ಬೆಂಗಳೂರು ವಿ.ವಿ ಕುಲಪತಿ ತಪ್ಪು ಮಾಡಿಲ್ಲ: ಅಶ್ವತ್ಥನಾರಾಯಣ

 

ಬೆಂಗಳೂರು: ‘ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಅನುಮೋದನೆ ಪಡೆದ ಬಳಿಕವೇ ಅಲ್ಲಿನ ಕುಲಪತಿ ₹ 29 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದ್ದಾರೆ.

‘ವಿಶ್ವವಿದ್ಯಾಲಯದ ವ್ಯಾಪ್ತಿಯ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿಗೆ (ಯುವಿಸಿಇ) ಈ ಅನುದಾನ ಒದಗಿಸಿದ್ದು, ಕುಲಪತಿಯಿಂದ ಯಾವುದೇ ತಪ್ಪು ನಡೆದಿಲ್ಲ.

ಸರಿಯಾದ ಮಾಹಿತಿ ಇಲ್ಲದೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಅಶ್ವತ್ಥ ನಾರಾಯಣ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ವಿಶ್ವವಿದ್ಯಾಲಯದ ಅಭಿವೃದ್ಧಿ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದ (ಯುವಿಸಿಇ) ಮೆಕ್ಯಾನಿಕಲ್‌ ವಿಭಾಗದ ಕಟ್ಟಡ ನಿರ್ಮಾಣಕ್ಕೆ ವರ್ಗಾಯಿಸಲು ನಿರ್ಧಾರ ಕೈಗೊಂಡಿರುವುದಕ್ಕೆ ಆಕ್ಷೇಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಇಬ್ಬರು ಸಂಶೋಧನಾ ವಿದ್ಯಾರ್ಥಿಗಳ ವಿರುದ್ಧ ಹಣಕಾಸು ಅಧಿಕಾರಿ (ಪ್ರಭಾರ) ಆರ್‌. ಜಯಲಕ್ಷ್ಮಿ ಅವರು ಜ್ಞಾನಭಾರತಿ ಪೊಲೀಸ್‌ ಠಾಣೆಗೆ ನೀಡಿರುವ ದೂರು ವಾಪಸ್ ಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 31ರಂದು ತೈಲ ಕಂಪನಿಗಳಿಂದ ಪೆಟ್ರೋಲ್-ಡೀಸೆಲ್ ಖರೀದಿಸುವುದಿಲ್ಲ ಡೀಲರ್ಸ್

Tue May 31 , 2022
  ನವದೆಹಲಿ, ಮೇ 30: ತೈಲ ಮಾರುಕಟ್ಟೆ ಕಂಪನಿಗಳಿಂದ 24 ರಾಜ್ಯಗಳ 70,000 ಮಳಿಗೆಗಳು ಮೇ 31ರ ಮಂಗಳವಾರ ಯಾವುದೇ ಇಂಧವನ್ನು ಖರೀದಿಸುವುದಿಲ್ಲ ಎಂದು ಪೆಟ್ರೋಲ್ ಪಂಪ್ ಡೀಲರ್ಸ್ ಅಸೋಸಿಯೇಷನ್ ಘೋಷಿಸಿದೆ. ದೆಹಲಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಸಂಘದ ಸದಸ್ಯರು ತೈಲ ಕಂಪನಿಗಳಿಂದ (ಒಎಂಸಿ) ಇಂಧನ ಖರೀದಿಸುವುದಿಲ್ಲ ಎಂಬ ಅಭಿಯಾನ ನಡೆಸುವುದಾಗಿ ತಿಳಿಸಿವೆ. ಕಳೆದ 5 ವರ್ಷಗಳಿಂದ ಡೀಲರ್ ಮಾರ್ಜಿನ್‌ಗಳನ್ನು ಹೆಚ್ಚಿಸದಿರುವುದು ಮತ್ತು ಕೇಂದ್ರ ಸರ್ಕಾರವು ದಿಢೀರಾಗಿ ಅಬಕಾರಿ ಸುಂಕಗಳನ್ನು […]

Advertisement

Wordpress Social Share Plugin powered by Ultimatelysocial