ಅಪ್ಪು ಪಡೆದಿದ್ದ 2.5 ಕೋಟಿ ಅಡ್ವಾನ್ಸ್​ ವಾಪಸ್​ ಕೊಟ್ಟ ಅಶ್ವಿನಿ!

ದೊಡ್ಮನೆಯ ದೊಡ್ಡತನಕ್ಕೆ ಮತ್ತೊಂದು ನಿದರ್ಶನ: ಅಪ್ಪು ಪಡೆದಿದ್ದ 2.5 ಕೋಟಿ ಅಡ್ವಾನ್ಸ್​ ವಾಪಸ್​ ಕೊಟ್ಟ ಅಶ್ವಿನಿ!

 

ಅಪ್ಪು(Appu), ಪವರ್​ ಸ್ಟಾರ್​(Power Star), ನಟಸಾರ್ವಭೌಮ, ಸರಳತೆಯ ಸಾಮ್ರಾಟ್​, ಬೆಟ್ಟದ ಹೂ, ಹೀಗೆ ಪುನೀತ್​ ರಾಜ್​ಕುಮಾರ್(Puneeth Rajkumar)​ ಅವರನ್ನು ಕರೆಯಲು ಇರುವ ಹೆಸರು ಒಂದೇ..?ಎರಡೇ..? ಕರುನಾಡಿನ ಮಗ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ದೈಹಿಕವಾಗಿ ಇಂದು ನಮ್ಮ ಜೊತೆ ಇಲ್ಲ.
ಅವರು ನಮ್ಮನ್ನು ಅಗಲಿ ಒಂದೂವರೆ ತಿಂಗಳು ಕಳೆದಿದೆ. ಆದರೆ ಇಡೀ ಕರ್ನಾಟಕಕ್ಕೆ ಆವರಿಸಿರುವ ಸೂತಕ ಮಾತ್ರ ಹಾಗಯೇ ಇದೆ. ಎಷ್ಟೆ ಆದರೂ ಯಾರ ಮಗ ಹೇಳಿ.. ಡಾ.ರಾಜ್​​ಕುಮಾರ್(Dr. Rajkumar)​ ಅವರ ತೃತೀಯ ಪುತ್ರ ಪವರ್​ ಸ್ಟಾರ್​ ಅಪ್ಪನ ಹಾಗೇ ಅಪ್ಪು ಬದುಕಿದರೇ ಹೀಗೆ ಬದುಕಬೇಕು ಎಂದು ಎಲ್ಲರಿಗೂ ತೋರಿಸಿ ಇಹಲೋಕ ತ್ಯಜಿಸಿದ್ದಾರೆ. ಅಪ್ಪು ಇಲ್ಲ ಎಂಬ ಕಹಿ ಸತ್ಯವನ್ನು ಎಲ್ಲರೂ ಒಪ್ಪಿಕೊಂಡು ಹೋಗಬೇಕು. ಅವರು ಮಾಡುತ್ತಿದ್ದ ಕೆಲಸಗಳನ್ನು ಅವರ ಅಭಿಮಾನಿಗಳು ಅಳವಡಿಸಿಕೊಂಡಿದ್ದಾರೆ. ದೊಡ್ಮನೆಯ ಬಗ್ಗೆ ಎಲ್ಲರಿಗೂ ಗೊತ್ತಿದೆ. ದೊಡ್ಮನೆಯ ದೊಡ್ಡತನಕ್ಕೆ ಮತ್ತೊಂದು ನಿದರ್ಶನ ಇದು. ಅಪ್ಪು ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಅಪ್ಪು ಹೇಳದೆ, ಕೇಳದೇ ನಮ್ಮನ್ನೆಲ್ಲ ಬಿಟ್ಟು ಹೋಗಿದ್ದಾರೆ. ಆದರೆ, ಇತಂಹ ಸಮಯದಲ್ಲಿ ಆ ದೊಡ್ಮನೆ ಸೊಸೆಯ ದೊಡ್ಡ ಮನಸ್ಸು ಮಾಡಿರುವ ಒಂದು ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಅಪ್ಪು ಅವರಂತೆ ನೀವು ಮೇಡಂ ನಿಮಗೆ ಒಂದು ಸಲಾಂ ಅಂತ ಅಶ್ವಿನಿ ರಾಜ್​ಕುಮಾರ್(Ashwini Rajkumar)​ ಅವರಿಗೆ ಫ್ಯಾನ್ಸ್​ ಹೇಳುತ್ತಿದ್ದಾರೆ.

ಅಪ್ಪು ಪಡೆದಿದ್ದ ಅಡ್ವಾನ್ಸ್​​ ರಿರ್ಟನ್​ ಕೊಟ್ಟ ಅಶ್ವಿನಿ!

ಹೌದು, ಪವರ್​ ಸ್ಟಾರ್ ಪುನೀತ್​​ ರಾಜಕುಮಾರ್​ ಒಂದು ಸಿನಿಮಾಗೆ ಡೇಟ್ಸ್​ ನೀಡಿದ್ದರು. ಜೊತೆಗೆ ಆ ನಿರ್ಮಾಪಕರು 2 ಕೋಟಿ ಅಡ್ವಾನ್ಸ್​ ಕೊಟ್ಟಿದ್ದರಂತೆ. ಪುನೀತ್ ನಿಧನದ ನಂತರ ಆ ನಿರ್ಮಾಪಕರು ಕೂಡ ಅಪ್ಪು ಇಲ್ಲ ಎಂಬುದನ್ನು ನೆನೆದು ಕಣ್ಣೀರಿಟ್ಟಿದ್ದರು. ಹಣದ ಬಗ್ಗೆ ಆ ನಿರ್ಮಾಕರು ಯಾರ ಬಳಿಯೂ ಏನೂ ಕೇಳಿಲ್ಲ. ಆದರೂ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಆ ನಿರ್ಮಾಪಕರಿಗೆ ತಾವು ಕೊಟ್ಟಿರುವ 2 ಕೋಟಿ ಹಣವನ್ನು ವಾಪಸ್​ ಪಡೆಯುವಂತೆ ಕರೆ ಮಾಡಿ ಹೇಳಿದ್ದಾರೆ. ಈ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಬಗ್ಗೆ ವ್ಯಕ್ತಿಯೊಬ್ಬರು ಪೋಸ್ಟ್​ವೊಂದನ್ನು ಮಾಡಿದ್ದಾರೆ. ‘ಅವರು ಕನ್ನಡ ಸಿನಿಮಾ ನಿರ್ಮಾಪಕರು. ಅವರು ನನ್ನ ಪಕ್ಕ ಕುಳಿತಿದ್ದರು. ಆಗ ಅವರಿಗೆ ದೂರವಾಣಿ ಕರೆಯೊಂದು ಮಾಡಿದವರು ಹೇಳಿದವರು. ಅವರು ತಮ್ಮ ಡೈರಿಯಲ್ಲಿ ಬರೆದಿದ್ದಾರೆ. ನಿಮ್ಮಿಂದ ಸಿನಿಮಾ ಒಂದರ ಮುಂಗಡವಾಗಿ 2.5 ಕೋಟಿ ಪಡೆದಿದ್ದರಂತೆ. ನಾಳೆ ನೀವು ಮನೆಗೆ ಬಂದು ಈ ಹಣವನ್ನು ಪಡೆದುಕೊಂಡು ಹೋಗಿ ಎಂದರು ಆ ಮಹಿಳೆ..! ಹೀಗೆ ಹೇಳಿದ ಮಹಿಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್​..ಇದು ಪ್ರಾಮಾಣಿಕ.. ಕನ್ನಡ ಜನ ಈ ಕುಟುಂಬವನ್ನು ಪ್ರೀತಿಸುವುದು ಈ ಕಾರಣಕ್ಕಾಗಿ. ಕನ್ನಡಿಗರ ಆರಾಧ್ಯ ದೈವ ರಾಜ್​ ಕುಟುಂಬ ಇರುವುದು ಹೀಗೆ’ ಎಂದು ಒಬ್ಬರು ಟ್ವೀಟ್ ಮಾಡಿದ್ದಾರೆ.

