Arjun Sarja: ‘ದಳಪತಿ’ ವಿಜಯ್ ಎದುರು ವಿಲನ್ ಆಗಲು ಅರ್ಜುನ್ ಸರ್ಜಾಗೆ ದುಬಾರಿ ಸಂಭಾವನೆ!

ತಮಿಳು ನಟ ‘ದಳಪತಿ’ ವಿಜಯ್ ಅವರ ‘ವಾರಿಸು’ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಆ ಸಿನಿಮಾದ ನಂತರ ‘ವಿಕ್ರಮ್’ ನಿರ್ದೇಶಕ ಲೋಕೇಶ್‌ ಕನಕರಾಜ್ ಜೊತೆಗೆ ವಿಜಯ್ ಮತ್ತೊಂದು ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾದ ಮೇಲೂ ಕೂಡ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಜನವರಿಯಲ್ಲಿ ಈ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು, ಸದ್ಯ ಈ ಚಿತ್ರದ ಕುರಿತಂತೆ ಒಂದಷ್ಟು ಆಸಕ್ತಿಕರ ಮಾಹಿತಿಗಳು ಹೊರಬಿದ್ದಿವೆ. ಹೌದು, ವಿಜಯ್ ನಟನೆಯ 67ನೇ ಸಿನಿಮಾದಲ್ಲಿ ನಟ ಅರ್ಜುನ್ ಸರ್ಜಾ ಅವರು ವಿಲನ್ ಪಾತ್ರ ಮಾಡಲಿದ್ದಾರೆ. ಅದಕ್ಕಾಗಿ ಅವರು ದುಬಾರಿ ಸಂಭಾವನೆ ಪಡೆಯಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.ವಿಜಯ್ ನಟನೆಯ ಈ ಹೊಸ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಅವರು ಪ್ರಮುಖ ವಿಲನ್‌ಗಳಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳಲಿದ್ದಾರೆ. ಆ ಪಾತ್ರಕ್ಕಾಗಿ ಅವರಿಗೆ ಬರೋಬ್ಬರಿ 5 ಕೋಟಿ ರೂ. ಸಂಭಾವನೆಯನ್ನು ನೀಡಲಾಗುತ್ತಿದೆಯಂತೆ. ಅಂದಹಾಗೆ, ಅರ್ಜುನ್ ಸರ್ಜಾ ಸೇರಿದಂತೆ ಒಟ್ಟು ಆರು ಮಂದಿ ವಿಲನ್‌ಗಳು ಈ ಸಿನಿಮಾದಲ್ಲಿ ಇರಲಿದ್ದಾರಂತೆ. ಅಂದಹಾಗೆ, ಈ ಹಿಂದೆಯೂ ಕೂಡ ಅರ್ಜುನ್ ಸರ್ಜಾ ಅವರು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಇದೀಗ ಮೊದಲ ಬಾರಿಗೆ ವಿಜಯ್ ಎದುರು ಖಳರಾಗಿ ಅಬ್ಬರಿಸಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ 'ಪುಷ್ಪ 2' ಅಡ್ಡಕ್ಕೆ ಸಾಯಿ ಪಲ್ಲವಿ ಎಂಟ್ರಿ ಕೊಡ್ತಾರಾ?

Wed Dec 28 , 2022
‘ಸ್ಟೈಲಿಶ್ ಸ್ಟಾರ್’ ಅಲ್ಲು ಅರ್ಜುನ್‌ ಮುಖ್ಯ ಭೂಮಿಕೆಯ ‘ಪುಷ್ಪ 2’ ಸಿನಿಮಾದ ( Pushpa Movie ) ಚಿತ್ರೀಕರಣ ಶುರುವಾಗಿದೆ. ಈ ಸಿನಿಮಾಗೆ ಅಚ್ಚರಿ ಎನ್ನುವಂತೆ ನಟಿ ಸಾಯಿ ಪಲ್ಲವಿಯ ಎಂಟ್ರಿ ಆಗಿದೆ. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಕೂಡ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರಂತೆ. ಹಾಗಾದರೆ ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿಇರುವುದಿಲ್ಲವಾ ಎಂದರೆ ಅವರೂ ಇರುತ್ತಾರಂತೆ. ಮೂಲಗಳ ಪ್ರಕಾರ, ಅಲ್ಲುಅರ್ಜುನ್‌ ಅವರ ಸಹೋದರಿಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ. ಈಗಾಗಲೇ ಚಿತ್ರತಂಡ […]

Advertisement

Wordpress Social Share Plugin powered by Ultimatelysocial