ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮೊಬೈಲ್ ಕದ್ದ ಶಂಕೆಯ ಮೇಲೆ ಇಬ್ಬರುದೊಣ್ಣೆ ಮತ್ತು ಸುಟ್ಟ ಮರದ ದಿಮ್ಮಿಗಳಿಂದ ಥಳಿಸಿದ್ದಾರೆ!

 ಗುಣಾ,ಫೆ.8- ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮೊಬೈಲ್ ಕದ್ದ ಶಂಕೆಯ ಮೇಲೆ ಇಬ್ಬರು ವ್ಯಕ್ತಿಗಳು ದಲಿತ ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ ದೊಣ್ಣೆ ಮತ್ತು ಸುಟ್ಟ ಮರದ ದಿಮ್ಮಿಗಳಿಂದ ಥಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಲಾಡ್ಪುರ ಗ್ರಾಮದಲ್ಲಿ ನಡೆದಿರುವ ಮಾಹಿತಿ ಇದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇಬ್ಬರು ಒಬ್ಬ ವ್ಯಕ್ತಿಯನ್ನು ಥಳಿಸಿ, ನಿಂದಿಸುತ್ತಿದ್ದಾರೆ. ಉಳಿದಂತೆ ಸುತ್ತಲು ನಿಂತವರು ಮೂಕ ಪ್ರೇಕ್ಷಕರಾಗಿದ್ದಾರೆ. ಥಳಿತಕ್ಕೆ ಒಳಗಾದ ವ್ಯಕ್ತಿ ಪೊಲೀಸ್‍ರಿಗೆ ದೂರು ನೀಡಿದ್ದಾರೆ.ಮೊಬೈಲ್ ಫೋನ್ ಕದ್ದಿದ್ದಾನೆಂದು ಆರೋಪಿಸಿ ದೊಣ್ಣೆ ಮತ್ತು ಸುಡುವ ಮರದ ದಿಮ್ಮಿಗಳಿಂದ ಥಳಿಸಲಾಗಿದೆ ಎಂದು ವಿಜಯನಗರ ಪೊಲೀಸ್ ಠಾಣೆ ಪ್ರಭಾರಿ ರಾಕೇಶ್ ಕುಮಾರ್ ಗುಪ್ತಾ ಹೇಳಿದ್ದಾರೆ.ಆರೋಪಿಗಳನ್ನು ಹೆತ್ರಾಮ್ ಗುರ್ಜರ್ ಮತ್ತು ಗೋಲು ಮುಸಲ್ಮಾನ್ ಎಂದು ಗುರುತಿಸಲಾಗಿದೆ. ದೂರು ದಾಖಲಾದ ಒಂದು ಗಂಟೆಯೊಳಗೆ ಗುರ್ಜರ್ನನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಿ ನೌಕರರಿಗೆ ಸಂತೋಷದ ವಿಷಯ ಶೀಘ್ರದಲ್ಲೇ ಫಿಟ್ಮೆಂಟ್ ಅಂಶ ಹೆಚ್ಚಳ;

Tue Feb 8 , 2022
ನವದೆಹಲಿ:7 ನೇ ವೇತನ ಆಯೋಗದ(7th pay commission) ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್. ಮಾಧ್ಯಮ ವರದಿಗಳ ಪ್ರಕಾರ ಕೇಂದ್ರ ಸರ್ಕಾರವು ಶೀಘ್ರದಲ್ಲೇ ಕೇಂದ್ರ ಮತ್ತು ರಾಜ್ಯ ನೌಕರರ ಫಿಟ್‌ಮೆಂಟ್ ಅಂಶವನ್ನು ಹೆಚ್ಚಿಸಬಹುದು ಎಂದು ಘೋಷಿಸಬಹುದು.   ಫಿಟ್‌ಮೆಂಟ್ ಅಂಶದ ಹೆಚ್ಚಳವು ಕೇಂದ್ರ ನೌಕರರ ಕನಿಷ್ಠ ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಫಿಟ್‌ಮೆಂಟ್ ಅಂಶವನ್ನು 2.57 ರಿಂದ 3.68 ಪಟ್ಟು ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ಹಲವಾರು ಕೇಂದ್ರ ಸರ್ಕಾರಿ ನೌಕರರ ಸಂಘಗಳು ಮುಂದಿಟ್ಟಿವೆ.ಕನಿಷ್ಠ […]

Advertisement

Wordpress Social Share Plugin powered by Ultimatelysocial