ಪುನೀತ್ ರಾಜ್ಕುಮಾರ್ ಹಾಗೂ ಕಿಚ್ಚ ಸುದೀಪ್ ಬಾಲ್ಯದ ಫೋಟೊವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ನಟ ದರ್ಶನ್ ಹಾಗೂ ಅಪ್ಪು ಒಟ್ಟಿಗೆ ಇರುವ ಫೋಟೊ ಕೂಡ ಇದೆ. ಇದು ಅಷ್ಟಾಗಿ ವೈರಲ್ ಆಗಿಲ್ಲ. ಆ ಫೋಟೊ ಬಗ್ಗೆ ಇದೀಗ ಸ್ವತಃ ದರ್ಶನ್ ಮಾತನಾಡಿದ್ದಾರೆ.ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಚಿತ್ರರಂಗದ ಎಲ್ಲರೊಟ್ಟಿಗೆ ಆತ್ಮೀಯ ಸ್ನೇಹ ಇತ್ತು. ನಟ ದರ್ಶನ್ ಹಾಗೂ ಅಪ್ಪು ಕೂಡ ಒಳ್ಳೆ ಸ್ನೇಹಿತರು. ಪುನೀತ್ ನಟನೆಯ ‘ಅರಸು’ ಚಿತ್ರದಲ್ಲಿ ಸಂಭಾವನೆ ಇಲ್ಲದೇ ದರ್ಶನ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇನ್ನು ಕನ್ನಡ ಚಿತ್ರರಂಗದ ಸುವರ್ಣ ಮಹೋತ್ಸವ ವೇದಿಕೆಯಲ್ಲಿ ದರ್ಶನ್ ಅರ್ಜುನನಾಗಿ, ಅಪ್ಪು ಬಭ್ರುವಾಹನನಾಗಿ ವೇದಿಕೆ ಏರಿದ್ದರು. ಡಾ. ರಾಜ್ಕುಮಾರ್ ಫ್ಯಾಮಿಲಿಗೂ ತೂಗುದೀಪ ಶ್ರೀನಿವಾಸ್ ಫ್ಯಾಮಿಲಿಗೂ ಆತ್ಮೀಯ ಒಡನಾಟ ಇದೆ. ಅಣ್ಣಾವ್ರ ಸಿನಿಮಾಗಳಲ್ಲಿ ತೂಗುದೀಪ ಶ್ರೀನಿವಾಸ್ ಆಸ್ಥಾನ ಕಲಾವಿದರರಾಗಿದ್ದರು.ಶಿವರಾಜ್ಕುಮಾರ್ ನಟನೆಯ ‘ದೇವರ ಮಗ’ ಚಿತ್ರದಲ್ಲಿ ದರ್ಶನ್ ಖಳನಟನಾಗಿ ಬಣ್ಣ ಹಚ್ಚಿದ್ದರು. ಚಿಕ್ಕಂದಿನಲ್ಲೂ ನಟ ದರ್ಶನ್, ಅಣ್ಣಾವ್ರ ಮನೆಗೆ ಹೋಗಿ ಬರುತ್ತಿದ್ದರು. ಹೀಗೆ ದಶಕಗಳ ಹಿಂದೆ ಡಾ. ರಾಜ್ಕುಮಾರ್ ಪುತ್ರಿ ಲಕ್ಷ್ಮಿ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ದರ್ಶನ್ ಭಾಗಿ ಆಗಿದ್ದರು. ಅಂದು ಕ್ಲಿಕ್ಕಿಸಿರುವ ಅಪ್ಪು, ದರ್ಶನ್ ಒಟ್ಟಿಗೆ ಇರುವ ಫೋಟೊ ಅಭಿಮಾನಿಗಳ ಮನಗೆದ್ದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada