ಬೆಂಗಳೂರು, ಮೇ 17- ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ನಾಳೆ ನಮ್ಮ ಅಪ್ಪಾಜಿ ಕ್ಯಾಂಟೀನ್ನಲ್ಲಿ ಒಂದು ರೂ.ಗೆ ಊಟ, ತಿಂಡಿ ವಿತರಣೆ ಮಾಡುವುದಾಗಿ ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹನುಮಂತನಗರದಲ್ಲಿರುವ ಅಪ್ಪಾಜಿ ಕ್ಯಾಂಟೀನ್ನಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಊಟ, ತಿಂಡಿ ನೀಡಲಾಗುತ್ತಿದೆ.
ದೇವೇಗೌಡರ 90ನೇ ವರ್ಷದ ಜನ್ಮದಿನದ ಅಂಗವಾಗಿ ಒಂದು ರೂ.ಗೆ ಊಟ, ತಿಂಡಿ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಿಯಾಯ್ತಿ ದರದ ಊಟ, ತಿಂಡಿ ಸೇವಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada