ವಿಧಾನಸಭಾ ಕ್ಷೇತ್ರದ ಬಿಜೆಪಿಯಲ್ಲಿನ ಬಣ ರಾಜಕೀಯಕ್ಕೆ ಬೇಸತ್ತು ಜೆಡಿಎಸ್ ಪಕ್ಷ ಸೇರುತ್ತಿದ್ದೇನೆ ಎಂದು ಹಿರಿಯ ಮುಖಂಡ ಉದ್ದನೂರು ಮಹದೇವ ಪ್ರಸಾದ್ ಹೇಳಿದರು. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮುಂದುವರೆದ ಜೆಡಿಎಸ್ ಸೇರ್ಪಡೆ ಪಕ್ಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಅವರ ಪುತ್ರ ಪ್ರೀತಮ್ ನಾಗಪ್ಪ ಮುಖಂಡರ ಜೊತೆ ವಿಶ್ವಾಸ ಗಳಿಸುವಲ್ಲಿ ವಿಫಲರಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳದೆ ಇರುವುದರಿಂದ ಪಕ್ಷ ಹೀನಾಯ ಸ್ಥಿತಿಗೆ ತಲುಪಿದೆ. ಇದುವರೆಗೂ ನಡೆದ ಎಲ್ಲ ಚುನಾವಣೆಗಳಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಪುತ್ರನ ನಾಯಕತ್ವದಲ್ಲಿ ನಡೆದ ಚುನಾವಣೆಗಳಲ್ಲಿ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ .ನಾನೂ ಸಹ ಕಳೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದೇನೆ.ಈ ಹಿನ್ನೆಲೆ ನನ್ನ ರಾಜಕೀಯ ಬೆಳವಣಿಗೆಗಾಗಿ ಜೆಡಿಎಸ್ ಪಕ್ಷ ಸೇರಿಕೊಂಡಿದ್ದೇನೆ ಹೊರತು ಇದರಲ್ಲಿ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada