ಕೆ.ಆರ್.ಪುರ, ಫೆ.೨೧-ಪಾರದರ್ಶಕ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷದ ಪರ ಜನರು ಒಲವು ತೋರಿದ್ದು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಶಾಸಕ ಹೆಚ್ ನಾಗೇಶ್ ಹೇಳಿದರು.
ಮಹದೇವಪುರ ಕ್ಷೇತ್ರದ ಆವಲಹಳ್ಳಿಯಲ್ಲಿ ಡ್ರೀಮ್ ಸ್ಮಾಶರಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯದಿಂದ ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುವಂತಾಗಿದೆ,ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರು ಕುಟುಂಬದ ಕಷ್ಟಕರವಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ರಾಜ್ಯದ ಜನತೆ ಬದಲಾವಣೆ ಬಯಸುತ್ತಿದ್ದಾರೆ ಬಿಜೆಪಿ ಸರ್ಕಾರವನ್ನು ಈಗಾಗಲೇ ಜನರು ತಿರಸ್ಕಾರ ಮಾಡಿದ್ದಾರೆ ಎಂದರು.ನಾನು ಸ್ಥಳೀಯನಾಗಿದ್ದು ಜನರ ನಾಡಿತ ಚೆನ್ನಾಗಿ ಗೊತ್ತಿದೆ,ಎಲ್ಲಾ ವರ್ಗದ ಜನರ ಕಷ್ಟಸುಖಗಳಿಗೆ ಸ್ಪಂದಿಸುತ್ತೇನೆ,ಈ ಬಾರಿ ಮಹದೇವಪುರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಇಲ್ಲಿನ ಮತದಾರರು ಹಾಗೂ ಮುಖಂಡರು ಆಹ್ವಾನ ನೀಡಿದ್ದಾರೆ,ಹೀಗಾಗಿ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತೀರ್ಮಾನಕ್ಕೆ ಬಂದಿದ್ದೇನೆ.
ಪಕ್ಷದ ಹಿರಿಯ ನಾಯಕರು ಸಹ ಮಹದೇವಪುರ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.ಈ ಚುನಾವಣೆಯಲ್ಲಿ ನನಗೆ ಅವಕಾಶ ಮಾಡಿಕೊಟ್ಟರೆ ಐದು ವರ್ಷದಲ್ಲಿ ಮಹದೇವಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಬಿದರಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಪ್ಪ ಗ್ರಾ.ಪಂ ಸದಸ್ಯ ದೇವರಾಜ್, ಮುಖಂಡರಾದ ಚಿಕ್ಕ ಮುನಿಯಪ್ಪ, ನಾರಾಯಣ ಸ್ವಾಮಿ, ಪಿಳ್ಳಪ್ಪ ಮತ್ತಿತರರು ಹಾಜರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada