ದಾವಣಗೆರೆ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಆಮ್ ಆದ್ಮಿ ಪಾರ್ಟಿ ಕೂಡ ದಾವಣಗೆರೆಯಲ್ಲೇ ಸಮಾವೇಶ ನಡೆಸಲು ನಿರ್ಧರಿಸಿದೆ.
ಹೀಗಾಗಿ ಫೆ.26 ರಂದು ಆಮ್ ಆದ್ಮಿ ಪಕ್ಷದ ವರಿಷ್ಠ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದಾವಣಗೆರೆಗೆ ಆಗಮಿಸಲಿದ್ದಾರೆ.
ಆಮ್ ಆದ್ಮಿ ಪಕ್ಷದ್ದು ದೇಶವನ್ನ ಭ್ರಷ್ಟಾಚಾರ ಮುಕ್ತ ಮಾಡುವ ಸಂಕಲ್ಪ ತೊಟ್ಟಿದ್ದಾರೆ. ಇದೇ ಕಾರಣಕ್ಕೆ ರಾಜ್ಯದ ನಿಜವಾದ ಕೇಂದ್ರ ಸ್ಥಳವಾದ ದಾವಣಗೆರೆ ಆಯ್ಕೆ ಮಾಡಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ಪಾಲ್ಗೊಳ್ಳುವ ಸಮಾವೇಶದ ಸ್ಥಳ ಹಾಗೂ ದಿನಾಂಕದ ಬಗ್ಗೆ ಇಷ್ಟರಲ್ಲಿಯೇ ಮಾಹಿತಿ ನೀಡಲಾಗುವುದು ಎಂದರು.
ಇನ್ನು ವಿಧಾನ ಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಆರಂಭಿಸಲು ದಾವಣಗೆರೆ ಆಯ್ಕೆ ಆಗಿದೆ. ಈ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇನ್ನು ಸ್ಥಳ ನಿಗದಿಯಾಗಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ. ವಿಶ್ವನಾಥ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada