ಅಶ್ವತ್ಥನಾರಾಯಣ ಮಂದಿರವನ್ನು ಕಟ್ಟಲಿ ಎಂದ ಡಿಕೆಶಿ

ರಾಮನಗರದ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ನಿರ್ಮಾಣ ಮಾಡಲಾಗುವುದು ಎಂಬ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರ ಯೋಜನೆ ಕುರಿತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ಅಯೋಧ್ಯಾ ರಾಮಮಂದಿರವನ್ನಾದರೂ ಕಟ್ಟಲಿ, ಸೀತಾ ಮಂದಿರವನ್ನಾದರೂ ಕಟ್ಟಲಿ, ಬೇಕಿದ್ದರೆ ಅಶ್ವತ್ಥ ನಾರಾಯಣ ಮಂದಿರವನ್ನಾದರೂ ಕಟ್ಟಲಿ. ಮೂರು ವರ್ಷದ ಉಸ್ತುವಾರಿ ಸಚಿವರಾಗಿ ಬಂದು ಏನೋ ಕ್ಲೀನ್ ಮಾಡುತ್ತೇವೆ ಎನ್ನುತ್ತಿದ್ದರು. ಈಗ ಎಲ್ಲಾವನ್ನೂ ಕ್ಲೀನ್ ಮಾಡಿದ್ದಾರೆ. ಇಡೀ ರಾಮನಗರ ಕ್ಲೀನ್ ಮಾಡಿರುವುದನ್ನು ನೋಡಿದ್ದೇನೆ ಎಂದು ವ್ಯಂಗ್ಯ ಮಾಡಿದರು.ರಾಯಚೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ದೇವಸ್ಥಾನವನ್ನು ಮಾಡಲಿ. ಅಶ್ವತ್ಥನಾರಾಯಣ ಅವರ ಬಗ್ಗೆ ವಿಧಾನಸಭೆಯಲ್ಲೆ ಸಾಕಷ್ಟು ಚರ್ಚೆ ಆಗಿದೆ. ಅವರಿಗೂ ರಾಮನಗರಕ್ಕೂ ಏನು ಸಂಬಂಧ? ಈಗ ತುಂಬಾ ಮಾತನಾಡುವುದು ಬೇಡ ಎಂದರು.ತುಮಕೂರಿನ ಚಿಕ್ಕನಾಯಕನಹಳ್ಳಿ ಪಂಚರತ್ನಯಾತ್ರೆಯಲ್ಲಿ ಪ್ರತಿಕ್ರಿಯೆ ನೀಡಿದ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ಇವರದೆ ಸರ್ಕಾರ ಮೂರುವರೆ ವರ್ಷದಿಂದ ಇದೆ. ಆಗ ಮಾಡದೆ ಇದ್ದವರು, ಇವಾಗ ಮಾಡುತ್ತಾರ? ಇವಾಗ ದಕ್ಷಿಣ ಭಾರತದಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಘೋಷಣೆ ಮಾಡುತ್ತಾರೆ. ಇನ್ನು ಮೂರು ತಿಂಗಳಿಗೆ ಚುನಾವಣೆ ನರುತ್ತಿದೆ. ಇವರನ್ನೇ ಹೊರಗೆ ಇಡುವ ಪ್ರಯತ್ನವನ್ನು ಜನರು ಮಾಡುತ್ತಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಆರ್‌. ವಿ. ದೇಶಪಾಂಡೆ ಜನ್ಮ ದಿನಾಂಕದ ಕುರಿತು ಅನುಮಾನ

Fri Dec 30 , 2022
ಮಾಜಿ ಸಚಿವ ಆರ್‌. ವಿ. ದೇಶಪಾಂಡೆ ಅವರ ಜನ್ಮ ದಿನಾಂಕದ ಕುರಿತು ಅನುಮಾನಗಳಿದ್ದು, ಇದರ ತನಿಖೆ ನಡೆಸಲು ಸದನ ಸಮಿತಿ ರಚನೆ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಹಾಗೆಂದು ಇದು ಗಂಭೀರವಾಗಿ ಮಾಡಿದ ಆರೋಪವೂ ಅಲ್ಲ, ನಿಜವಾಗಿ ಸದನ ಸಮಿತಿಗೆ ಒತ್ತಾಯವನ್ನೂ ಮಾಡಿಲ್ಲ.ಆರ್‌. ವಿ. ದೇಶಪಾಂಡೆ ಅವರಿಗೆ 2022ನೇ ಸಾಲಿನ ಉತ್ತಮ ಶಾಸಕ ಪ್ರಶಸ್ತಿಯನ್ನು ಪ್ರದಾನ ಮಾಡಿದ ನಂತರ ಸಿದ್ದರಾಮಯ್ಯ ಹೇಳಿದ ಆತ್ಮೀಯ ಮಾತು ಇದು.ಪ್ರಶಸ್ತಿ ಪ್ರದಾನದ ನಂತರ […]

Advertisement

Wordpress Social Share Plugin powered by Ultimatelysocial