ರೈತರಿಗೆ ಗುಡ್ ನ್ಯೂಸ್: ಭಾರೀ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಣೆ: ಸಚಿವ ಬಿ.ಸಿ. ಪಾಟೀಲ್..!

ಮೈಸೂರು: ರಾಜ್ಯಾದ್ಯಂತ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕೃಷಿ ಅಧಿಕಾರಿಗಳು ಜಮೀನಿಗೆ ತೆರಳದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ.

ಅಧಿಕಾರಿಗಳು ಮಳೆಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ.

ಬೆಳೆಹಾನಿ ಮಾಹಿತಿ ಸಂಗ್ರಹಿಸಿದ ನಂತರ ಸೂಕ್ತ ಪರಿಹಾರ ನೀಡಲಾಗುತ್ತದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ರಾಜ್ಯ ಸರ್ಕಾರ ಬೆಳೆ ಹಾನಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವರು ಅಭಯ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಮ್ಮ ಶಾಸಕರಿಗೆ ತಿಂಗಳ ಸಂಬಳ ಎಷ್ಟು ಹೆಚ್ಚಾಗಿದೆ ಗೊತ್ತಾ?

Thu May 19 , 2022
  ಬೆಂಗಳೂರು, ಮೇ 18: ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಕೊರತೆಯ ಮಧ್ಯೆಯೇ ಸಚಿವರು, ಶಾಸಕರು ಮಾತ್ರ ತಮ್ಮ ವೇತನ ಹೆಚ್ಚಿಸಿಕೊಂಡು ಬೀಗಿದ್ದಾರೆ. ಇತ್ತೀಚೆಗೆ ವಿಧಾನಮಂಡಲ ಅಧಿವೇಶನದಲ್ಲಿ ಯಾವುದೇ ಚರ್ಚೆ ಇಲ್ಲದೆ ಜನಪ್ರತಿನಿಧಿಗಳು ವೇತನ ಹೆಚ್ಚಿಸಿಕೊಂಡಿದ್ದರು. ಈಗ ಅದಕ್ಕೆ ಸರ್ಕಾರಿ ಆದೇಶವಾಗಿದೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ಸಚಿವಾಲಯದ ಸದಸ್ಯರುಗಳಿಗೆ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ (ತಿದ್ದುಪಡಿ) ವಿಧೇಯಕಕ್ಕೆ ಕಳೆದ ಫೆಬ್ರವರಿಯಲ್ಲಿ ಉಭಯ ಸದನಗಳಲ್ಲಿ ಅನುಮೋದನೆ ನೀಡಲಾಗಿತ್ತು. ಈಗ ಅದಕ್ಕೆ […]

Advertisement

Wordpress Social Share Plugin powered by Ultimatelysocial