ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಚ್ಚುಗತ್ತಿ ಹೀರೋ..ಯುವಕರಿಗೆ ಮಾದರಿ ರಾಜವರ್ಧನ್ ನಡೆ!

ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ರಾಜವರ್ಧನ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಬರ್ತ್ ಡೇ ಖುಷಿಯಲ್ಲಿರುವ ರಾಜವರ್ಧನ್ ಯುವಕರಿಗೆ ಮಾದರಿಯಾಗುವಂತೆ..ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ನೇತ್ರಾದಾನ ಮಾಡಲು ರಾಜವರ್ಧನ್ ನೋಂದಣಿ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಮಿಂಟೋ ಆಸ್ಪತ್ರೆಯ ನಿರ್ದೇಶಕರಾದ ಡಾ.ಸುಜಾತಾ ರಾಥೋಡ್, ಡಾ.ಮಂಜುನಾಥ್ ಉಪಸ್ಥಿತರಿದ್ದರು.

ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ವುಕಡ್ ಗೆ ಎಂಟ್ರಿ ಕೊಟ್ಟಿದ್ದ ಡಿಂಗ್ರಿ ನಾಗರಾಜ್ ಪುತ್ರ ನಟ ರಾಜವರ್ಧನ್ ಮೊದಲ ಸಿನಿಮಾದಲ್ಲಿ ಭರವಸೆ ನಾಯಕ ಮಿಂಚಿದ್ದಾರೆ. ಸದ್ಯ ಹಿರಣ್ಯ ಸಿನಿಮಾದಲ್ಲಿ ನಟಿಸ್ತಿರುವ ರಾಜವರ್ಧನ್, ಅತ್ತ ಪ್ರಣಯಂ ಸಿನಿಮಾ ಮುಗಿಸಿ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಅಂದಹಾಗೇ ಹಿರಣ್ಯ ಚಿತ್ರಕ್ಕೆಪ್ರವೀಣ್ ಅವ್ಯುಕ್ತ್ ನಿರ್ದೇಶನದ ಮಾಡ್ತಿದ್ದು, ವಿಘ್ನೇಶ್ವರ ಮತ್ತು ವಿಜಯ್ ಕುಮಾರ್ ಬಂಡವಾಳ ಹೂಡಿದ್ದಾರೆ. ತೆಲುಗಿನ ಹುಡುಗಿ ರಿಹಾನಾ ನಾಯಕಿಯಾಗಿ ನಟಿಸ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರವಿ ತಿರುಮಲೈ

Fri Mar 25 , 2022
  ಇಂದು ನಮ್ಮೆಲ್ಲರ ಆತ್ಮೀಯರೂ, ಫೇಸ್ಬುಕ್ ವಲಯದಲ್ಲಿ ಕಗ್ಗದ ಗುರುವರ್ಯ ಎಂದು ಆಪ್ತವಾಗಿ ಗುರುತಿಸಲ್ಪಡುತ್ತಿದ್ದ ದಿವಂಗತ ರವಿ ತಿರುಮಲೈ ಅವರ ಜನ್ಮದಿನ. ರವಿ ತಿರುಮಲೈ ಅವರು ಡಿ. ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ದ ಕುರಿತಾದ ವ್ಯಾಖ್ಯಾನಗಳನ್ನು 4 ಬೃಹತ್ ಸಂಪುಟಗಳಲ್ಲಿ ಹೊರತಂದಿದ್ದಾರೆ. ಇದು ಫೇಸ್ಬುಕ್ಕಿನ ಬ್ಲಾಗ್ ಮೂಲಕ ಪ್ರತಿನಿತ್ಯ ಹರಿದು ಬಂದು ಆ ನಂತರದಲ್ಲಿ ಪ್ರೀತಿಪಾತ್ರರ ಒತ್ತಾಯದ ಮೇರೆಗೆ ಗ್ರಂಥರೂಪದಲ್ಲಿ ಹೊರಹೊಮ್ಮಿ ಬಂತು ಎಂಬುದು ನಮಗೆಲ್ಲರಿಗೂ ತಿಳಿದ ವಿಚಾರ. ಈ […]

Advertisement

Wordpress Social Share Plugin powered by Ultimatelysocial