ರೈತ ವಿರೋಧಿ ಕಾಯ್ದೆ ಹಾಗೂ ಮಾರುಕಟ್ಟೆ ತಿದ್ದುಪಡಿ ಕಾನೂನು ಹಿಂಪಡೆಯಲು ರಾಷ್ಟ್ರೀಯ ರಿಪಬ್ಲಿಕನ್ ಸೇನೆ ವತಿಯಿಂದ ವಿಜಯಪುರ ಜಿಲ್ಲೆಯ ಕೋಲಾರ ತಾಲೂಕಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸಂಘಟನಾಕಾರರು ನೀಲಿ ಶಾಲನ್ನು ಧರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಕನಕ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಜಾಥಾ ನಡೆಸಿ, ದುಡಿದು ತಿನ್ನಲು ಆಗದ ರೀತಿಯಲ್ಲಿ ಇಂದು ಒಂದು ಪರಿಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾರಿಗೆ ತಂದಿರುವ ನೀತಿಯನ್ನು ಕೂಡಲೆ ರದ್ದು ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :ವೆಂಕಟ ಚೈತನ್ಯ ರೆಡ್ಡಿ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