ನೀವು ಚುನಾವಣೆಗೆ ಸ್ಪರ್ಧಿಸಿದಾಗ ಜನರ ಬೆಂಬಲ ಮುಖ್ಯವೇ ಹೊರತು, ಎಷ್ಟು ಕ್ಷೇತ್ರಗಳಿಂದ ಸ್ಪರ್ಧಿಸುತ್ತೀರಿ ಎಂಬುದು ಮುಖ್ಯವಲ್ಲ ಎಂದು ತಿಳಿಸಿದರು. ಇದೇ ವೇಳೆ ಸ್ಯಾಂಟ್ರೋ ರವಿ ಪ್ರಕರಣ ಕುರಿತು ಮಾತನಾಡಿ, ಹಲವಾರು ಸಚಿವರು, ಶಾಸಕರು ಮತ್ತು ಗೃಹ ಸಚಿವರು ಶಾಮೀಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯಿಸಿ, ಯತ್ನಾಳ್ ಅವರು ಕೆಲವೊಮ್ಮೆ ಅರ್ಥಪೂರ್ಣವಾಗಿ ಮಾತನಾಡುತ್ತಾರೆ. ಹೀಗಾಗಿಯೇ ಕೇಂದ್ರ ಬಿಜೆಪಿ ನಾಯಕತ್ವವು ಅವರ ಬೆನ್ನಿಗೆ ನಿಲ್ಲುತ್ತದೆ.
ಬಿಜೆಪಿ ನಾಯಕರು ಯತ್ನಾಳ್ ವಿರುದ್ಧ ವರ್ತಿಸುತ್ತಿಲ್ಲ, ಏಕೆಂದರೆ ಎಲ್ಲಿ ತಮ್ಮ ಗುಟ್ಟು ಬಯಲಾಗುವುದೋ ಎಂಬ ಭಯ ಅವರಿಗಿದೆ ಎಂದು ವ್ಯಂಗ್ಯವಾಡಿದರು. ಆಡಳಿತ ನಡೆಸುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿದೆ: ಡಿಕೆ.ಶಿವಕುಮಾರ್ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಬೊಮ್ಮಾಯಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ದಯನೀಯವಾಗಿ ವಿಫಲವಾಗಿರುವ ಕಾರಣ ಬಿಜೆಪಿ 2023 ರ ಚುನಾವಣೆಯನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಎದುರಿಸಬೇಕಾಗಿದೆ ಎಂದು ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಅದಕ್ಕೆ ರಾಷ್ಟ್ರೀಯ ನಾಯಕರ ಅಗತ್ಯವಿದೆ.
ಬಿಜೆಪಿ ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಗಗನಕ್ಕೇರುತ್ತಿರುವ ಬೆಲೆಗಳನ್ನು ತಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು. ಆಕಾಂಕ್ಷಿಗಳಿಗೆ ಪಕ್ಷದ ಟಿಕೆಟ್ ಹಂಚಿಕೆ ಕುರಿತು ಪ್ರತಿಕ್ರಿಯಿಸಿ, ಫೆಬ್ರವರಿ 2 ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಅಂತಿಮ ಪಟ್ಟಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಒಬ್ಬ ಅಭ್ಯರ್ಥಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು ಎಂಬುದರ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದರು.
https://play.google.com/store/apps/details?id=com.speed.newskannada