ಒಡಿಶಾದ ವಲಸೆ ಕಾರ್ಮಿಕನೊಬ್ಬ ಬೆಂಗಳೂರಿನಿAದ ತನ್ನ ಊರಿಗೆ ತೆರಳುವ ಉದ್ದೇಶದಿಂದ ಪತ್ನಿಯ ಮಂಗಳ ಸೂತ್ರ ಮಾರಾಟ ಮಾಡಿರುವ ಹಣದಲ್ಲಿ ಸೈಕಲ್ ಖರೀದಿಸಿದ್ದಾನೆ. ನಾವು ಹಣವಿಲ್ಲದೆ ಪರದಾಡುತ್ತಿದ್ದಾಗ, ನನ್ನ ಹೆಂಡತಿ ಎರಡು ಬೈಸಿಕಲ್ ಗಳನ್ನು ಖರೀದಿಸಲು ತನ್ನ ಮಂಗಳಸೂತ್ರವನ್ನು ಮಾರಿದಳು. ಬಳಿಕ ಸೈಕಲ್ ಖರೀದಿಸಿ ಬೆಂಗಳೂರಿನಿAದ ಹೊರಟೆವು ಎಂದು ಚಂದನ್ ಹೇಳಿದ್ದಾರೆ. ಎರಡು ತಿಂಗಳಿನಿAದ ಯಾವುದೇ ಸಂಪಾದನೆ ಇರಲಿಲ್ಲ. ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದೆವು, ಕೊನೆಯ ಉಪಾಯವಾಗಿ, ತಲಾ ೫,೦೦೦ ರೂ.ಗೆ […]
ನವದೆಹಲಿ: ತಮ್ಮ ಮದುವೆಗೆ ಕುಟುಂಬ ಸದಸ್ಯರ ವಿರೋಧ ಇರುವ ಹಿನ್ನೆಲೆಯಲ್ಲಿ ತಮಗೆ ರಕ್ಷಣೆ ನೀಡಬೇಕೆಂದು ಕೋರಿ ಕೋರ್ಟ್ ಮೆಟ್ಟಿಲೇರಿದ ನವ ವಧುವರನಿಗೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿರುವ ಘಟನೆ ನಡೆದಿದೆ. ತಮ್ಮ ಮದುವೆಗೆ ಕುಟುಂಬಸ್ಥರ ವಿರೋಧವಿದ್ದು, ತಮಗೆ ರಕ್ಷಣೆ ಕೊಡಲು ಸೂಚನೆ ನೀಡಬೇಕೆಂದು ಕೋರಿ ಕೋರ್ಟ್ ಮೆಟ್ಟಿಲೇರಿದ್ದ ವೇಳೆ ನ್ಯಾಯಾಧೀಶರು ವಿವಾಹದ ಫೋಟೋ ಗಮನಿಸಿದ ಸಂದರ್ಭದಲ್ಲಿ ಇಬ್ಬರೂ ಮಾಸ್ಕ್ ಧರಿಸಿಲ್ಲ ಎಂಬುದನ್ನು ಪತ್ತೆ […]
ನವದೆಹಲಿ: ಸಮುದ್ರದಲ್ಲಿ ಮುಳುಗುತ್ತಿರುವ ಕಾರನ್ನು ಉಳಿಸಲು ಮಾಲೀಕನೊಬ್ಬ ಯತ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಡೈಲಿ ಮೇಲ್ ವರದಿಯ ಪ್ರಕಾರ, ಯುನೈಟೆಡ್ ಕಿಂಗ್ಡನ್ನ ಲೀ ಡಾಲ್ಬಿ ಆಫ್ ಕೆಂಟ್ ವಿಡಿಯೋವನ್ನು ಚಿತ್ರೀಕರಿಸಿದ್ದು, ವ್ಯಕ್ತಿಯೊಬ್ಬ ಸಮುದ್ರದಲ್ಲಿ ಅರ್ಧ ಮುಳುಗಿರುವ ವೋಕ್ಸ್ವ್ಯಾಗನ್ ಗಾಲ್ಫ್ ಕಾರನ್ನು ಉಳಿಸಿಕೊಳ್ಳವ ಪ್ರಯತ್ನಕ್ಕೆ ಮುಂದಾಗಿರುವುದು ಸೆರೆಯಾಗಿದೆ. ಸಮುದ್ರ ತಟದಲ್ಲಿ ನೀರಿನ ಹತ್ತಿರದಲ್ಲೇ ನಿಲ್ಲಿಸಿದ್ದ ಕಾರನ್ನು ಭಾರಿ ಗಾತ್ರದ ಅಲೆಯೊಂದು ಸಮುದ್ರದೊಳಗೆ ಎಳೆದೊಯ್ಯಿತು. ದುರಾದೃಷ್ಟಕರವೆಂದರೆ ಎಷ್ಟೇ ಪ್ರಯತ್ನ […]
ನವದೆಹಲಿ: ಭಾರತ-ಚೀನಾ ನಡುವೆ ಆಫ್ರಿಕಾದಲ್ಲಿ ಕುತೂಹಲಕಾರಿ ಕದನವೊಂದು ನಡಿತಿದೆ. ಆಫ್ರಿಕಾ ಖಂಡದಲ್ಲಿನ ಬೈಕ್ ಉದ್ಯಮದಲ್ಲಿ ಈಗ ಎರಡು ಭಾರತೀಯ ಕಂಪನಿಗಳು ಸೇರಿ ಚೀನಾದ ೨೦೦ ಕಂಪನಿಗಳನ್ನು ಸೋಲಿಸಿವೆ. ಬಜಾಜ್ ಆಟೊ, ಟಿವಿಎಸ್ ಆರ್ಭಟಕ್ಕೆ ಬೆಚ್ಚಿಬಿದ್ದ ಚೀನಿ ಕಂಪನಿಗಳು ಒಂದೊAದಾಗಿ ಹಿಂದೆ ಸರಿಯುತ್ತಿವೆ. ೧೦ ವರ್ಷಗಳ ಹಿಂದೆ ಇದ್ದ ೨೦೦ ಕಂಪನಿಗಳು ಈಗ ೪೦ಕ್ಕಿಳಿದಿವೆ. ಅಷ್ಟು ಮಾತ್ರವಲ್ಲ. ಈ ಎರಡು ಭಾರತೀಯ ಕಂಪನಿಗಳೇ ಮಾರುಕಟ್ಟೆಯಲ್ಲಿ ಶೇ.೫೦ರಷ್ಟು ಪಾಲು ಹೊಂದಿವೆ. ೧೦ ವರ್ಷಗಳ […]
