ಅರಗ ಜ್ಞಾನೇಂದ್ರ:ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿ ಸುದ್ದಿ;

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು 1.20 ಲಕ್ಷ ರೂ.ಗೆ ಹೆಚ್ಚಿಸಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವರಮಾನ ಮಿತಿ ಹೆಚ್ಚಿಸುವಂತೆ, ವಸತಿ ವಂಚಿತ ಬಡವರು ಮನವಿ ಸಲ್ಲಿಸುತ್ತಾ ಬಂದಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ, ಮುಖ್ಯಮಂತ್ರಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡುದಾರರ ವರಮಾನ ಮಿತಿಯನ್ನು 1.20 ಲಕ್ಷ ರೂ.ಗೆ ಈಗಾಗಲೇ ಹೆಚ್ಚಿಸಿದೆ, ಆದರೆ ರಾಜ್ಯದಲ್ಲಿ, ಆಶ್ರಯ ಯೋಜನೆ ಫಾನುಭವಿಗಳಿಗೆ ವರಮಾನ ಮಿತಿ 32 ಸಾವಿರ ರೂ.ನಷ್ಟಿದ್ದು, ಹೆಚ್ಚಿನ ಅರ್ಹರು ಯೋಜನೆಯ ಲಾಭ ಪಡೆಯುವುದರಿಂದ ವಂಚಿತರಾಗಿದ್ದಾರೆ.

ತನ್ನ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಗಳಿಗೆ ಹಾಗೂ ವಸತಿ ಖಾತೆಯ ಕಾರ್ಯದರ್ಶಿಗಳಿಗೆ, ಸೂಕ್ತ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿರ್ಧಾರದಿಂದ ಲಕ್ಷಾಂತರ ಮಂದಿ ವಸತಿ ವಂಚಿತ ಬಡವರು ಪ್ರಯೋಜನ, ಪಡೆಯಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

RECIPE: ಟೊಮ್ಯಾಟೋ ಚಟ್ನಿ;

Sat Jan 29 , 2022
ಬೇಕಾಗುವ ಸಾಮಾಗ್ರಿಗಳು; 2 ಸಣ್ಣಗೆ ಕತ್ತರಿಸಿದ ಟೊಮ್ಯಾಟೊ ಕಾಯಿ /ಹಸಿರು ಟೊಮ್ಯಾಟೊ 3 ಟೀ ಸ್ಪೂನ್ ಎಳ್ಳಿನ ಬೀಜ ಸ್ವಲ್ಪ ಕೊತ್ತೊಂಬರಿ ಸೊಪ್ಪು 1 ಟೀ ಸ್ಪೂನ್ ಅಡುಗೆ ಎಣ್ಣೆ 7 ರಿಂದ 8 ಕರಿಬೇವಿನ ಎಸಳುಗಳು 1/2 ಟೀ ಸ್ಪೂನ್ ಜೀರಿಗೆ 1/2 ಟೀ ಸ್ಪೂನ್ ಸಾಸಿವೆ 1/2 ಟೀ ಸ್ಪೂನ್ ಸಕ್ಕರೆ 3 ರಿಂದ 4 ಹಸಿ ಮೆಣಸಿನ ಕಾಯಿಗಳು ಒಂದು ಚಿಟಿಕೆ ಇಂಗು ರುಚಿಗೆ ತಕ್ಕಷ್ಟು […]

Advertisement

Wordpress Social Share Plugin powered by Ultimatelysocial