಸ್ಥರು ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.ಮಗಳಿಗೆ ಅಂತಿಮ ವಿದಾಯ ಹೇಳಿದ ಜಿಟಿಡಿ ಪುತ್ರ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 2,202 ಹೊಸ ಕೇಸ್ ಪತ್ತೆ, 27 ಮಂದಿ ಸಾವು

Mon May 16 , 2022
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,202 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,23,801ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,241ಕ್ಕೆ ಏರಿಕೆಯಾಗಿದೆ.ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17317ಕ್ಕೆ ಇಳಿಕೆಯಾಗಿದೆಈ ನಡುವೆ ಕಳೆದ 24 ಗಂಟೆಗಳಲ್ಲಿ […]

Advertisement

Wordpress Social Share Plugin powered by Ultimatelysocial