ಇತ್ತೀಚೆಗೆ ನಟ ಕಿಶೋರ್ ಅವರ ಟ್ವಿಟ್ಟರ್ ಖಾತೆ ಸಸ್ಪೆಂಡ್ ಆಗಿತ್ತು. ತಮ್ಮ ಪೋಸ್ಟ್ಗಳಿಂದ ಟ್ವಿಟ್ಟರ್ ನಿಯಮಗಳನ್ನು ಮೀರಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿತ್ತು. ಈ ಸಂಬಂಧ ಕಿಶೋರ್ ಫೇಸ್ಬುಲ್ ಹಾಗೂ ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.ನಟನಾಗಿ ಮಾತ್ರವಲ್ಲದೇ ಮಾದರಿ ರೈತನಾಗಿಯೂ ಕಿಶೋರ್ ಎಲ್ಲರಿಗೂ ಮಾದರಿ ಆಗಿದ್ದಾರೆ. ಪ್ರಪಂಚದ ಆಗುಹೋಗುಗಳ ಬಗ್ಗೆ ತಮ್ಮ ಭಿನ್ನವಾದ ಅಭಿಪ್ರಾಯ ಹಾಗೂ ಸಾಮಾಜಿಕ ಚಿಂತನೆಗಳಿಂದ ಗುರ್ತಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಳೆದ ವಾರ ಇದ್ದಕ್ಕಿದಂತೆ ಕಿಶೋರ್ ಅವರ ಟ್ವಿಟ್ಟರ್ ಅಕೌಂಟ್ ಸಸ್ಪೆಂಡ್ ಆಗಿತ್ತು. ಬಲಪಂಥೀಯ ವಾದದ ವಿರುದ್ಧ ಮಾತನಾಡುವವ ಸೋಷಿಯಲ್ ಮೀಡಿಯಾ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗುತ್ತಿದೆ ಎನ್ನುವ ಬಗ್ಗೆ ಕೂಡ ಕೆಲ ದಿನಗಳಿಂದ ಚರ್ಚೆ ಆಗ್ತಿದೆ. ಹಾಗಾಗಿ ಕಿಶೋರ್ ಟ್ವಿಟ್ಟರ್ ಖಾತೆ ಸಸ್ಪೆಂಡ್ಗೆ ಅದೇ ಕಾರಣನಾ ಎನ್ನು ಅನುಮಾನ ಮೂಡಿತ್ತು.ಭ್ರಷ್ಟ ವ್ಯವಸ್ಥೆಯನ್ನು ಕಿಶೋರ್ ಮೊದಲಿನಿಂದಲೂ ಟೀಕಿಸುತ್ತಾ ಬರುತ್ತಿದ್ದಾರೆ. ಹಾಗಾಗಿ ಅವರ ಟ್ವಿಟ್ಟರ್ ಖಾತೆ ಸಸ್ಪೆಂಡ್ ಆಗಲು ಇಂತಹ ಪೋಸ್ಟ್ಗಳೇ ಕಾರಣನಾ? ಎನ್ನುವ ಗೊಂದಲ ಶುರುವಾಗಿತ್ತು. ಹಾಗಾದರೆ ಆ ಪೋಸ್ಟ್ಗಳು ಯಾವುದು? ಎನ್ನುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಇದೀಗ ಎಲ್ಲದಲ್ಲೂ ಕಿಶೋರ್ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada