ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್ನ ಜಾಮ್ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ನವದೆಹಲಿ: ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್ನ ಜಾಮ್ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ ವಿಮಾನವನ್ನು ಗುಜರಾತ್ನ ಜಾಮ್ನಗರದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ ದಳ ಕೂಡಾ ಜಾಮ್ನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ವಿಮಾನವನ್ನು ಪರೀಶೋಧನೆ ಮಾಡುತ್ತಿದ್ದು, 244 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸಾ ವಿಮಾನ ಇಸ್ತಾನ್ಬುಲ್ನಲ್ಲಿ ತುರ್ತು ಭೂಸ್ಪರ್ಶ, 36 ಗಂಟೆ ತಡವಾಗಿ ಆಗಮನಮಾಸ್ಕೋದಿಂದ ಟೇಕಾಫ್ ಆಗಿದ್ದ ಈ ವಿಮಾನವು ಡಬೋಲಿಮ್ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿತ್ತು.
ಸದ್ಯ ಡಬೋಲಿಮ್ ಏರ್ಪೋರ್ಟ್ನ ಸುತ್ತಮುತ್ತ ಭದ್ರತೆ ಬಿಗಿಗೊಳಿಸಲಾಗಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ: ಅಧಿಕಾರಿಗಳು ಈ ನಡುವೆ ತಪಾಸಣೆ ನಡೆಸಿದ ವಿಮಾನದಲ್ಲಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್ಎಸ್ಜಿ)ಗೆ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Tue Jan 10 , 2023
ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಈ ಹಿಂದೆ ಎಂದೂ ಕಂಡರಿಯದಂಥ ಆಹಾರ ಬಿಕ್ಕಟ್ಟು ತಲೆದೋರಿದೆ. ಗೋದಿ ಹಾಗೂ ಗೋದಿ ಹಿಟ್ಟಿನ ಕೊರತೆಯಿಂದ ಜನತೆ ಬೀದಿಗಿಳಿದು ಹೋರಾಟ ನಡೆಸುವಂತಾಗಿದೆ. ಗೋದಿ ಹಿಟ್ಟಿನ ಬೆಲೆಗಳು ಜನಸಾಮಾನ್ಯರ ಕೈಗೆಟುಕದಂತಾಗಿ ಬಡವರು ಉಪವಾಸ ಬೀಳುವ ಸ್ಥಿತಿ ಎದುರಾಗಿದೆ.ಪಾಕಿಸ್ತಾನವು ತನ್ನ ಇತಿಹಾಸದಲ್ಲೇ ಅತಿ ಕೆಟ್ಟ ಹಿಟ್ಟಿನ ಕೊರತೆಯ ಸಮಸ್ಯೆ ಎದುರಿಸುತ್ತಿದೆ. ಗೋದಿಗಾಗಿ ದೇಶದ ಎಲ್ಲ ಭಾಗದಲ್ಲೂ ಹಾಹಾಕಾರ ಉಂಟಾಗಿದ್ದು, ಖೈಬರ್ ಪಖ್ತುನಖ್ವಾ, ಸಿಂಧ್ ಮತ್ತು ಬಲೂಚಿಸ್ತಾನ ಪ್ರಾಂತ್ಯಗಳಲ್ಲಿ ಗೋದಿ […]