ಶಿಕ್ಷಣ ಇಲಾಖೆಯ ಪಠ್ಯಕ್ರಮ ಅಳವಡಿಕೆಗೆ ಮದರಸಾಗಳಿಂದ ಬೇಡಿಕೆ ಬಂದಿಲ್ಲ.

ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯವನ್ನು ಮದರಸಾಗಳಲ್ಲಿ ಅಳವಡಿಸಲು ಪೋಷಕರು ಮನವಿ ಮಾಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ವಿಧಾನಸೌಧದದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮದರಸಾಗಳಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮ ಅಳವಡಿಕೆಗೆ ಮದರಸಾಗಳಿಂದ ಬೇಡಿಕೆ ಬಂದಿಲ್ಲ.

ಆದರೆ ಪೋಷಕರು ಮದರಸಾ ಶಿಕ್ಷಣದಿಂದ ನಮ್ಮ ಮಕ್ಕಳು ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ಆಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕಷ್ಟ ಆಗುತ್ತಿದೆ. ವೃತ್ತಿಪರ ಕೋರ್ಸ್ ಪಡೆದುಕೊಳ್ಳುವುದು ಕಷ್ಟ. ಬೇರೆ ಮಕ್ಕಳಿಗೆ ‌ಕೊಟ್ಟ ಹಾಗೆ ಶಿಕ್ಷಣ ಕೊಡಿ ಎಂಬ ಮನವಿ ಮಾಡಿದ್ದಾರೆ ಎಂದರು‌.

ಆದರೆ ಮದರಸಾ ಕಡೆಯಿಂದ ಹಾಗೂ ಅಲ್ಪಸಂಖ್ಯಾತ ಇಲಾಖೆಯಿಂದ ಯಾವುದೇ ಮನವಿ ಬಂದಿಲ್ಲ. ಪೋಷಕರೇನೂ ಅಧಿಕೃತವಾಗಿ ಮನವಿ ಮಾಡಿಲ್ಲ ಎಂದು ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇದೇ ಏಪ್ರಿಲ್ 22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು (2nd PU Exams) ಆರಂಭವಾಗಲಿದೆ!

Tue Apr 19 , 2022
  ಇದೇ ಏಪ್ರಿಲ್ 22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು (2nd PU Exams) ಆರಂಭವಾಗಲಿದ್ದು, ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್   ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಪರೀಕ್ಷೆಗೆ ವಿದ್ಯಾರ್ಥಿನಿಯರು  ಹಿಜಾಬ್ಧ ರಿಸಿ ಹಾಜರಾಗುವಂತಿಲ್ಲ ಎಂದರು. SSLC ಪರೀಕ್ಷೆಯಂತೆ ಮಕ್ಕಳು ಪ್ರತ್ಯೇಕ ಕೊಠಡಿಗೆ ತೆರಳಿ ಹಿಜಾಬ್ ಅಥವಾ ಬುರ್ಕಾ ತೆಗೆದು ಪರೀಕ್ಷಾ ಕೊಠಡಿಗೆ ತೆರಳಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದಿಡಲು ಪ್ರತ್ಯೇಕ ವ್ಯವಸ್ಥೆ […]

Advertisement

Wordpress Social Share Plugin powered by Ultimatelysocial