ಮುಂಬೈ: ನಿಸರ್ಗ ಚಂಡಮಾರುತಕ್ಕೆ ಮುಂಬೈ ನಲುಗುತ್ತಿದೆ. ಕಳೆದ 6ಗಂಟೆಗಳಲ್ಲಿ ಸೈಕ್ಲೋನ್ 13 ಕಿ.ಮೀ.ವೇಗದಲ್ಲಿ ಚಲಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಚಂಡಮಾರುತ ಅಲಿಬಗ್ನಿಂದ 140 ಕಿ.ಮೀ ದೂರ ಹಾಗೂ ಮುಂಬೈನಿಂದ 190 ಕಿಲೋಮೀಟರ್ ದೂರದಲ್ಲಿದ್ದು, ಮಧ್ಯಾಹ್ನ 1-3ಗಂಟೆ ಹೊತ್ತಲ್ಲಿ 110ರಿಂದ-120 ಕಿ.ಮೀ. ವೇಗ ಹೆಚ್ಚಿಸಿಕೊಳ್ಳಲಿದೆ. ಹಾಗೇ ಭೂಕುಸಿತದಂತಹ ಅನಾಹುತ ಸೃಷ್ಟಿಸಬಹುದು ಎಂದು ಮುಂಬೈ ಹವಾಮಾನ ಇಲಾಖೆ ಮುಖ್ಯಸ್ಥ ಕೆ.ಎಸ್. ಹೊಸಾಲಿಕರ್ ತಿಳಿಸಿದ್ದಾರೆ. ಚಂಡಮಾರುತದ ಪ್ರಭಾವದಿಂದ ಮುಂಬೈನ ಸಮುದ್ರದಲ್ಲಿ ಅಲೆಗಳ […]
ಚಾಮರಾಜನಗರ: ಅನಧಿಕೃತ ನಿರ್ಮಾಣದ ಕಟ್ಟಡವನ್ನು 10 ದಿನದೊಳಗೆ ತೆರವುಗೊಳಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಗುಂಡ್ಲುಪೇಟೆ ತಹಶೀಲ್ದಾರರಿಗೆ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಒಳಪಟ್ಟ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿ ಮಂಗಲ ಗ್ರಾಮದಲ್ಲಿ ಬೀಗಮುದ್ರೆ ಮಾಡಿದ ಹೋಮ್ ಸ್ಟೇ ಕೊಠಡಿ ತೆರೆದು ದುರಸ್ಥಿ ಕಾರ್ಯ ಕೈಗೊಂಡಿರುವ ಅನಧಿಕೃತ ಕಟ್ಟಡಗಳನ್ನ ತೆರವುಗೊಳಿಸಿ. ಗುಂಡ್ಲುಪೇಟೆ ತಾಲೂಕು ಹಂಗಳ ಹೋಬಳಿ ಮಂಗಲ ಗ್ರಾಮದ ಸರ್ವೆ […]
ಬೀದರ: ವಿಧಾನಪರಿಷತ್ ಸದಸ್ಯರಾದ ವಿಜಯಸಿಂಗ್ ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಹಾಗೂ ಹೋಕ್ರಾಣಾ ಗ್ರಾಮ ಪಂಚಾಯತ್ಗಳಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಿಸಿದರು . ಕೂಲಿ ಕಾರ್ಮಿಕರಿಗೆ ಲಾಕ್ಡೌನ್ ನಿಂದ ಆರ್ಥಿಕ ಸಂಕಷ್ಟ ಎದುರಾಗಬಾರದೆಂಬ ಉದ್ದೇಶದಿಂದ ನರೇಗಾ ಯೋಜನೆಯಡಿ ಉದ್ಯೋಗ ಖಾತ್ರಿ ಕೆಲಸ ನಿಡಲಾಗುತ್ತಿದ್ದು, ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಲು ಸೂಚಿಸಿದರು. ಕೊರೊನಾ ಮಹಾಮಾರಿ ರೋಗ ಹೆಚ್ಚುತ್ತಿರುವುದರಿಂದ ಕೂಲಿ ಕಾರ್ಮಿಕರಿಗೆ ಮಾಸ್ಕ್ ಗಳನ್ನು ವಿತರಿಸಲಾಯಿತು. ಸಾಮಾಜಿಕ ಅಂತರವನ್ನು […]
