ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾವಳಕಟ್ಟೆ ಎಂಬಲ್ಲಿ ಬಿಳಿ ಬಣ್ಣದ ಅಪರೂಪದ ಆಲ್ಟಿನೊ ಹೆಬ್ಬಾವು ಕಾಣಿಸಿಕೊಂಡಿದೆ. ಬಂಟ್ವಾಳದ ಕಾವಳಕಟ್ಟೆ ನಿವಾಸಿ ನೌಶಾದ್ ಎಂಬವರ ಮನೆಯಲ್ಲಿ ಬಿಳಿ ಹೆಬ್ಬಾವು ಕಾಣಸಿಕೊಂಡಿದ್ದು, ನಂತರ ಉರಗತಜ್ಞ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಲಾಯಿತು. ಅವರು ಕೂಡಲೇ ಸ್ಥಳಕ್ಕೆ ಬಂದು ಸುರಕ್ಷಿತವಾಗಿ ಹಾವನ್ನು ಹಿಡಿದು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಅರಣ್ಯ ಇಲಾಖೆ ಅದೇಶದಂತೆ ಪಿಲಿಕುಳಕ್ಕೆ ನಿಸರ್ಗ ಧಾಮಕ್ಕೆ ನೀಡಿದ್ದಾರೆ. ಇಂತಹ ಬಿಳಿ ಬಣ್ಣದ ಉರಗಗಳು […]
ಬೆಂಗಳೂರು: ಪಟ್ಟಾ ಜಮೀನಿನಲ್ಲಿ ಗಣಿಗಾರಿಕೆ ನಡೆಸಲು ಪರವಾನಗಿಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಇಂದು ಎತ್ತಿ ಹಿಡಿದಿದೆ. ಕರ್ನಾಟಕ ಕಿರು ಗಣಿಗಾರಿಕೆ ರಿಯಾಯಿತಿ ಕಾಯ್ದೆಗೆ ನಿಯಮ 32ರ ಅಡಿ ತಿದ್ದುಪಡಿ ತಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಖಾಲಿದ್ ಪಾಷಾ ಸೇರಿ 250ಕ್ಕೂ ಜನರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು. ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಮತ್ತು ನ್ಯಾಯಮೂರ್ತಿ […]
ಉಡುಪಿ: ಒಂದು ಕಡೆ ಉಡುಪಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕೇಸ್ ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೇ ವೇಳೆ ಇನ್ನೊಂದೆಡೆ ಕ್ವಾರಂಟೈನ್ ಕೇಂದ್ರದಲ್ಲೇ ಸ್ಥಳೀಯ ಜನಪ್ರತಿನಿಧಿಗಳು ಬರ್ತ್ ಡೇ ಪಾರ್ಟಿ ಮಾಡಿದ್ದಾರೆ. ಮಹಾರಾಷ್ಟ್ರದಿಂದ ಬಂದ ಅನೇಕರಿಗೆ ಸೋಂಕು ತಗಲುತ್ತಿರುವ ಈ ಹೊತ್ತಿನಲ್ಲಿ, ಅವರು ಕ್ವಾರಂಟೈನ್ ಆಗಿರುವ ಕೇಂದ್ರದಲ್ಲಿ ಹುಟ್ಟು ಹಬ್ಬ ಆಚರಣೆ ನಡೆದಿದ್ದು ಪ್ರಜ್ಞಾವಂತರ ಅಸಮಾಧಾನಕ್ಕೆ ಕಾರಣವಾಗಿದೆ.ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಪ್ರಕೃತಿ ಆಂಗ್ಲಮಾದ್ಯಮ ಶಾಲೆಯಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ […]
ಮಂಗಳೂರು: ನಿಲ್ಲಿಸಿದ್ದ ಲಾರಿಯೊಂದಕ್ಕೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಯುವತಿ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕೋಟೆಕಾರ್ ಬೀರಿಯಲ್ಲಿ ನಡೆದಿದೆ. ನಗರದ ರಸ್ತೆಯ ಅಂಚಿನಲ್ಲಿ ಲಾರಿ ನಿಂತಿತ್ತು.ಆಗ ಲಾರಿಯನ್ನು ಗಮನಿಸದ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಬೈಕ್ ಮುಂಭಾಗ ನಜ್ಜುಗುಜ್ಜಾಗಿದ್ದು ಇಬ್ಬರೂ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತಕ್ಷಣವೇ ಸ್ಥಳೀಯರು ಇಬ್ಬರನ್ನೂ […]
ಬೀದರ್ : ಇಂದು ಮನುಷ್ಯ ಭೌತಿಕ ಸುಖದತ್ತ ಸಾಗುತ್ತಿರುವುದು ಹಾಗೂ ಪರಿಸರದ ಮೇಲಿನ ಕಾಳಜಿ ಕಡಿಮೆ ಆಗುತ್ತಿರುವ ಪರಿಣಾಮ ಅರಣ್ಯ, ಹಸಿರು ಪ್ರದೇಶ ಕುಸಿಯುತ್ತಿದೆ ಎಂದು ಶಾಸಕ ಈಶ್ವರ ಖಂಡ್ರೆ ಆತಂಕ ವ್ಯಕ್ತ ಪಡಿಸಿದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಲಯ ಭಾಲ್ಕಿ ವತಿಯಿಂದ ಗುರುವಾರ ಆಯೋಜಿಸಿದ್ದ ರೈತರು, ಸಾರ್ವಜನಿಕರಿಗೆ ಸಸಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಲ್ಕಿ […]
ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಮತ್ತು ಪುನರ್ನಿರ್ಮಾಣ ಇಲಾಖೆಯ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಪಡೆದು ಏಜೆಂಟರ್ ಮೂಲಕ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡುತ್ತಿದ್ದಾರೆ. ಕೊಲ್ಹಾರದ ಪುನರ್ವಸತಿ ಕೆಂದ್ರದಲ್ಲಿ ಹಣದಾಸೆಗೆ ಅಕ್ರಮವಾಗಿ ಒಬ್ಬೊಬ್ಬರಿಗೆ ಹತ್ತಕ್ಕೂ ಹೆಚ್ಚು ನಿವೇಶನಗಳನ್ನು ಹಂಚಿಕೆ ಮಾಡುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಪಟ್ಡಣದ ಸಿಕ್ಯಾಬ್ ಶಾಲೆ ಪಕ್ಕದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳು ಶೆಡ್ಗಳನ್ನು ಹಾಕಿಕೊಂಡು ವಾಸವಿರುವ ಜಾಗವನ್ನು ಯುಕೆಪಿಯ ಪುನರ್ವಸತಿ ಅಧಿಕಾರಿಗಳು ಅಳತೆ ಮಾಡಲು ಆಗಮಿಸಿದಾಗ ಅಲ್ಲಿನ ನಿವಾಸಿಗಳು […]
ಮಂಗಳೂರು : ಬೆಂಗಳೂರಿನ ಯಲಹಂಕ ಸೇತುವೆಗೆ ವೀರ್ ಸಾವರ್ಕರ್ ಹೆಸರಿಡುವ ವಿಚಾರ ವಿವಾದಕ್ಕೀಡಾಗಿತ್ತು. ಇದರ ಬೆನ್ನಲ್ಲೇ ಕೇಸರಿ ಪಡೆಯ ಭದ್ರಕೋಟೆ ಅಂತಲೇ ಹೆಸರಾಗಿರುವ ಮಂಗಳೂರಿನ ಸೇತುವೆಗಳಲ್ಲಿ ಸಾವರ್ಕರ್ ಬ್ಯಾನರ್ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಮಂಗಳೂರಿನ ಪಂಪ್ವೆಲ್ ಫ್ಲೈಓವರ್ ಮೇಲೆ ಸಾವರ್ಕರ್ ಬ್ಯಾನರ್ ಪ್ರತ್ಯಕ್ಷವಾಗಿ ಫೋಟೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಒಂದೇ ಗಂಟೆಯಲ್ಲೇ ಫ್ಲೆಕ್ಸ್ ಕಾಣೆಯಾಗಿತ್ತು. ಈ ವಿಚಾರದಲ್ಲಿ ಪ್ರತಿಕ್ರಿಯಿಸಿದ್ದ ಮಾಜಿ ಸಚಿವ ಯು.ಟಿ ಖಾದರ್, ಪಂಪ್ವೆಲ್ ವೃತ್ತಕ್ಕೆ ಈ […]
ಪುನರ್ವಸತಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡ ಫಲಾನುಭವಿಗಳಿಗೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಬಲ ನೀಡಿದ ಘಟನೆ ದೇವದುರ್ಗದಲ್ಲಿ ನಡೆದಿದೆ. ಇಲ್ಲಿನ ಹೆಚ್ ಸಿದ್ದಾಪುರ ಗಾಮದ ಪುನರ್ವಸತಿ ಜಾಗದಲ್ಲಿ ಶೆಡ್ ನಿರ್ಮಾಣಿಸಿಕೊಂಡ ಫಲಾನುಭವಿಗಳಿಗೆ ರಕ್ಷಣೆ ನೀಡಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಿ ಎಸ್ ಐ ವಿರೂಪಾಕ್ಷ ಅವರಿಗೆ ಮನವಿ ನೀಡಿದ್ದಾರೆ. ಅವರ ಶೆಡ್ ಗಳನ್ನ ತೆರವುಗೊಳಿಸಲು ಸ್ಥಳೀಯ ಅಧಿಕಾರಿಗಳು ಮುಂದಾಗಿದ್ದು, ಗ್ರಾಮಕ್ಕೆ ಶಾಲಾ ಕಟ್ಟಡ ಮಂಜೂರಾಗಿದೆ ಎಂದು ಅಲ್ಲಿ ವಾಸಿಸುತ್ತಿರುವ […]
ಬೆಂಗಳೂರು : ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಜೊತೆಗೆ ರಾಜ್ಯ ಸರ್ಕಾರದ ಹಲವಾರು ಪ್ಯಾಕೇಜ್ ಸೇರಿದಂತೆ ಇನ್ನಿತ್ತರ ಪ್ರಯೋಜಗಳನ್ನು ಪಡೆದುಕೊಳ್ಳುವ ಸಲುವಾಗಿ ಕೂಡಲೇ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವಂತೆ ಸಚಿವ ಬಿ.ಸಿ ಪಾಟೀಲ್ ಅವರು ಮನವಿ ಮಾಡಿದ್ದಾರೆ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡದ ರೈತರು ಶೀಘ್ರ ಜೋಡಣೆ ಮಾಡಲು ಸಚಿವರು ಮನವಿ ಮಾಡಿದ್ದಾರೆ. ಮೆಕ್ಕೆಜೋಳ ಹಾಗೂ ಹೂವು ಬೆಳೆದ […]
ಪಶ್ಚಿಮ ಬಂಗಾಳ: ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಶ್ರಮಿಕ್ ರೈಲುಗಳ ಮೂಲಕ ತೆರಳುತ್ತಿದ್ದಾರೆ. ಮುಂಬೈನಲ್ಲಿ ಪಶ್ಚಿಮ ಬಂಗಾಳಕ್ಕೆ ಹೊರಟ ರೈಲನ್ನು ಕೊನೆಕ್ಷಣದಲ್ಲಿ ಹತ್ತಲು ಬಂದ ಕಾರ್ಮಿಕರಿಗೆ ಪೊಲೀಸರು ಸಹಕರಿಸಿದ ವಿಡಿಯೋ ಈಗ ವೈರಲ್ ಆಗಿದೆ. ಕೊನೆಕ್ಷಣದಲ್ಲಿ ವಲಸೆ ಕಾರ್ಮಿಕರ ಗುಂಪೊಂದು ರೈಲು ಹತ್ತಲು ಸಾಧ್ಯವಾಗಿರಲಿಲ್ಲ. ಈ ವೇಳೆ ಪೊಲೀಸರು ಓಡಿ ರೈಲ್ವೆ ಸಿಬ್ಬಂದಿ ಗಮನಕ್ಕೆ ತಂದು, ರೈಲು ನಿಲ್ಲಿಸಿ ಈ ಕಾರ್ಮಿಕರನ್ನೆಲ್ಲ ಹತ್ತಿಸಿ ಕಳಿಸಿದರು. […]