ಇದನ್ನು : ನಮ್ಮ ಬಾವುಟ ಸುಟ್ಟರೆ ತಾಯಿಯನ್ನೇ ಸುಟ್ಟ ಹಾಗೆ: ಭಾಷೆಗಾಗಿ ಪ್ರಾಣ ಕೊಡೋಕೂ ಸಿದ್ಧ ಎಂದ ಶಿವಣ್ಣ!

ಅಶ್ವಿನಿ ದೊಡ್ಡತನಕ್ಕೆ ಅಭಿಮಾನಿಗಳು ಫಿದಾ!

ಇದ್ದಷ್ಟು ದಿನ ಮಾಡಿದ ಸಹಾಯವನ್ನು ಯಾರಿಗೂ ತಿಳಿಯದಂತೆ ನಮ್ಮ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮಾಡಿದ್ದರು. ಅವರ ಸಹಾಯ ಮಾಡಿದ್ದನ್ನು ಅವರ ಅಭಿಮಾನಿಗಳು ಮುಂದುವರೆಸಲು ಮುಂದಾಗಿದ್ದಾರೆ. ಇದೆಲ್ಲರ ನಡುವೆ ಅಶ್ವಿನಿ ರಾಜ್​ಕುಮಾರ್​ ಅವರ ಈ ಒಂದು ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನಮ್ಮ ಅಪ್ಪು ಅವರ ಪತ್ನಿಯಾಗಿ ನೀವು ಮಾಡುತ್ತಿರುವ ಕೆಲಸ ನಿಜಕ್ಕೂ ಮೆಚ್ಚುವಂತದ್ದು. ಇದು ಹೀಗೆ ಮುಂದುವರೆಯಿಲಿ ಮೇಡಂ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಏಷ್ಯನ್ ಚಾಂಪಿಯನ್ಸ್ ಹಾಕಿ ಟ್ರೋಫಿ'ಯಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

Wed Dec 22 , 2021
  ಕೆಎನ್‌ಎನ್ ಸ್ಪೋರ್ಟ್ಸ್ ಡೆಸ್ಕ್: ಏಷ್ಯನ್ ಚಾಂಪಿಯನ್ಸ್ ಹಾಕಿ ಟ್ರೋಫಿಯಲ್ಲಿ ( Asian Champions Trophy Hockey 2021 ) ಪಾಕಿಸ್ತಾನವನ್ನು 4-3ರಿಂದ ಮಣಿಸಿದಂತ ಭಾರತ ( India vs Pakistan Playoffs ) ಕಂಚಿನ ಪದಕವನ್ನು ಗಳಿಸುವಂತೆ ಆಗಿದೆ. ಹರ್ಮನ್ ಪ್ರೀತ್ ಸಿಂಗ್ ಈ ಹಿಂದೆ ಪೆನಾಲ್ಟಿ ಕಾರ್ನರ್ ನಿಂದ ಸ್ಕೋರ್ ಮಾಡಿದ ನಂತರ ಭಾರತವು ಹಾಕಿ ಟ್ರೋಪಿಯಲ್ಲಿ ಗೋಲ್ ಪ್ರಾರಂಭವಾಯಿತು. ಇದು ಮೊದಲ ತ್ರೈಮಾಸಿಕದಲ್ಲಿ ಭಾರತಕ್ಕೆ 1-0 […]

Advertisement

Wordpress Social Share Plugin powered by Ultimatelysocial