ಅಪ್ಪು ನಿಧನ ಹೊಂದಿದಾಗ ದರ್ಶನ್ 15 ದಿನ ಕ್ರಾಂತಿ ಶೂಟಿಂಗ್ ನಿಲ್ಲಿಸಿದ್ದ ವಿಷಯ ಗೊತ್ತಾ

 

ಚಂದನವನದಲ್ಲಿ ಫ್ಯಾನ್ ವಾರ್ ಈಗ ಸಿಕ್ಕಾಪಟ್ಟೆ ಹೆಚ್ಚಿದೆ. ಹೆಚ್ಚಾಗಿದೆ ಎನ್ನುವುದಕ್ಕಿಂತ ಮಿತಿ ಮೀರಿದೆ ಎನ್ನಬಹುದು. ಸಾಮಾಜಿಕ ಜಾಲತಾಣಕ್ಕೆ ಸೀಮಿತವಾಗಿದ್ದ ಈ ಫ್ಯಾನ್ ವಾರ್ ಇದೀಗ ಹೊರಗೂ ಸಹ ಹಬ್ಬಿದೆ. ಅದರಲ್ಲಿಯೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವಿನ ಫ್ಯಾನ್ ವಾರ್ ಇದಕ್ಕೆ ತಾಜಾ ಉದಾಹರಣೆ ಎನ್ನಬಹುದು.ಇನ್ನು ಈ ಫ್ಯಾನ್ ವಾರ್ ವಿಷಯವನ್ನು ಸದುಪಯೋಗಪಡಿಸಿಕೊಂಡ ಮೂರನೇ ವ್ಯಕ್ತಿಗಳು ಹೊಸಪೇಟೆಯಲ್ಲಿ ನಡೆದ ಕ್ರಾಂತಿ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ದರ್ಶನ್ ಮೇಲೆ ಚಪ್ಪಲಿ ಎಸೆದು ವಿಕೃತಿ ಮೆರೆದಿದ್ದರು. ಇನ್ನು ಯಾರೋ ಮಾಡಿದ ಕೆಲಸದಿಂದ ಕೆಸರೆರಚಾಟ ನಡೆಸಿಕೊಂಡಿದ್ದು ಮಾತ್ರ ದರ್ಶನ್ ಹಾಗೂ ಪುನೀತ್ ರಾಜ್‌ಕುಮಾರ್‌ ಅವರ ಅಭಿಮಾನಿಗಳು. ಹೌದು, ಈ ಕೃತ್ಯವನ್ನು ಎಸಗಿದ್ದು ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಗಳೇ ಎಂದು ದರ್ಶನ್ ಅಭಿಮಾನಿಗಳು ಆರೋಪಿಸಿದರೆ, ಇದನ್ನು ಯಾವುದೇ ಕಾರಣಕ್ಕೂ ಅಪ್ಪು ಫ್ಯಾನ್ಸ್ ಮಾಡಿಲ್ಲ ಎಂದು ಪುನೀತ್ ಫ್ಯಾನ್ಸ್ ಪ್ರತಿವಾದಿಸಿದ್ದರು.ಹೀಗೆ ಇಬ್ಬರ ಅಭಿಮಾನಿಗಳ ನಡುವಿನ ಫ್ಯಾನ್ ವಾರ್ ಕಿಚ್ಚು ಮತ್ತಷ್ಟು ಹೆಚ್ಚಾಯಿತು. ಇದೊಂದು ಘಟನೆ ದೊಡ್ಡ ಮಟ್ಟದ ವಿವಾದವನ್ನು ಹುಟ್ಟುಹಾಕಿತು. ಅಷ್ಟೇ ಅಲ್ಲದೇ ಇದರಲ್ಲಿ ಸ್ಟಾರ್ ವಾರ್ ಸಹ ಇದೆ, ಹೀಗಾಗಿಯೇ ಯಾರೂ ಸಹ ಆ ವಿಷಯದ ಕುರಿತು ತುಟಿ ಬಿಚ್ಚುತ್ತಿಲ್ಲ ಎಂಬ ಅಭಿಪ್ರಾಯವನ್ನೂ ಸಹ ಸಿನಿ ರಸಿಕರು ವ್ಯಕ್ತಪಡಿಸಿದ್ದರು. ಈ ಕುರಿತಾಗಿ ನಿರ್ಮಾಪಕ ಉಮೇಶ್ ಬಣಕರ್ ಪ್ರತಿಕ್ರಿಯಿಸಿದ್ದು, ಇಲ್ಲಿ ಯಾವುದೇ ಸ್ಟಾರ್ ವಾರ್ ಇಲ್ಲ, ಎಲ್ಲವೂ ಸಹ ಕಿಡಿಗೇಡಿಗಳ ಕೆಲಸ ಎಂಬುದನ್ನು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬೀದರ್ ಜಿಲ್ಲಾ ಅರೋಗ್ಯ ಅಧಿಕಾರಿ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರವೇ

Thu Jan 5 , 2023
ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾದ ಡಾ. ರತಿಕಾಂತ ಸ್ವಾಮಿ ಇವರು ಲಂಚ ಪಡೆದು ಹೊರಗುತ್ತಿಗೆ ಆಧಾರದ ಮೇಲೆ ವಾಹನ ಚಾಲಕರನ್ನು ಹಾಗೂ ಡೇಟಾ ಎಂಟ್ರಿ ಆಪರೇಟರಗಳನ್ನು ನೇಮಿಸಿರುತ್ತಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಭಾರತಿಯ ವಿದ್ಯಾರ್ಥಿ ಸಂಘ ಜಂಟಿಯಲ್ಲಿ ಇಂದು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೂ ಹೋರಾಟ ಮಾಡಲಾಯಿತು. ಸರ್ಕಾರದ ಯಾವುದೇ ಪೂರ್ವನ್ಮತಿ ಇಲ್ಲದೆ ವಾಹನ ಚಾಲಕರನ್ನು ಮತ್ತು ಡಾಟಾ ಎಂಟ್ರಿ ಆಪರೇಟರಗಳನ್ನು […]

Advertisement

Wordpress Social Share Plugin powered by Ultimatelysocial