ಸೆಂಚುರಿಯನ್ ಸೂಪರ್ಸ್ಪೋರ್ಟ್ ಪಾರ್ಕ್ನಲ್ಲಿ ಮೊದಲ ದಿನ ಉತ್ತಮ ಆರಂಭ ಪಡೆದಿರುವ ಟೀಂ ಇಂಡಿಯಾ, ಉತ್ತಮ ಮೊತ್ತ ಕಲೆಹಾಕುವ ಎಲ್ಲಾ ಮುನ್ಸೂಚನೆ ನೀಡಿದೆ. ಎರಡನೇ ದಿನದಾಟವು ಮಳೆಯಿಂದಾಗಿ ವಿಳಂಭವಾಗಿದ್ದರೂ, ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ಮನ್ಗಳ ಪ್ರದರ್ಶನ ಟೆಸ್ಟ್ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಬಡಿಸಿದೆ.
ಕೆ.ಎಲ್ ರಾಹುಲ್ ಭರ್ಜರಿ ಶತಕದ ಜೊತೆಗೆ ಮಯಾಂಕ್ ಅಗರ್ವಾಲ್ ಅರ್ಧಶತಕದ ಕೊಡುಗೆ ತಂಡದ ಮೊತ್ತ ಹೆಚ್ಚಿಸುವಲ್ಲಿ ಕಾರಣವಾಗಿದೆ. ಕೊಹ್ಲಿ ಇನ್ನಿಂಗ್ಸ್ 35 ರನ್ಗೆ ಮುಕ್ತಾಯಗೊಂಡ್ರೆ, ಚೇತೇಶ್ವರ ಪೂಜಾರ ಶೂನ್ಯಕ್ಕೆ ಔಟಾಗಿ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಆದ್ರೆ ಸಾಕಷ್ಟು ಟೀಕೆಗಳ ನಡುವೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಅಜಿಂಕ್ಯ ರಹಾನೆ ತಾಳ್ಮೆಯ ಅಜೇಯ 40ರನ್ಗಳ ಕೊಡುಗೆ ಟೀಂ ಇಂಡಿಯಾವನ್ನ ಸುಭದ್ರ ಸ್ಥಿತಿಗೆ ತಲುಪಿಸಿತ್ತು.
81 ಎಸೆತಗಳನ್ನ ಎದುರಿಸಿದ ಅಜಿಂಕ್ಯಾ 8 ಸೊಗಸಾದ ಬೌಂಡರಿಗಳ ಜೊತೆಗೆ ಅಜೇಯ 40 ರನ್ ಕಲೆಹಾಕಿ ಓಪನರ್ ಕೆ.ಎಲ್ ರಾಹುಲ್ಗೆ ಉತ್ತಮ ಸಾಥ್ ನೀಡಿದ್ರು. ಈ ಜೋಡಿ ನಾಲ್ಕನೇ ವಿಕೆಟ್ಗೆ 131 ಎಸೆತಗಳಲ್ಲಿ 73 ರನ್ ಕಲೆಹಾಕಿದೆ.
ಬ್ಯಾಟಿಂಗ್ ವೇಳೆ ಪದೇ ಪದೇ ಈ ಮಾತನ್ನ ಹೇಳುತ್ತಿದ್ದ ರಹಾನೆಟೀಕಾಕಾರರ ಬಾಯಿಗೆ ಆಹಾರವಾಗಿರುವ ಟೀಂ ಇಂಡಿಯಾ ಮಾಜಿ ಉಪನಾಯಕ ಅಜಿಂಕ್ಯ ರಹಾನೆ ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನೀಡಲೇಬೇಕೆಂಬ ಪಣತೊಟ್ಟಿದ್ದರು. ಟೀಂ ಇಂಡಿಯಾ ಪ್ಲೇಯಿಂಗ್ 11ನಲ್ಲಿ ತನ್ನ ಸ್ಥಾನ ಉಳಿಸುಕೊಳ್ಳುವಲ್ಲಿ ರಹಾನೆ ಇನ್ನಿಂಗ್ಸ್ ಬಹಳ ಪ್ರಮುಖ ಪಾತ್ರವಹಿಸಿದೆ. ಹೀಗಾಗಿ ಪ್ರತಿ ಎಸೆತವನ್ನ ಅತ್ಯಂತ ಜಾಗರೂಕತೆಯಿಂದ ಎದುರಿಸುತ್ತಿದ್ದ ಅಜಿಂಕ್ಯ ರಹಾನೆ ” ವಾಚ್ ದಿ ಬಾಲ್” ಎಂದು ತಮ್ಮಲ್ಲೇ ಗೊಣಗುತ್ತಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: