ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್‌ ಹಾಕಿಲ್ಲ;ಕಂದಾಯ ಸಚಿವ ಆರ್‌ ಅಶೋಕ್‌ ಸ್ಪಷ್ಟನೆ

ಬೆಂಗಳೂರುಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್ಹಾಕಿಲ್ಲ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್ತಮಗೆ ಬಿಟ್ಟು ಕೊಡುವಂತೆ ಕೇಳಿದರು. ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೇನೆಎಂದು ಆರ್‌. ಅಶೋಕ ಹೇಳಿದರು.

ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ರಾಜ್ಯದ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಿಸುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಅವರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ. ಸೋಮಣ್ಣ ಸರಿಯಾಗಿ ಹೇಳಿದ್ದಾರೆ. ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ. ಅವರು ಸಭೆ ಕರೆದ ಹಿಂದಿನ ದಿನ ಅರ್ಧ ಗಂಟೆ ಮಾತನಾಡಿದ್ದೆವು. ಪೂರ್ವನಿಗದಿತ ಕಾರ್ಯಕ್ರಮ ಅಥವಾ ಪ್ರವಾಸದಲ್ಲಿದ್ದರೆ ಸಭೆಗೆ ಹೋಗಲು ಆಗುವುದಿಲ್ಲ. ಉಳಿದಂತೆ ಶಾಸಕರೇ ಸಭೆ ಕರೆದರೂ ನಾನು ಹೋಗುತ್ತೇನೆಎಂದು ಹೇಳಿದರು. ನನ್ನ ಇಲಾಖೆಯನ್ನು ಬಿಟ್ಟು ಬೇರೆ ಇಲಾಖೆಗಳ ಕೆಲಸಕ್ಕೆ ನಾನು ತಲೆ ಹಾಕುವುದಿಲ್ಲ. ಬೆಂಗಳೂರಿನಲ್ಲಿ ರಸ್ತೆಗಳ ಗುಂಡಿ ಮುಚ್ಚಿಸಲು ಹೇಳಿದ್ದಾರೆ. ಅದನ್ನಷ್ಟೇ ಮಾಡಿದ್ದೇನೆ ಎಂದು ಸಚಿವ ಆರ್‌ ಅಶೋಕ್‌ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಖ್ಯಾತ ನಿರ್ದೇಶಕ ಎಸ್‌.ಎಸ್ ರಾಜಮೌಳಿಗೆ ಇಂದು 48ನೇ ಜನ್ಮದಿನದ ಸಂಭ್ರಮ

Sun Oct 10 , 2021
ಟಾಲಿವುಡ್ ಜಕ್ಕಣ್ಣ ಎಂಬ ಬಿರುದು ಹೊಂದಿರುವ ದಕ್ಷಿಣ ಭಾರತ ಸಿನಿರಂಗದ ಖ್ಯಾತ ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರಿಗೆ ಇಂದು 48 ನೇ ಜನ್ಮದಿನದ ಸಂಭ್ರಮ. ತಮ್ಮ 20 ವರ್ಷದ ಸಿನಿ ಪಯಣದಲ್ಲಿ ಅವರು ನಿರ್ದೇಶನ ಮಾಡಿದ್ದು ಕೇವಲ 11 ಚಿತ್ರಗಳಾದರೂ ಅವರು ಭಾರತೀಯ ಚಿತ್ರರಂಗದ ನಂಬರ್ 1 ಡೈರೆಕ್ಟರ್ ಎಂಬ ಹಿರಿಮೆಯನ್ನು ಉಳಿಸಿಕೊಂಡಿದ್ದಾರೆ. ಅವರ ಜನ್ಮದಿನಕ್ಕೆ ಟಾಲಿವುಡ್, ಬಾಲಿವುಡ್ ಸೇರಿದಂತೆ ತಮಿಳು, ಕನ್ನಡ ಹಾಗೂ ಮಲೆಯಾಳಂ ಚಿತ್ರರಂಗದ ಗಣ್ಯರು, ಅಭಿಮಾನಿಗಳು […]

Advertisement

Wordpress Social Share Plugin powered by Ultimatelysocial