ಅಪ್ಪು ಭಾವಚಿತ್ರವಿರುವ ನಂದಿನಿ ಹಾಲಿನ ಪ್ಯಾಕೆಟ್

ರೈತರಿಗೆ ಅನುಕೂಲ ಆಗಲಿ ಎಂಬ ನಿಟ್ಟಿನಲ್ಲಿ ಕೆಎಂಎಫ್‌ನ ನಂದಿನಿ ಉತ್ಪನ್ನಗಳಿಗೆ, ನಟ ಪುನೀತ್  ರಾಜ್‌ಕುಮಾರ್ ಸುಮಾರು 10 ವರ್ಷಗಳಿಂದ ಪ್ರಚಾರ ರಾಯಭಾರಿಯಾಗಿದ್ದರು. ಇದಕ್ಕಾಗಿ ಅವರು ಕೆಎಂಎಫ್‌ನಿಂದ ಯಾವುದೇ ಸಂಭಾವನೆಯನ್ನು ಪಡೆಯುತ್ತಿರಲಿಲ್ಲ. ಇದೀಗ ಜನಪ್ರಿಯ ನಂದಿನಿ ಹಾಲಿನ ಪ್ಯಾಕೆಟ್‌ಗಳ ಮೇಲೆ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರವನ್ನು ಕೆಎಂಎಫ್ ಮುದ್ರಿಸಿದೆ ಎಂಬ ಫೋಟೊಗಳು, ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಕೆಎಂಎಫ್‌ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ಹಾಲು ಮಹಾಮಂಡಳ ವಿಶೇಷ ಗೌರವ ಸಲ್ಲಿಸಿದೆ. ಆದರೆ, ಪುನೀತ್ ಅವರ ಭಾವಚಿತ್ರವನ್ನು ಹಾಲಿನ ಪ್ಯಾಕೆಟ್‌ಗಳ ಮೇಲೆ ಮುದ್ರಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿಲ್ಲ ಎಂದು ಖಚಿತಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕಣ್ಮನ ಸೆಳೆಯುತ್ತಿದೆ ಸೀವಾಕ್‌ ಉದ್ಯಾನ;

Sun Jan 2 , 2022
ಉಡುಪಿ: ಉಡುಪಿ ಜಿಲ್ಲೆಗೆ ಪ್ರವಾಸ ಬರುವ ಬಹುತೇಕರು ತಪ್ಪದೆ ಮಲ್ಪೆ ಬೀಚ್‌ ಹಾಗೂ ಸೇಂಟ್ ಮೇರಿಸ್‌ ಐಲ್ಯಾಂಡ್‌ಗೆ ಭೇಟಿ ನೀಡುತ್ತಾರೆ. ಆದರೆ, ಮಲ್ಪೆಯ ಮಗ್ಗುಲಲ್ಲೇ ಇರುವ ಸೀವಾಕ್‌ ಸುಂದರ ಉದ್ಯಾನ ಹಾಗೂ ಪಡುಕೆರೆ ಬೀಚ್‌ಗೆ ಹೋಗುವುದು ಅಪರೂಪ. ಮುಂದಿನ ಸಲ ಉಡುಪಿಗೆ ಭೇಟಿ ನೀಡುವಾಗ ಸೀವಾಕ್‌ ಉದ್ಯಾನ ಹಾಗೂ ಪಡುಕೆರೆ ಬೀಚ್‌ ಕೂಡ ಪ್ರವಾಸದ ಭಾಗವಾಗಿರಲಿ. ಕಾರಣ ಸೀವಾಕ್ ಉದ್ಯಾನ ಸುಂದರವಾಗಿ ನಿರ್ಮಾಣಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಮಲ್ಪೆ ಬಂದರು […]

Advertisement

Wordpress Social Share Plugin powered by Ultimatelysocial