ಕೇರಳ: ಕೋವಿಡ್ ಸೋಂಕಿನ ನಡುವೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪಿವೆ. ಆದರೆ ಈ ಪ್ರಕರಣಕ್ಕೆ ಫೆಲೆನ್ ಪಾರ್ವೋ ವೈರಸ್ ಕಾರಣ ಎಂಬುದು ಗೊತ್ತಾಗಿದೆ. ಜಿಲ್ಲೆಯ ಮಾನಂದವಾಡಿ ಎಂಬಲ್ಲಿ ಕಳೆದ ಮೂರು ದಿನಗಳಲ್ಲಿ ೧೫ಕ್ಕೂ ಹೆಚ್ಚು ಬೆಕ್ಕುಗಳು ಮೃತ ಪಟ್ಟಿವೆ. ಹೀಗೆ ಸಾವಿಗೀಡಾದ ಬೆಕ್ಕುಗಳ ದೇಹದ ಅಸ್ಥಿಪಂಜರ ಸಂಗ್ರಹಿಸಿದ ಪಶುಸಂಗೋಪನಾ ಇಲಾಖೆ ವೈದ್ಯರು, ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಬೆಕ್ಕುಗಳ ಸಾವು ವೈರಸ್‌ನಿಂದ ಸಂಭವಿಸಿದೆ ಎಂಬುದು ದೃಢಪಟ್ಟಿದೆ. ಈ ಸುದ್ದಿ ಕೇಳಿದ ಜನರು […]

ಧಾರವಾಡ: ಕೊರೊನಾ ಕಂಟಕ ವಿಶ್ವದಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಜನ ಗೃಹ ಬಂಧನದಲ್ಲಿದ್ದಾರೆ. ಇತ್ತ ಮದುವೆ ನಿಶ್ಚಯವಾಗಿ ಹಸೆಮಣೆ ಏರಬೇಕಿದ್ದ ಬಹುತೇಕ ಜೋಡಿಗಳು ಮದುವೆ ಮುಂದೂಡಿದ್ದರೆ, ಕೆಲವರು ಸರಳವಾಗಿ ವಿವಾಹವಾಗಿದ್ದಾರೆ. ಆದ್ರೆ ಧಾರವಾಡದಲ್ಲಿ ಡಿಫರೆಂಟ್ ಮದುವೆ ನಡೆದಿದೆ. ಲಾಕ್‌ಡೌನ್ ಪಾಲಿಸುವುದರೊಂದಿಗೆ ಈ ಜೋಡಿ ಆನ್‌ಲೈನ್‌ನಲ್ಲಿಯೇ ಸತಿ-ಪತಿ ಆಗಿದ್ದಾರೆ. ಧಾರವಾಡದ ಯುವಕ ಇಮ್ರಾನ್ -ಕೊಪ್ಪಳ ತಾಜಮಾ ಬೇಗಂ ಎಂಬುವರನ್ನು ವಿಡಿಯೋ ಕಾಲ್ ಮೂಲಕ ವರಿಸಿದ್ದಾರೆ. ಈ ಇಬ್ಬರ ಅಂತರ್ಜಾಲ ಮದುವೆಗೆ ಹಿರಿಯರು […]

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಅಗತ್ಯ ಸೇವೆ ಸಲ್ಲಿಸಲು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ರೋಬೋಗಳನ್ನ ತಯಾರಿಸಲು ಮುಂದಾಗಿದೆ. ಕೊರೊನಾ ಸೋಂಕಿತರೊಂದಿಗೆ ವೈದ್ಯರು ಮತ್ತು ಇತರೆ ಆರೋಗ್ಯ ಕಾರ್ಯಕರ್ತರು ಪದೇ ಪದೇ ಸಂಪರ್ಕ ಹೊಂದುವುದರಿಂದ ಅವರಿಗೂ ಸೋಂಕು ತಗುಲುವ ಸಾಧ್ಯತೆಯಿದೆ. ಹೀಗಾಗಿ, ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವಿಶೇಷ ವಾರ್ಡ್ಗಳಲ್ಲಿ, ಪ್ರಾಥಮಿಕ ಉಪಚಾರ ಹಾಗೂ ಆರೈಕೆಗೆ ಈ ರೋಬೋಗಳನ್ನು ಬಳಸಬಹುದು ಎಂದು ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು […]

