ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ

ಏರ್ ಇಂಡಿಯಾ ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಬಂಧಿತನಾಗಿರುವ ಶಂಕರ್ ಮಿಶ್ರಾನನ್ನು ದೆಹಲಿ ಕೋರ್ಟ್​ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶಂಕರ್ ಮಿಶ್ರಾನನ್ನು ಜನವರಿ 21ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಆತನ ಜಾಮೀನು ಅರ್ಜಿಯನ್ನು ಜ. 11ರಂದು ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.ಈ ಘಟನೆ ಒಂದೂವರೆ ತಿಂಗಳ ಹಿಂದೆ ನಡೆದಿತ್ತು. ಮದ್ಯದ ಅಮಲಿನಲ್ಲಿದ್ದ ಮಿಶ್ರಾ ಬೆತ್ತಲಾಗಿ, ವೃದ್ಧೆ ಮೇಲೆ ಮೂತ್ರ ವಿಸರ್ಜಿಸಿದ್ದ. ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಸುಮಾರು 70 ವರ್ಷದ ವೃದ್ಧೆ ಮೇಲೆ ಆತ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನಲಾಗಿದೆ. ಆತನ ವಿರುದ್ಧ ತನಿಖೆ ಶುರುವಾಗಿತ್ತು.ಇದೀಗ ವಿಚಾರಣೆ ಪೂರ್ಣಗೊಂಡಿದ್ದು ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ. ಘಟನೆ ನಂತರ ತಲೆ ಮರೆಸಿಕೊಂಡಿದ್ದ ಈತನನ್ನು ಬೆಂಗಳೂರಿನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು.ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿರುವ ಸಹೋದರಿಯ ಮನೆಗೆ ಹೋಗಿದ್ದ ಮಿಶ್ರಾನನ್ನು ಅರೆಸ್ಟ್​ ಮಾಡಲಾಗಿದೆ. ನಂತರ ದೆಹಲಿಗೆ ಕರೆದುಕೊಂಡು ಹೋಗಲಾಗಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಗ್ರಗಾಮಿ ಸಂಘಟನೆಗೆ ಸಂಚು

Sun Jan 8 , 2023
ಉಗ್ರಗಾಮಿ ಸಂಘಟನೆ ಸ್ಥಾಪಿಸಲು ಯತ್ನಿಸಿದ ಆರೋಪದ ಮೇಲೆ ಅಸ್ಸಾಂನ ಮಾಜಿ ಶಾಸಕ ಹಿತೇಶ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕೊಕ್ರಜಾರ್ ಜಿಲ್ಲೆಯ ಮಾಜಿ ಶಾಸಕ ಹಿತೇಶ್ ಬಸುಮತರಿ ಅವರ ಮೇಲೆ ಗುಮಾನಿ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ಅವರ ನಿವಾಸದ ಮೇಲೆ ಶೋಧ ಕಾರ್ಯ ನಡೆಸಿದ್ದರು.ಈ ವೇಳೆ ಒಂದು ಎಕೆ 47 ಮತ್ತು ಒಂದು ಎಂ16 ರೈಫಲ್ ಹಾಗೂ 100 ಜೀವಂತ ಕಾಟ್ರಿಡ್ಜ್‌ಗಳು ಪತ್ತೆಯಾಗಿವೆ.ಘಟನೆಯಲ್ಲಿ ಮಾಜಿ ಶಾಸಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, […]

Advertisement

Wordpress Social Share Plugin powered by Ultimatelysocial