ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಶತಾಯುಷಿ ಅಜ್ಜಿ ನಿಂಗಮ್ಮ ಅವರು ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ನಿಂಗಮ್ಮ ಅವರಿಗೆ 106 ವರ್ಷ ವಯಸ್ಸಾಗಿದ್ದು, ಇಂದು ಬೆಳಗಿನ ಜಾವ ನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬದಿದೆ. ನಿಂಗಮ್ಮ ಅವರ ಅಂತ್ಯಕ್ರಿಯೆಯನ್ನು ಕನಕಪುರದ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಇಂದು ಸಂಜೆ 4.30ಕ್ಕೆ ನಡೆಸಲಾಗುತ್ತಿದೆ. ಈ ನಡುವೆ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರದ ಕಲಾಪದಲ್ಲಿ ಭಾಗವಹಿಸುವುದನ್ನು […]

ವಾಷಿಂಗ್ಟನ್‌: ಭಾರತವನ್ನು ಗುರಿಯಾಗಿಸಿಕೊಂಡಿರುವ ಭಯೋತ್ಪಾದನಾ ಸಂಘಟನೆಗಳು ಪಾಕಿಸ್ತಾನದಿಂದಲೇ ಕಾರ್ಯಾಚರಣೆ ಮುಂದುವರಿಸಿವೆ. ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಿಸಿರುವ ಮಸೂದ್ ಅಜರ್‌ ಸೇರಿದಂತೆ ಹಲವು ಉಗ್ರರ ವಿರುದ್ಧವೂ ಪಾಕಿಸ್ತಾನ ಆಡಳಿತವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಮೆರಿಕದ ವಿದೇಶಾಂಗ ವ್ಯವಹಾರಗಳ ಇಲಾಖೆಯು ಇತ್ತೀಚಿನ ವರದಿಯಲ್ಲಿ ಉಲ್ಲೇಖಿಸಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೊನಿ ಬ್ಲಿಂಕನ್‌ ಭಯೋತ್ಪಾದನೆಗೆ ಸಂಬಂಧಿಸಿದ 2020ರ ವರದಿಯನ್ನು ಗುರುವಾರ ಬಿಡುಗಡೆ ಮಾಡಿದ್ದಾರೆ. ವರದಿಯ ಪ್ರಕಾರ, ‘ಅಫ್ಗಾನಿಸ್ತಾನವನ್ನು ಗುರಿಯಾಗಿಸಿಕೊಂಡಿರುವ ಆಫ್ಗನ್‌ ತಾಲಿಬಾನ್‌ ಹಾಗೂ […]

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಆರಂಭಕ್ಕೆ ದಿನಗಣನೆ ಶುರುವಾಗಿದೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಈವರೆಗೆ ಟೆಸ್ಟ್ ಸರಣಿ ಗೆಲ್ಲಲು ವಿಫಲವಾಗಿರುವ ಭಾರತೀಯ ತಂಡ ಈ ಬಾರಿ ಆ ಕೆಟ್ಟ ದಾಖಲೆಯನ್ನು ಅಳಿಸಿಹಾಕುವ ಆತ್ಮವಿಶ್ವಾಸದಲ್ಲಿದೆ. ಹೀಗಾಗಿ ಆಡುವ ಬಳಗದ ಸಂಯೋಜನೆ ಸಾಕಷ್ಟು ಕುತೂಹಲಕಾರಿಯಾಗಿದೆ. 18 ಮಂದಿ ಆಟಗಾರರ ಸ್ಕ್ವಾಡ್‌ನಲ್ಲಿ ಅಂತಿಮ 11ರ ಬಳಗದ ಆಯ್ಕೆ ಮ್ಯಾನೇಜ್‌ಮೆಂಟ್ ಪಾಲಿಗೆ ಸವಾಲಾಗಿದ್ದರೂ ಪ್ರತಿಭಾನ್ವಿತ ಆಟಗಾರರೇ ತುಂಬಿರುವುದರಿಂದಾಗಿ ದಕ್ಷಿಣ ಆಫ್ರಿಕಾದ […]

ನವದೆಹಲಿ: ಈಗಾಗಲೇ ತನ್ನ ಬಳಕೆದಾರರಿಗೆ ವಿವಿಧ ರೀತಿಯಂತ ಹೊಸ ಹೊಸ ಫೀಚರ್ ಬಿಡುಗಡೆ ಮಾಡಿದ್ದಂತ ವಾಟ್ಸಾಪ್ ( WhatsApp ), ಈಗ ಮತ್ತೊಂದು ಹೊಸ ಫೀಚರ್ ರಿಲೀಸ್ ಮಾಡಿದೆ. ಅದೇ ಇನ್ಮುಂದೆ ವಾಯ್ಸ್ ಮೆಸೇಜ್ ಕಳಿಸೋ ಮೊದಲು, ನೀವು ರೆಕಾರ್ಡ್ ಮಾಡಿದಂತ ವಾಯ್ಸ್ ಸಂದೇಶವನ್ನು ( Voice Message ) ಪ್ರೀವ್ಯೂ ಮಾಡಿ, ಆನಂತ್ರ ಕಳಿಸೋದಕ್ಕೆ ಅವಕಾಶ ನೀಡಿದೆ. ಹೌದು.. ಬಳಕೆಗಾರರ ಸ್ನೇಹಿಯಾಗೋ ನಿಟ್ಟಿನಲ್ಲಿ ವಾಟ್ಸಾಪ್ ಈಗ ಮತ್ತೊಂದು ಹೊಸ […]

ಮುಂಬೈ: 2017 ರಲ್ಲಿ ಅನಿಲ್ ಕುಂಬ್ಳೆ ಜೊತೆಗೆ ವೈಮನಸ್ಯ ಮಾಡಿಕೊಂಡಿದ್ದ ವಿರಾಟ್ ಕೊಹ್ಲಿ ಅವರನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದರು. ಅದೇ ಕೊಹ್ಲಿ ಇಂದೀಗ ಸೀಮಿತ ಓವರ್ ಗಳ ನಾಯಕತ್ವ ಕಳೆದುಕೊಂಡಿದ್ದಾರೆ. ಈ ವೇಳೆ ಕೆಲವು ಅಭಿಮಾನಿಗಳು ಕೊಹ್ಲಿಗೆ ಅಂದಿನ ಘಟನೆಯನ್ನು ನೆನಪಿಸಿದ್ದಾರೆ. ಅಂದು ಅನಿಲ್ ಕುಂಬ್ಳೆಯನ್ನು ನಿಮಗೆ ಇಷ್ಟವಾಗಿಲ್ಲ ಎಂಬ ಕಾರಣಕ್ಕೆ ನಿಮ್ಮ ಅಧಿಕಾರ ಉಪಯೋಗಿಸಿ ಕಿತ್ತೊಗೆದಿರಿ. ಇಂದು ಅದೇ ಸ್ಥಿತಿ ನಿಮಗೆ ಬಂದಿದೆ ಎಂದು ಕೆಲವರು ಸಾಮಾಜಿಕ […]

ತುಮಕೂರು: ಇಂಜಿನಿಯರ್​ ಸೇರಿ ಒಂದೇ ಕುಟುಂಬದ ಮೂವರು ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಮೂಲಕ ಹಾದುಹೋಗುವ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಹೇಮಾವತಿ ನಾಲಾ ವಲಯ ಕಚೇರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್(55), ಪತ್ನಿ ಮಮತಾ (45) ಮತ್ತು ಶುಭಾ(25) ಮೃತರು. ರಮೇಶ್​ ಕೆ.ಬಿ.ಕ್ರಾಸ್​ನಲ್ಲಿರುವ ಹೇಮಾವತಿ ಕಚೇರಿಯಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪತ್ನಿ ಮಮತಾ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದರು. ಕೆ.ಆರ್.ನಗರ ಮೂಲದ […]

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಮಾತನ್ನು ಆಡುತ್ತಿದ್ದಾರೆ. ಆದರೆ, ಕುಮಾರಸ್ವಾಮಿಯವರ ಮಾತಿನ ಮೇಲೆ ಖುದ್ದು ಜೆಡಿಎಸ್ ಶಾಸಕರಿಗೆ ನಂಬಿಕೆ ಇದ್ದಂತಿಲ್ಲ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಬಯಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಈಗಾಗಲೇ, ಬಹಿರಂಗವಾಗಿಯೇ ಜೆಡಿಎಸ್ ಬಿಡುವುದಾಗಿ ನಾಲ್ಕೈದು ಶಾಸಕರು ಹೇಳಿದ್ದಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಹಿರಂಗವಾಗಿಯೇ ಕಾಂಗ್ರೆಸ್ ಪರ ಕೆಲವರು ಕೆಲಸ ಮಾಡಿದವರೂ ಇದ್ದಾರೆ.

ಬೆಂಗಳೂರು: ಅತಿ ಹೆಚ್ಚು ಸಂಚಾರದಟ್ಟಣೆವುಳ್ಳ ಜೆ.ಸಿ.ರಸ್ತೆಯ ಮಧ್ಯಭಾಗದಲ್ಲಿ ಏಕಾಏಕಿ ಗುರುವಾರ ಸುಮಾರು 7-8 ಅಡಿಯಷ್ಟು ಬೃಹದಾಕಾರದ ಗುಂಡಿ ಬಿದ್ದಿದ್ದು, ವಾಹನ ಸವಾರರು ಆತಂಕದಲ್ಲಿ ಸಂಚರಿಸಿದರು. ಬೆಳಗ್ಗೆಯೇ ಈ ಬೃಹದಾಕಾರದ ಗುಂಡಿ ರಸ್ತೆ ಮಧ್ಯೆ ಕಾಣಿಸಿಕೊಂಡಿದ್ದರಿಂದ ಕೆಲಹೊತ್ತು ಉದ್ದೇಶಿತ ಮಾರ್ಗದಲ್ಲಿ ಸವಾರರು ಕೈಯಲ್ಲಿ ಜೀವ ಹಿಡಿದು ಕೊಂಡು ಸಂಚರಿಸಿದರು. ವೇಗವಾಗಿ ಬರುವ ವಾಹನಗಳಿಗೆ ಗುಂಡಿ ಹತ್ತಿರಕ್ಕೆ ಬರುತ್ತಿದ್ದಂತೆ ಬ್ರೇಕ್‌ ಬೀಳುತ್ತಿತ್ತು. ಇದರಿಂದ ಹಿಂದೆ ಬರುವ ಇತರೆ ವಾಹನ ಸವಾರರು ಗಲಿಬಿಲಿಗೊಳ್ಳುತ್ತಿರುವುದು ಕಂಡುಬಂತು. […]

ಬೆಂಗಳೂರು: ಜಮೀನಿಗೆ ಇ-ಖಾತೆ ಕೊಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆವೊಡ್ಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಇವರ ಗಂಡ ರೆಡ್‌ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಸಿಲುಕಿದ್ದಾರೆ. ಬೆಂಗಳೂರು ದಕ್ಷಿಣ ತಾಲ್ಲೂಕು ತಾವರೆಕೆರೆ ಹೋಬಳಿ ಚೋಳನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಮತ್ತು ಈಕೆಯ ಪತಿ ಶಿವರಾಜ್ ಕುಮಾರ್ ಬಂಧಿತರು. ಮಾಗಡಿ ರಸ್ತೆ ತಾವರೆಕೆರೆ ನಿವಾಸಿ, ಗಂಗೇನಹಳ್ಳಿ ಗ್ರಾಮದಲ್ಲಿ 2 ಎಕರೆ 2 ಗುಂಟೆ ಜಮೀನನ್ನು ವಾಣಿಜ್ಯ […]

ಬಹುನಿರೀಕ್ಷಿತ ‘ಪುಷ್ಪ’ ಸಿನಿಮಾ ಬಿಡುಗಡೆ ಆಗಿದ್ದು, ಬೆಂಗಳೂರು ಸೇರಿದಂತೆ ಹಲವು ಕಡೆ ಬೆಳ್ಳಂಬೆಳಗ್ಗೆ 5 ಗಂಟೆಗೆ ಶೋ ಪ್ರದರ್ಶನ ಮಾಡಲಾಗಿದೆ. ಈಗಾಗಲೇ ಸಾವಿರಾರು ಮಂದಿ ‘ಪುಷ್ಪ’ ಸಿನಿಮಾದ ಮೊದಲ ಶೋ ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.   ಟ್ವಿಟ್ಟರ್, ಫೇಸ್‌ಬುಕ್‌, ಇನ್‌ಸ್ಟಾಗ್ರಾಂಗಳಲ್ಲಿ ‘ಪುಷ್ಪ’ ಸಿನಿಮಾದ ಚುಟುಕು ವಿಮರ್ಶೆಗಳು ಈಗಾಗಲೇ ಹರಿದಾಡುತ್ತಿದ್ದು, ಸಿನಿಮಾದ ಬಗ್ಗೆ ಮಿಶ್ರ ಅಭಿಪ್ರಾಯಗಳು ವ್ಯಕ್ತವಾಗಿವೆ. ಗುಂಡರಾಘವ ಎಂಬುವರು ಟ್ವೀಟ್ ಮಾಡಿದ್ದು, ”ಅಲ್ಲು ಅರ್ಜುನ್ ಅಪ್ಪಟ ಅಭಿಮಾನಿಯಾಗಿ […]

Advertisement

Wordpress Social Share Plugin powered by Ultimatelysocial