  ನವದೆಹಲಿ: ರಾಸಾಯನಿಕ ಸೋಂಕು ನಿವಾರಕಗಳ ಸಿಂಪಡಣೆಯಿಂದ ದೈಹಿಕ ಅಥವಾ ಮಾನಸಿಕ ಹಾನಿ ಉಂಟಾಗಬಹುದು ಎಂದು ಕೇಂದ್ರ ಆರೋಗ್ಯ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಕೋರೊನಾ ತಡೆಗಟ್ಟುವ ಉದ್ದೇಶದಿಂದ ದೇಶದ ಅನೇಕ ಪ್ರದೇಶಗಳ ತರಕಾರಿ ಮಾರುಕಟ್ಟೆ, ಸರಕಾರಿ ಆಸ್ಪತ್ರೆಗಳಲ್ಲಿ ರೋಗನಿರೋಧಕ ಸುರಂಗಗಳನ್ನು ಸ್ಥಾಪಿಸಿರುವ ಸಂದರ್ಭದಲ್ಲಿ ಸಚಿವಾಲಯ ಈ ಎಚ್ಚರಿಕೆ ನೀಡಿದೆ. ಈ ರೀತಿಯಾಗಿ ಸೋಂಕು ನಿವಾರಕಗಳ ಸಿಂಪಡಣೆ ಮಾಡುವುದರಿಂದ ಜನರಲ್ಲಿ ನಾವು ಸುರಕ್ಷಿತರಾಗಿದ್ದೇವೆ ಎನ್ನುವ ತಪ್ಪು ಕಲ್ಪನೆಯನ್ನು ಮೂಡಿಸುತ್ತದೆ. […]

ನವದೆಹಲಿ:  ಕೊರೊನಾ ವೈರಸ್ ಸೋಂಕಿನಿಂದ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಅಮೆರಿಕದ ನಾಗರಿಕರ ಉದ್ಯೋಗ ರಕ್ಷಣೆಗಾಗಿ ವಲಸಿಗರ ಪ್ರವೇಶಕ್ಕೆ ಡೊನಾಲ್ಟ್ ಟ್ರಂಪ್ ನಿರ್ಬಂಧ ಹೇರಲು ನಿರ್ಧರಿಸಿದ್ದಾರೆ. ಕೊವಿಡ್‌ನ ದಾಳಿ ಎದುರಿಸುತ್ತಿರುವ ಸಮಯದಲ್ಲಿ ನಮ್ಮ ಅಮೆರಿಕಾದ ಪ್ರಜೆಗಳ ಉದ್ಯೋಗ ಕಾಪಾಡುವುದು ಅವಶ್ಯವಾಗಿದೆ. ಅಮೆರಿಕಕ್ಕೆ ವಲಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸುವ ಕಾರ್ಯದ ಆದೇಶಕ್ಕೆ ಸಹಿ ಮಾಡಲಿದ್ದೇನೆ ಎಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ. ಕಳೆದ ತಿಂಗಳಿನಿಂದ ೨.೨ ಕೋಟಿ ಅಮೆರಿಕನ್ನರು ನಿರುದ್ಯೋಗ ಸೌಲಭ್ಯಗಳನ್ನು ಬಯಸಿದ್ದಾರೆ. ೧೦ ಲಕ್ಷಜನರು […]

ನವದೆಹಲಿ: ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ ೧೦೦ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ನಾಲ್ಕು ದಿನಗಳ ಹಿಂದೆ ಇಲ್ಲಿನ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ರಾಷ್ಟ್ರಪತಿ ಭವನದ ಸ್ವಚ್ಛತೆಯ ಕಾರ್ಯ ನಿರ್ವಹಣೆ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದಾಗಿ ಸ್ವಚ್ಛತೆಯ ಕೆಲಸ ಮಾಡುತ್ತಿದ್ದ ಎಲ್ಲರಿಗೂ ಕೇಂದ್ರ ದೆಹಲಿಯ ಪ್ರದೇಶದಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯದರ್ಶಿ ಹಂತದ ಅಧಿಕಾರಿಗಳು, ಅವರ ಕುಟುಂಬ ಸದಸ್ಯರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. […]

ಭಾರತ ವಿಶ್ವದ ಅತಿದೊಡ್ಡ ರಕ್ಷಣಾ ಸಾಮಗ್ರಿಗಳ ಆಮದು ರಾಷ್ಟ್ರ ಎಂದೇ ಹೇಳಲಾಗುತ್ತದೆ. ಆದರೆ, ರಕ್ಷಣಾ ಸಾಮಗ್ರಿಗಳ ರಫ್ತು ವಲಯದಲ್ಲೂ ಈಗ ನಿಧಾನವಾಗಿ ತನ್ನ ಅಸ್ತಿತ್ವ ಕಂಡುಕೊಳ್ಳಲಾರಂಭಿಸಿದೆ. ರಕ್ಷಣಾ ಸಚಿವಾಲಯದ ರಕ್ಷಣಾ ಸಾಮಗ್ರಿಗಳ ಉತ್ಪಾದನಾ ವಿಭಾಗದ ಪ್ರಕಾರ, ಕಳೆದ ೪ ವರ್ಷಗಳಲ್ಲಿ ಭಾರತದ ರಕ್ಷಣಾ ಸಾಮಗ್ರಿಗಳ ರಫ್ತು ೫ ಪಟ್ಟು ಹೆಚ್ಚಳವಾಗಿದೆ. ಅಂದರೆ ೨೦೧೬-೧೭ನೇ ಸಾಲಿನಲ್ಲಿದ್ದ ೧,೫೨೧.೮೬ ಕೋಟಿ ರೂ. ರಫ್ತು ೨೦೧೯-೨೦ನೇ ಸಾಲಿಗೆ ೮,೬೨೦.೫೯ ಕೋಟಿ ರೂ.ಗೆ ಹೆಚ್ಚಾಗಿದೆ. ಈ […]

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ನಗರದ ವಾರ್ಡ ನಂ ೩೧ ರಲ್ಲಿ ಇಂದಿನಿಂದ ಲಾಕ್ ಡೌನ್ ಮುಗಿಯುವವರೆಗೆ ಅಂದರೆ ಮೇ.೩ ರವರೆಗೆ ಜನರಿಗೆ ಉಚಿತ ಊಟದ ವ್ಯವಸ್ಥೆಯನ್ನು ಡಾ.ಬಾಬಾಸಾಹೇಬ ಅಂಬೇಡ್ಕರ್ ಸೇವಾ ಸಮಿತಿ ಇಲಕಲ್ಲ ಅವರು ಮಾಡಿದ್ದಾರೆ. ಇದರ ನೇತೃತ್ವ ವಹಿಸಿದ ನಗರ ಸಭೆ ಸದಸ್ಯೆ ಶೋಭಾ ಅಮದಿಹಾಳ ಮತ್ತು ಯುವ ಮುಖಂಡ ಮಂಜು ಹೊಸಮನಿ ಹಾಗೂ ಅಶೋಕ ಛಲವಾದಿ ಹಮ್ಮಿಕೊಂಡಿದ್ದಾರೆ. ಚಿತ್ತರಗಿ ವಿಜಯ ಮಹಾಂತೇಶ ಮಠದ ಸ್ವಾಮಿಗಳು ಚಾಲನೆ ನೀಡಿ […]

ಕೊರೊನಾ ಹರಡುವಿಕೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಾಗ ಮಾತ್ರ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಭಂಧ ಹಿಂದಕ್ಕೆ ತೆಗೆಯಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೊರೋನಾ ಹರಡುವಿಕೆ ಕಡಿಮೆಯಾಗಿ, ಭಾರತೀಯರಿಗೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎಂಬ ವಿಶ್ವಾಸ ಬಂದಾಗ ಮಾತ್ರ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹೇಳಿದ್ದಾರೆ.

ಕೋವಿಡ್-೧೯ ಗೆ ಸಂಬಂಧಿಸಿದ ಸಾರ್ವಜನಿಕರ ಪ್ರಶ್ನೆಗಳನ್ನು ಉತ್ತರಿಸಲು ಆರೋಗ್ಯ ಸಚಿವಾಲಯ ಟ್ವಿಟರ್ ಸೇವಾ ಎಂಬ ವಿನೂತನ ಕಾರ್ಯವಿಧಾನವನ್ನು ಅಳವಡಿಸಿಕೊಂಡಿದೆ. ತ್ವರಿತಗತಿಯಲ್ಲಿ ಅತಿ ಹೆಚ್ಚು ಜನರ ಪ್ರಶ್ನೆಗಳಿಗೆ ಉತ್ತರಿಸುವ ಕಾರ್ಯವಿಧಾನಗಳನ್ನು ಆರೋಗ್ಯ ಸಚಿವಾಲಯ ಟ್ವಿಟರ್ ಅಳವಡಿಸಿಕೊಂಡಿದೆ. ಕೋವಿಡ್ ತಡೆಗೆ ಸರ್ಕಾರ ಕೈಗೊಂಡಿರುವ ಇತ್ತೀಚಿನ ಕ್ರಮಗಳು, ಆರೋಗ್ಯ ಸೇವೆಗಳನ್ನು ಪಡೆಯುವ ಮಾರ್ಗ, ರೋಗ ಲಕ್ಷಣಗಳು ಕಾಣಿಸಿಕೊಂಡವರಿಗೆ ಯಾರನ್ನು ಸಂಪರ್ಕಿಸಬೇಕೆಂಬ ಮಾಹಿತಿ, ಸಾರ್ವಜನಿಕರ ಅಗತ್ಯತೆಗಳಿಗೆ ಅಧಿಕಾರಿಗಳನ್ನು ಸಂಪರ್ಕಿಸುವುದು ಹೀಗೆ ಹಲವಾರು ವಿಷಯಗಳ ಕುರಿತ ಪ್ರಶ್ನೆಗಳಿಗೆ […]

Advertisement

Wordpress Social Share Plugin powered by Ultimatelysocial