ಒಸಾಕ: ಷಾಪಿಂಗ್‌ ಮಾಲ್‌ಗೆ ಬೆಂಕಿ ಬಿದ್ದಿದ್ದು, 27 ಮಂದಿ ಸಜೀವ ದಹನಗೊಂಡಿರುವ ಭೀಕರ ಘಟನೆ ಪಶ್ಚಿಮ ಜಪಾನ್‌ನ ಒಸಾಕಾದಲ್ಲಿನಲ್ಲಿ ನಡೆದಿದೆ. ಕಿಟಾಶಿಂಚಿಯ ಶಾಪಿಂಗ್ ಮತ್ತು ಮನರಂಜನಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ನಾಲ್ಕನೆಯ ಅಂತಸ್ತಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲೆಡೆ ದಟ್ಟ ಹೊಗೆಯಾಡುತ್ತಿದ್ದು, ಬೆಂಕಿ ಬೆಂಕಿ ಎಂದು ಕೂಗಿದರು. ಇದರಿಂದ ಅನೇಕ ಮಂದಿ ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಕೆಲವರು ತಪ್ಪಿಸಿಕೊಳ್ಳುವ ಭರದಲ್ಲಿ ದಹಿಸಿ ಹೋಗಿದ್ದಾರೆ. ಹೆಚ್ಚಿನ ಮಂದಿ ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ […]

ಸ್ಕೂಟಿಯ ಮೇಲಿದ್ದ ಖದೀಮರು ಮಹಿಳೆಯ ಮೊಬೈಲ್​ನ್ನು ಕಸಿಯುವ ಸಲುವಾಗಿ ಆಕೆಯನ್ನು ಸ್ಕೂಟಿಯಲ್ಲಿ 200 ಮೀಟರ್​ವರೆಗೆ ಎಳೆದೊಯ್ದ ಶಾಕಿಂಗ್​ ಘಟನೆಯು ದೆಹಲಿಯ ಶಾಲಿಮಾರ್​ ಬಾಗ್​ ಪ್ರದೇಶದಲ್ಲಿ ನಡೆದಿದೆ. ಕ್ಯಾಮಾರದಲ್ಲಿ ಬೆಚ್ಚಿ ಬೀಳಿಸುವ ದೃಶ್ಯವು ಸೆರೆಯಾಗಿದೆ. ಆಘಾತಕಾರಿ ವಿಡಿಯೋದಲ್ಲಿ ಸ್ಕೂಟಿಯ ಮೇಲಿದ್ದ ಇಬ್ಬರು ಕಳ್ಳರು ರಸ್ತೆಯಲ್ಲಿ ತಪ್ಪಾದ ದಿಕ್ಕಿನಲ್ಲಿ ಸ್ಕೂಟಿ ಚಲಾಯಿಸಿಕೊಂಡು ಬಂದಿದ್ದಾರೆ. ಸ್ಕೂಟಿ ಸವಾರಿ ಮಾಡುತ್ತಿದ್ದ ವ್ಯಕ್ತಿಯು ಮಹಿಳೆಯನ್ನು ಎಳೆದುಕೊಂಡು ಬಂದಿದ್ದಾನೆ ಹಾಗೂ ನಡು ರಸ್ತೆಯಲ್ಲಿ ಆಕೆಯನ್ನು ಎಸೆಯಲಾಗಿದೆ. ಮಹಿಳೆಯು ನಡು […]

ಬೆಳಗಾವಿ: ‘ವ್ಯಕ್ತಿಯೊಬ್ಬ ಜನವರಿ 14ರ ನಂತರ ನಾನು ಮುಖ್ಯಮಂತ್ರಿ ಆಗುತ್ತೇನೆಂದು ಹೇಳಿಕೊಂಡು ಹುಚ್ಚನಂತೆ ಓಡಾಡುತ್ತಿದ್ದಾನೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ಅವರನ್ನು ಟೀಕಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆತ‌, ರಾಜ್ಯದ ಮಹಾನ್ ನಾಯಕರನ್ನು ಎಲ್ಲ ರೀತಿಯಲ್ಲೂ ಸಂತೃಪ್ತಿಪಡಿಸಿದ್ದೇನೆ. ಅವರಿಗೆ ಸಕಲ ಐಶ್ವರ್ಯ- ಬೋಗಗಳನ್ನು ದಯಪಾಲಿಸಿದ್ದೇನೆ. ಹೀಗಾಗಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಕೊಂಡಿದ್ದಾರೆ’ ಎಂದು ಆರೋಪಿಸಿದರು. ಜನವರಿ ನಂತರ ರಾಜಕೀಯ ಬದಲಾವಣೆ […]

ಬೆಳಗಾವಿ,ಡಿ.17- ಗ್ರಾಮಪಂಚಾಯ್ತಿಯ ಕೇಂದ್ರ ಸ್ಥಾನಗಳಲ್ಲಿ ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ವಾಸಕ್ಕೆ ಅನುಕೂಲವಾಗುವಂತೆ ವಸತಿ ಗೃಹ ನಿರ್ಮಿಸುವ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವಪ್ಪ ವಿಧಾನಪರಿಷತ್‍ಗೆ ತಿಳಿಸಿದರು. ನಾಮನಿರ್ದೇಶಿತ ಸದಸ್ಯ ಡಾ.ತಳವಾರ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸುವಾಗ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಪಂಚಾಯ್ತಿಗಳಲ್ಲೇ ವಾಸವಿರುವಂತೆ ವಸತಿ ಗೃಹ ಕಟ್ಟಿಸಿಕೊಡಿ ಎಂಬ ಸಲಹೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಸಲಹೆಯನ್ನು ಗಂಭೀರವಾಗಿ […]

25 ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ನಿರೀಕ್ಷೆ ಮಾಡಿದ್ದಕ್ಕಿಂತ ಕಮ್ಮಿ ಸೀಟು ಬಂದಿದ್ದರೆ, ಕಾಂಗ್ರೆಸ್ಸಿಗೆ ನಿರೀಕ್ಷೆಗಿಂತ ಹೆಚ್ಚು ಸೀಟುಗಳು ಬಂದಿದ್ದವು. ಆದರೂ, ಕಾಂಗ್ರೆಸ್ಸಿನಲ್ಲಿ ಆಂತರಿಕ ಕಿತ್ತಾಟ, ಪರಸ್ಪರ ದೋಷಾರೂಪಣೆಗೆ ಫುಲ್ ಸ್ಟಾಪ್ ಬೀಳುತ್ತಿಲ್ಲ. ಕಾಂಗ್ರೆಸ್ಸಿನಲ್ಲಿ ಎಷ್ಟು ಬಣಗಳಿವೆ ಎಂದು ಕೇಳಿದರೆ ಯಾವ ಕಾಂಗ್ರೆಸ್ಸಿಗರೂ ಬಹಿರಂಗವಾಗಿ ಸತ್ಯ ಹೇಳಲಾರರು. ಆದರೂ, ಬಿಜೆಪಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮೂಲೆಗುಂಪು ಮಾಡಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ […]

ದಾವಣಗೆರೆ: ಕೆಎಸ್‌ಆರ್ ಟಿಸಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ  ಸಂಭವಿಸಿ, ಮೂವರು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಸವಳಂಗ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ನ್ಯಾಮತಿ ಬಳಿಯಲ್ಲಿ ನಡೆದಿದೆ. ನ್ಯಾಮತಿ ತಾಲೂಕಿನ ಹಳೆ ಜೋಗದಲ್ಲಿ ಇಂದು ನಡೆದಂತ ಆರತಕ್ಷತೆ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ, ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿಸಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಇದರಿ ಕಾರಿನಲ್ಲಿದ್ದಂತ ಶಿವಮೊಗ್ಗ […]

ಪಾಕಿಸ್ತಾನದ ಮಾಜಿ ಕ್ರಿಕೆಟಿಗ , ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಶೋಯೆಬ್ ಅಖ್ತರ್ ಸಚಿನ್ ತೆಂಡೂಲ್ಕರ್ ಜೊತೆಗಿನ ಒಂದು ಅಚಾನಕ್‌ ಘಟನೆ ಕುರಿತಾಗಿ ಮೆಲುಕು ಹಾಕಿದ್ದು, ಅಂದು ಸಚಿನ್ ತೆಂಡೂಲ್ಕರ್ ಏನಾದ್ರೂ ಗಾಯಗೊಂಡಿದ್ರೆ, ನನಗೆ ಜೀವನದಲ್ಲಿ ಮತ್ತೆ ಭಾರತದ ವೀಸಾ ಸಿಗುತ್ತಿರಲಿಲ್ಲ, ಭಾರತಕ್ಕೆ ಮತ್ತೆ ಬರಲು ಸಾಧ್ಯವಾಗ್ತಿರಲಿಲ್ಲ ಎಂದು ಸ್ಪೋರ್ಟ್ಸ್‌ಕ್ರೀಡಾ ಯೂಟ್ಯೂಬ್ ಚಾನೆಲ್‌ಗೆ ತಿಳಿಸಿದ್ದಾರೆ.   ಈ ಘಟನೆ ನಡೆದಿದ್ದು 2007ರಲ್ಲಿ ಪಾಕಿಸ್ತಾನ ಭಾರತದ ಸಮಯದ ವೇಳೆಯಲ್ಲಿ, ಅವಾರ್ಡ್ ನೀಡುವ ವೇಳೆಯಲ್ಲಿ […]

ಮುಂಬೈ: 2017 ರಲ್ಲಿ ಅನಿಲ್ ಕುಂಬ್ಳೆ ಜೊತೆಗೆ ವೈಮನಸ್ಯ ಮಾಡಿಕೊಂಡಿದ್ದ ವಿರಾಟ್ ಕೊಹ್ಲಿ ಅವರನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದರು. ಅದೇ ಕೊಹ್ಲಿ ಇಂದೀಗ ಸೀಮಿತ ಓವರ್ ಗಳ ನಾಯಕತ್ವ ಕಳೆದುಕೊಂಡಿದ್ದಾರೆ. ಈ ವೇಳೆ ಕೆಲವು ಅಭಿಮಾನಿಗಳು ಕೊಹ್ಲಿಗೆ ಅಂದಿನ ಘಟನೆಯನ್ನು ನೆನಪಿಸಿದ್ದಾರೆ. ಅಂದು ಅನಿಲ್ ಕುಂಬ್ಳೆಯನ್ನು ನಿಮಗೆ ಇಷ್ಟವಾಗಿಲ್ಲ ಎಂಬ ಕಾರಣಕ್ಕೆ ನಿಮ್ಮ ಅಧಿಕಾರ ಉಪಯೋಗಿಸಿ ಕಿತ್ತೊಗೆದಿರಿ. ಇಂದು ಅದೇ ಸ್ಥಿತಿ ನಿಮಗೆ ಬಂದಿದೆ ಎಂದು ಕೆಲವರು ಸಾಮಾಜಿಕ […]

ಬೆಂಗಳೂರು : ಒಕ್ಕಲಿಗರ ಸಂಘದ ಚುನಾವಣೆಯ ನಿರ್ದೇಶಕರ ಚುನಾವಣೆಯಲ್ಲಿ ಪರಾಜಿತರಾಗಿರುವ ಡಾ. ಕೆ ಮಹದೇವ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ರಾಜಕೀಯ ಪ್ರವೇಶಿಸಿ ಉತ್ತರ ನೀಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ರಾಜ್ಯ ಒಕ್ಕಲಿಗರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ನನ್ನ ಸೋಲಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಾರಣ ಎಂದು ಪರಾಜಿತ ಅಭ್ಯರ್ಥಿ ಡಾ ಕೆ ಮಹದೇವ್ ಗಂಭೀರ ಆರೋಪ ಮಾಡಿದ್ದಾರೆ. ನನಗೆ ಏಳು ಸಾವಿರ ಮತದಾರರ […]

ಬಕ್ಸರ್: 12 ವರ್ಷಗಳ ಹಿಂದೆ ಸತ್ತಿದ್ದಾನೆ ಎಂದು ನಂಬಲಾಗಿದ್ದ ಮಗ ಈಗ ಜೀವಂತವಾಗಿದ್ದಾನೆ. ಆತನನ್ನು ಸತ್ತನೆಂದು ಪರಿಗಣಿಸಿ ಅಂತಿಮ ವಿಧಿವಿಧಾನಗಳನ್ನು ನಡೆಸಿದ ಕುಟುಂಬ ಸದಸ್ಯರಿಗೆ ಈಗ ಅವನು ಜೀವಂತವಾಗಿದ್ದಾನೆ ಎಂಬ ಸುದ್ದಿ ತಿಳಿದು ಮೂಕ ವಿಸ್ಮಿತರಾಗಿದ್ದಾರೆ. ಆದರೆ, ಆತ ಬಾರ್ಡರ್ ಪ್ರವೇಶಿಸಿದ್ದರಿಂದ ಪಾಕಿಸ್ತಾನದ ಜೈಲಿನಲ್ಲಿ ಇರಿಸಲಾಗಿದೆ. ಯುವಕ ಮೃತಪಟ್ಟಿರುವ ವಿಷಯ ತಿಳಿದ ಆತನ ಪತ್ನಿ ಮತ್ತೆ ಮದುವೆಯಾಗಿ ಮಕ್ಕಳೊಂದಿಗೆ ತೆರಳಿದ್ದಾಳೆ. ಯುವಕ ಜೀವಂತವಾಗಿರುವ ಮತ್ತು ಪಾಕಿಸ್ತಾನದಲ್ಲಿ ಇರುವ ಸುದ್ದಿ ತಿಳಿದ […]

Advertisement

Wordpress Social Share Plugin powered by Ultimatelysocial