ದೆಹಲಿ: ಕೊರೊನಾ ವೈರಸ್ ಭೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರೈಲು ಭೋಗಿಗಳನ್ನೇ ಐಸೋಲೇಶನ್ ವಾರ್ಡ್ಗಳಾಗಿ ಪರಿವರ್ತಿಲಾಗಿತ್ತು. ಇದೀಗ, ದೆಹಲಿಯಲ್ಲಿ ಮೊದಲ ಸಲ ರೈಲು ಐಸೋಲೇಶನ್ ವಾರ್ಡ್ನಲ್ಲಿ ಕೊರೊನಾ ರೋಗಿಗೆ ಚಿಕಿತ್ಸೆ ನೀಡಲಾಗುತ್ತಿದೆ.ದೆಹಲಿ ಸರ್ಕಾರದ ಮನವಿ ಮೆರೆಗೆ AC ರಹಿತವಾದ 10 ಬೋಗಿಗಳನ್ನು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನಿಯೋಜಿಸಲಾಗಿದೆ. ಅದರಲ್ಲಿ 160 ಬೆಡ್ ಗಳನ್ನು ಹೊಂದಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದಕ್ಕೂ ಮುಂಚೆ ದೆಹಲಿಯಲ್ಲಿ ಸುಮಾರು 117 ಖಾಸಗಿ […]
ಬೆಂಗಳೂರು: ಜೂನ್ 30 ರ ವರೆಗೂ ದೇಶಾದ್ಯಂತ ಲಾಕ್ಡೌನ್ ಮುಂದುವರೆಯಲಿದೆ. ಲಾಕ್ಡೌನ್ 5.0 ಘೋಷಣೆ ಮಾಡಿದ ಬೆನ್ನಲ್ಲೇ ಹಲವು ವಿನಾಯಿತಿಗಳನ್ನು ನೀಡಲಾಗಿದೆ.ಈಗಾಗಲೇ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ ಆರಂಭಿಸಲಾಗಿದೆ. ನೈಟ್ ಕರ್ಫ್ಯೂ ಅವಧಿಯನ್ನು ಸಡಿಲಗೊಳಿಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದ್ದು, ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ವಿವಿಧ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಅಂತೆಯೇ ಕೆಎಸ್ಆರ್ಟಿಸಿ ಬಸ್ ಗಳು ರಾತ್ರಿ […]
ದಾವಣಗೆರೆ: ಕೊರೊನಾ ವಾರಿಯರ್ಸ್ ಗೆ ಒಳ್ಳೆಯದಾಗಲಿ ಹಾಗೂ ಕೊರೊನಾ ವೈರಸ್ ನಿವಾರಣೆಗೆ ಪ್ರಾರ್ಥಿಸಿ ಹೊನ್ನಾಳಿಯ ಹಿರೇಕಲ್ಮಠದಲ್ಲಿ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿತ್ತು.ಹೊನ್ನಾಳಿ ಮತ್ತು ನ್ಯಾಮತಿಯ ಅವಳಿ ತಾಲ್ಲೂಕಿನಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಇಂದು ಹೊನ್ನಾಳಿಯ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪುಷ್ಪವೃಷ್ಟಿ ಹಾಗೂ ಮಾಲಾರ್ಪಣೆಯ ಮೂಲಕ ಅಭಿನಂದನೆ ಸಲ್ಲಿಸಲಾಯಿತು. ಸರ್ವರಿಗೂ ಒಳ್ಳೆಯದಾಗಲಿ, ಕಾಲಕಾಲಕ್ಕೆ ಮಳೆ-ಬೆಳೆ ಉತ್ತಮವಾಗಲಿ ಎಂದು ಪ್ರಾರ್ಥಿಸಲಾಯಿತು. ಈ ವೇಳೆ ಹಿರೇಕಲ್ಮಠದ ಶ್ರೀಗಳು, ಶಾಸಕರಾದ ರೇಣುಕಾಚಾರ್ಯ ದಂಪತಿ, ಜಿಲ್ಲಾಧಿಕಾರಿ […]