ಇತ್ತೀಚಿಗೆ ಕೆಲ ಗಾರ್ಮೆಂಟ್ಸ್ ಕಾರ್ಖಾನೆಗಳ ಆಡಳಿತ ವರ್ಗ, ಕಾರ್ಮಿಕರನ್ನು ಜೀತದಾಳುಗಳಂತೆ ಕಾಣುತ್ತಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ಲಾಕ್ ಡೌನ್ ಹಿನ್ನಲೆ, ಹುಳಿಮಾವಿನಲ್ಲಿರುವ ಲೀಸ್ ಅಪ್ರೇಸೆಲ್ಸ್ ಗಾರ್ಮೆಂಟ್ಸ್ ನ ಮಾಲೀಕ ಸುಬ್ರಮಣ್ಯ, ಹಲವು ದಿನಗಳಿಂದ ಸ್ಯಾಲರಿ ಕೊಡದೇ ನೌಕರರನ್ನು ಪೀಡುಸುತ್ತಿದ್ದಾನೆ. ಇದರಿಂದ ಬೇಸತ್ತ ನೌಕರರು. ಗಾರ್ಮೆಂಟ್ಸ್ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ಎಷ್ಟೋ ಸಂಸ್ಥೆಗಳು ಮೂಲ ವೇತನಕ್ಕಿಂತ ಕಡಿಮೆ ವೇತನವನ್ನು ನೀಡುತ್ತಿದೆ. ವರ್ಷಕ್ಕೆ ಕೊಡಬೇಕಾದ ಬೋನಸ್ ಗಳನ್ನು ಸಹ ನೀಡದೆ, […]
ಕೊರೋನಾ ಪೀಡಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಅನುಮತಿ ನೀಡಿದ್ದು, ರಾಜ್ಯದಲ್ಲಿ ಈ ಮಾದರಿಯ ಚಿಕಿತ್ಸೆ ಮುಂದುವರೆಸಬಹುದು ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರೋನಾದಿಂದ ಗುಣಮುಖರಾದ ವ್ಯಕ್ತಿಯ ದೇಹದಿಂದ ರೋಗ ನಿರೋಧಕ ಶಕ್ತಿಯನ್ನು ಉಂಟು ಮಾಡುವ ರಕ್ತದ ಕಣಗಳನ್ನು ರೋಗ ಪೀಡಿತ ವ್ಯಕ್ತಿಗೆ ನೀಡುವ ಮೂಲಕ ಆತನನ್ನೂ ಈ ಕಾಯಿಲೆಯಿಂದ ಗುಣಪಡಿಸಬಹುದು. ಡಾ. ವಿಶಾಲ್ ರಾವ್ ಅವರಿಗೆ […]
ಪಾದರಾಯನಪುರಕ್ಕೆ ಅನುಮತಿ ಪಡೆದು ಹೋಗಲು ಅದು ಜಮೀರ್ ಅಹಮದ್ ಫಾದರ್ ಪ್ರಾಪರ್ಟಿ ಅಲ್ಲ ಎಂದು ಸಚಿವ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿಕ್ಕಮಗಳೂರನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವಾಗ ವಿಧಾನಸಭೆಗೆ ಆಯ್ಕೆಯಾಗಿ ಬಂದಿದ್ದೇನೆಯೋ ಅವಾಗಲೇ ಜಮೀರ್ ಕೂಡ ಆಯ್ಕೆಯಾಗಿ ಬಂದಿದ್ದಾರೆ. ಹೀಗಾಗಿ ಜಮೀರ್ ಅವರಿಗೆ ಒಂದು ಕಾನೂನು ನನಗೊಂದು ಕಾನೂನು ಇಲ್ಲ. ಈ ದೇಶದ ಕಾನೂನು ಎಲ್ಲರಿಗೂ ಒಂದೇ ರೀತಿ ಅನ್ವಯವಾಗುತ್ತದೆ. ಈಗಾಗಲೇ ಮುಖ್ಯಮಂತ್ರಿಗಳು ಅವನು […]
ಮೈಸೂರು : ನಂಜನಗೂಡು ಜ್ಯುಬಿಲೆಂಟ್ ಕಾರ್ಖಾನೆ ನೌಕರರಿಂದ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕಾರ್ಖಾನೆ ನೌಕರರ ಸಂಪರ್ಕ ಹೊಂದಿದ್ದ ಐದು ಗ್ರಾಮಗಳನ್ನ ಸೀಲ್ ಡೌನ್ ಮಾಡಲಾಗಿದೆ. ಕೂಗಲೂರು, ಬ್ಯಾಳೂರು, ದೇವರಸನಹಳ್ಳಿ, ಬಸಪುರ, ತಾಂಡಾಪುರ ಗ್ರಾಮಗಳನ್ನು ಸೀಲ್ ಡೌನ್ ಮಾಡಲು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಆದೇಶಿಸಿದ್ದಾರೆ. ಇನ್ನು ಸೀಲ್ಡೌನ್ ಆದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ಜ್ಯುಬಿಲೆಂಟ್ ಕಾರ್ಖಾನೆಯ 52ನೇ ಸೋಂಕಿತನ ಸಂಪರ್ಕದಿಂದ ಈಗಾಗಲೇ 65 ಜನರು […]
ಉಡುಪಿ: ಕೊರೊನಾ ಸೋಂಕು ಹರಡುತ್ತಿರೋ ಈ ಸಂಧರ್ಭದಲ್ಲಿ ಸಂಘ ಸಂಸ್ಥೆಗಳು, ಶ್ರೀಮಂತರು ಬಡವರಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ನಡೆಸುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ಮಹಿಳೆ ತಾನೇ ಗುಡಿಸಲಲ್ಲಿ ವಾಸವಾಗಿದ್ರೂ, ಬಡವರ ಸಂಕಷ್ಟಕ್ಕೆ ನೆರವಾಗೋ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ..ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಅಲ್ಲೋ ಇಲ್ಲೊ ಸಿಕ್ಕಿದ ಮೀನು ಮಾರಿ ಪುಟ್ಟ ಗುಡಿಸಲಲ್ಲಿ ಜೀವನ ಸಾಗಿಸುತ್ತಿರುವ ಶಾರದಕ್ಕ ಎಂಬುವವರು, ಮಲ್ಪೆ ವಡಬಾಂಡೇಶ್ವರ ವಾರ್ಡ್ ನೆರ್ಗಿ ಯಲ್ಲಿ ಒಟ್ಟು 140 ಮನೆಗಳಿಗೆ […]
ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯನ್ನ ಬರ್ಬರವಾಗಿ ಹತ್ಯೆ ನಡೆಸಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಶಾಂತಮ್ಮ ಅಂತ ಗುರುತಿಸಲಾಗಿದೆ..ನಿನ್ನೆ ತಡರಾತ್ರಿ ಚಂದ್ರಾಲೇಔಟ್ ವ್ಯಾಪ್ತಿಯ ವಿನಾಯಕ ಲೇಔಟ್ ನಲ್ಲಿ ಘಟನೆ ನಡೆದಿದೆ..ಚತ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಶಾಂತಮ್ಮ ಧನು ಎಂಬಾತನನ್ನ ಮದ್ವೆಯಾಗಿದ್ದು,ಇಬ್ಬರು ಮಕ್ಕಳು ಕೂಡ ಇದ್ರು..ಇತ್ತಿಚೆಗೆ ವಿನಾಯಕ ಲೇಔಟ್ ನಲ್ಲಿ ವಡಿವೇಲು ಎಂಬಾತನ ಜೊತೆ ಶಾಂತಮ್ಮ ವಾಸವಿದ್ರು..ನಿನ್ನೆ ಮನೆಯಲ್ಲಿ ಶಾಂತಮ್ಮ ಹಾಗೂ ವಡಿವೇಲು ಇದ್ದಾಗ ಧನು ಎಂಟ್ರಿಯಾಗಿದ್ದ,.ಮೂವರು ನಡುವೆ ಮಾತಿಗೆ ಮಾತು […]
ಪ್ರತಿಯೊಬ್ಬ ಮನುಷ್ಯನ ಸಾಧನೆ ಹಾಗೂ ಯಶಸ್ಸನ್ನು ಕೆದಕಿದರೆ ಅದರ ಹಿಂದೆ ಕಷ್ಟಗಳ ಕೂಪವೇ ತೆರೆದುಕೊಳ್ಳತ್ತದೆ. ಇಂದು ಕ್ರಿಕೆಟ್ ಜಗತ್ತಿನ ದೊರೆಯಾಗಿ ರಾರಾಜಿಸುತ್ತಿರುವ ಟೀಂ ಇಂಡಿಯಾ ನಾಯಕ ಹಾಗೂ ಅಗ್ರಮಾನ್ಯ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕೂಡ ಅಂದು ಹಲವು ಕಷ್ಟಗಳನ್ನ ಎದುರಿಸಿಯೇ ಬಂದರು ಅನ್ನೋದು ತುಂಬಾ ಜನಕ್ಕೆ ಗೊತ್ತಿಲ್ಲ. ತಾವು ಇತರರಿಗಿಂತ ಚೆನ್ನಾಗಿಯೇ ಆಡಿದ್ದರೂ ತಂಡಕ್ಕೆ ಆಯ್ಕೆಯಾಗದಿದ್ದಕ್ಕೆ ಕೊಹ್ಲಿ ರಾತ್ರಿಯಿಡೀ ಅತ್ತಿದ್ದರಂತೆ. ಈ ಕುರಿತು ಸ್ವತಃ ಟೀಮ್ ಇಂಡಿಯಾ ಕ್ಯಾಪ್ಟನ್ ಅಂದಿನ […]
ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 7 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ, ಕಲಬುರಗಿಯಲ್ಲಿ ಇಂದು 4 ತಿಂಗಳ ಮಗು ಸೇರಿದಂತೆ ಹೊಸದಾಗಿ 5 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಲಬುರಗಿಯ ಐದು ಜನರಿಗೆ […]
ಬೆಂಗಳೂರು : ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಪುಂಡರಿಗೆ ಸಪೋರ್ಟ್ ಮಾಡಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮ್ಮದ್ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಹಿನ್ನಲೆ ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿದ್ದರಾಮಯ್ಯ ಎಚ್ಚರಿಕೆಯಿಂದ ಮಾತನಾಡುವಂತೆ ತಿಳಿಸಿದ್ದಾರೆ. ದಿನಕ್ಕೊಂದು ಹೇಳಿಕೆ ನೀಡಬೇಡ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಸುಮ್ಮನೆ ವಿವಾದ ಮಾಡಿಕೊಳ್ಳಬೇಡ. ತಪ್ಪು ನಡೆದಿದೆ, ಪೊಲೀಸರು ಅವರ […]
ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರೇ ಹುಷಾರ್. ಹಲ್ಲೆ, ದೌರ್ಜನ್ಯ ಮಾಡಿದ್ರೆ ಕೈ ಕಾಲ್ ಕಟ್. ಕೊರೊನಾ ವಾರಿಯರ್ಸ್ ತಂಟೆಗೆ ಬರಬೇಡಿ ಎಂದು ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹಲ್ಲೆ ಮಾಡಿದ್ರೆ ಅಂತವರ ಕೈ ಕಾಲು ಮುರಿಯಿರಿ ಎಂದು ಪೊಲೀಸ್ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ.