ನವದೆಹಲಿ: ಕೊರೊನಾ ವೈರಸ್ನಿಂದ ದೂರವಿರಲು ಆರೋಗ್ಯ ಸೇತು ಆ್ಯಪ್ ಬಳಸಿ ಎಂದು ಕೇಂದ್ರ ಸರ್ಕಾರ ಈ ಮೊದಲು ಸಾರ್ವಜನಿಕರಲ್ಲಿ ಮನವಿ ಮಾಡುತ್ತಿತ್ತು. ಬಳಿಕ ಇದನ್ನು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿ ಆದೇಶಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಕೆಲಸಕ್ಕೆ ಆರೋಗ್ಯ ತೆರಳಬೇಕೆಂದರೆ ಆರೋಗ್ಯ ಸೇತು ಆ್ಯಪ್ ಹೊಂದಿರಲೇಬೇಕು. ಅದರಲ್ಲಿ ವಿವರಗಳನ್ನು ದಾಖಲಿಸಿದ ಬಳಿಕ ಅದು ನೀವು ಸುರಕ್ಷಿತವೋ ಇಲ್ಲವೋ ಎಂಬುದನ್ನು ತಿಳಿಸುತ್ತದೆ. ಸುರಕ್ಷಿತ ಅಥವಾ ಅಪಾಯ ಕಡಿಮೆ ಎಂದು ತೋರಿಸಿದರಷ್ಟೇ ಕೆಲಸಕ್ಕೆ ತೆರಳಬೇಕು […]
ನ್ಯೂಯಾರ್ಕ್: ಕೊರೊನಾ ವೈರಸ್ ಮಾನವ ನಿರ್ಮಿತ ಇದು ಚೀನಾ ಲ್ಯಾಬ್ನಲ್ಲಿಯೇ ಸೃಷ್ಟಿಯಾಗಿದೆ ಎಂದು ಅಮೆರಿಕ ಹೇಳುತ್ತಿದ್ದು, ಆದರೆ ಯಾವುದೇ ಸಾಕ್ಷ್ಯಗಳು ಅವರ ಬಳಿ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಅಮೆರಿಕಾದಲ್ಲಿ ನಾವು ಆತಂಕದಿಂದ ಬದುಕ್ತಿದ್ದೀವಿ, ಭಾರತ ನೋಡಿ ಅಮೆರಿಕಾ ಬುದ್ಧಿ ಕಲಿಯಬೇಕು ಎಂದು ಭಾರತೀಯ ಮೂಲದ ಅಮೇರಿಕಾ ನಿವಾಸಿ ಹೇಳಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಕೊರೊನಾ ನೈಸರ್ಗಿಕವೇ ಅಥವಾ ಮಾನವ ನಿರ್ಮಿತವೇ ಎಂಬ ವಾದ ವಿವಾದಗಳು ನಡೆಯುತ್ತಲೇ […]
ಅಹಮದಾಬಾದ್: ಏಡ್ಸ್ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಪವಾಡ ರೀತಿಯಲ್ಲಿ ಕೊರೊನಾ ಸೋಂಕಿನಿಂದ ಪಾರಾಗಿದ್ದಾನೆ. ಅಹಮದಾಬಾದ್ನ ಗ್ರಾಮದ ೨೭ ವರ್ಷದ ವ್ಯಕ್ತಿ ಕಳೆದ ಕೆಲ ವರ್ಷಗಳಿಂದ ಹೆಚ್ಐವಿ ಸೋಂಕಿನಿಂದ ಬಳಲುತ್ತಿದ್ದರು. ಇವರಿಗೆ ಮಹಾಮಾರಿ ಕೊರೊನಾ ವೈರಸ್ ಕೂಡ ತಗುಲಿದ್ದು, ಸಾವನ್ನಪ್ಪುವುದು ಖಚಿತ ಎಂದು ಹೇಳಲಾಗ್ತಿತ್ತು. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ದಾಖಲಾಗಿ ಅವರು ಡೆಡ್ಲಿ ವೈರಸ್ನಿಂದ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ಬಂದಿದ್ದಾರೆ. ಈ ವೇಳೆ, ಸ್ಥಳೀಯ ಜನರು ಅವರ ಮೇಲೆ ಹೂಮಳೆ […]
ನವೆದಹಲಿ : ಲಾಕ್ ಡೌನ್ ಸಡಿಲಿಕೆಯ ನಡುವೆ, ಜೆಇಇ ಮತ್ತು ನೀಟ್ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದೆ. ಜುಲೈ ೧೮ರಿಂದ ಜೆಇಇ ಪರೀಕ್ಷೆ ಆರಂಭವಾಗಲಿದ್ದು, ಜುಲೈ ೨೩ರವರೆಗೆ ನಡೆಯಲಿದೆ. ಜುಲೈ ೨೬ರಂದು ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಹೆಚ್ ಆರ್ ಡಿ ಸಚಿವ ರಮೇಶ್ ಪೊಕ್ರಿಯಾಳ್, ಜಾಯಿಂಟ್ ಎಟೆರೆನ್ ಎಕ್ಸಾಂ(ಜೆಇಇ)ಯ ಮುಖ್ಯ ಪರೀಕ್ಷೆಯನ್ನು ಜುಲೈ ೧೮ರಿಂದ ೨೩ರ ವರೆಗೆ ನಡೆಸಲಾಗುತ್ತದೆ. ನ್ಯಾಷನಲ್ […]
ನವದೆಹಲಿ: ತಜ್ಞರ ಪ್ರಕಾರ, ತಂಬಾಕು ಸೇವನೆಯಿಂದಾಗಿ ಭಾರತದಲ್ಲಿ ಪ್ರತಿವರ್ಷ ಸುಮಾರು ೧೨ ಲಕ್ಷ ಸಾವುಗಳು ಸಂಭವಿಸುತ್ತವೆ. ಅಲ್ಲದೆ, ೫೦ ಪ್ರತಿಶತ ಕ್ಯಾನ್ಸರ್ಗೆ ಹಾಗೂ ೯೦ ಪ್ರತಿಶತದಷ್ಟು ಬಾಯಿ ಕ್ಯಾನ್ಸರ್ಗೆ ಈ ತಂಬಾಕು ಕಾರಣವಾಗಿದೆ. ಆದ ಕಾರಣ ಎಲ್ಲಾ ತಂಬಾಕು ಉತ್ಪನ್ನಗಳ ಪ್ಯಾಕೆಟ್ಗಳ ಮೇಲೆ ಆರೋಗ್ಯ ಸಂಬಂಧ ಎಚ್ಚರಿಕೆಯ ಹೊಸ ಚಿತ್ರವನ್ನು ಮುದ್ರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಈ ವರ್ಷ ಸೆಪ್ಟೆಂಬರ್ ೧ ರ ನಂತರ ಮೊದಲು ಸೂಚಿಸಿದ […]
ಬೆಂಗಳೂರು:ನಾಡೋಜ ನಿಸ್ಸಾರ್ ಅಹ್ಮದ್ ಇಂದು ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ನಿಧನರಾಗಿದ್ದಾರೆ. ೮೪ ರ್ಷದ ನಿಸ್ಸಾರ್ ಅಹ್ಮದ್ ಕೆಲವು ದಿನಗಳಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ರು. ಅಮೇರಿಕಾದಲ್ಲಿ ತಮ್ಮ ಪುತ್ರ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ರು. ಕೊವಿಡ್ ವೈರಸ್ ನಿಂದಾಗಿ ಮಗನ ಅಂತಿಮ ರ್ಶನ ಪಡೆಯೋದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಪುತ್ರ ಶೋಕ ಕಾಡಿತ್ತು. ಅಲ್ಲದೆ ವಯೋ ಸಹಜ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ರು. ನವ್ಯ ಸಾಹಿತ್ಯ ಪ್ರಕಾರದಲ್ಲಿ ಕೃಷಿ ಮಾಡಿದ್ದ ನಿಸ್ಸಾರ್ ಅಹ್ಮದ್ ನಿತ್ಯೋತ್ಸವ […]
ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಕಾಯಿಲೆ ಎದುರಿಸಿದ ಸನ್ನೀವೇಶಗಳನ್ನು ಬ್ರಿಟನ್ನ ದಿ ಸನ್ ಎಂಬ ಪತ್ರಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಸೋಂಕು ತಗುಲಿದ್ದು, ಚಿಕಿತ್ಸೆ ಪಡೆದಿದ್ದು, ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ ಎಂಬ ಅರಿವಾಗಿದ್ದು, ವೈದ್ಯರು ಸಾವಿನ ಘೋಷಣೆಗೆ ಸಿದ್ಧರಾಗಿದ್ದ ವಿಷಯವನ್ನುಹಂಚಿಕೊಂಡಿದ್ದಾರೆ . ಸ್ಟಾಲಿನ್ ಮಾದರಿಯ ಸಾವಿನ ಸನ್ನಿವೇಶವನ್ನು ನಿಭಾಯಿಸಲು ವೈದ್ಯರು ಸಿದ್ಧತೆ ಮಾಡುತ್ತಿದ್ದರು. ಒಂದು ವೇಳೆ ಪರಿಸ್ಥಿತಿ […]
ಕೊರೊನಾ ವೈರಸ್ ಮಾನವ ನಿರ್ಮಿತ. ಅದು ಯಾವುದೋ ಪ್ರಾಣಿಯೋ ಅಥವಾ ಪಕ್ಷಿಗಳಿಂದ ಸೃಷ್ಟಿಯಾದ ವೈರಸ್ ಅಲ್ಲ. ಜಗತ್ತಿನ ಪ್ರಬಲ ರಾಷ್ಟ್ರಗಳನ್ನು ನೇರವಾಗಿ ಗೆಲ್ಲಲಾಗದ ಚೀನಾ ತನ್ನ ಕಪಟ ಬುದ್ಧಿಯಿಂದ ಜೈವಿಕ ಯುದ್ಧದ ಮೊರೆ ಹೋಗಿ, ಈ ಕೊರೊನಾ ವೈರಸ್ಅನ್ನು ಸೃಷ್ಟಿಸಿದೆ. ಚೀನಾದ ಪ್ರಯೋಗಾಲಯದಲ್ಲಿ ಈ ವೈರಸ್ ಲೀಕ್ ಆಗಿದೆ. ಇದರಿಂದಾಗಿ ಮಾಡಿದ್ದುಣ್ಣೋ ಮಹರಾಯ ಅನ್ನುವಂತೆ ಮೊದಲು ತಾನೇ ಬಾಧೆಪಟ್ಟ ಚೀನಾ, ಮತ್ತೆ ಜಗತ್ತಿಗೆ ಸೋಂಕು ಹಬ್ಬಿದೆ. ಹೀಗಾಗಿ ಜಗತ್ತಿನ ಇತರ […]
ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನ ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಲಾಕ್ ಡೌನ್ ಪರಿಣಾಮ ಸದ್ಯ ಉದ್ಯಾನಕ್ಕೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ. ಪ್ರಾಣಿಗಳನ್ನು ದತ್ತು ಪಡೆಯುವ ಮೊತ್ತದ ಆಧಾರದ ಮೇಲೆ ಗಿಫ್ಟ್ ವೋಚರ್, ನಾಮಫಲಕದಲ್ಲಿ ಹೆಸರು ಪ್ರದರ್ಶನ ಮುಂತಾದ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಯಾವ ಪ್ರಾಣಿಗಳನ್ನು ದತ್ತು ಪಡೆಯಬಹುದು ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕಾಳಿಂಗ ಸರ್ಪ, ಹೆಬ್ಬಾವುಗಳನ್ನು ವಾರ್ಷಿಕ […]
ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದರಿಂದ ಬಹುತೇಕ ಜನ ಊರಿಗೆ ಮರಳಿದ್ದಾರೆ. ಹೀಗೆ ಹಳ್ಳಿಗೆ ಬಂದ ಯುವಕರು, ಕಾರ್ಮಿಕರಲ್ಲಿ ಹೆಚ್ಚಿನ ಸಂಖ್ಯೆಯ ಜನ ಮತ್ತೆ ನಗರಗಳಿಗೆ ತೆರಳುವುದು ಅನುಮಾನವೆನ್ನಲಾಗಿದೆ. ಹಳ್ಳಿಗೆ ಬಂದ ಬಹುತೇಕರು ಸ್ವಂತ ಊರಿನಲ್ಲೇ ಉಳಿಯಲಿದ್ದಾರೆ. ಇದಕ್ಕೆ ಪೂರಕವೆನ್ನುವಂತೆ ಈ ವರ್ಷ ಕೃಷಿ ಚಟುವಟಿಕೆ ಚುರುಕಾಗಿದೆ. ಪ್ರತಿ ವರ್ಷ ಏಪ್ರಿಲ್ ತಿಂಗಳ ವೇಳೆಗೆ ೭೦೦೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೇ ಆಗುತ್ತಿತ್ತು. ಈ ಸಲ ೧೬,೦೦೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿರುವುದೇ ಇದಕ್ಕೆ […]