ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿ.
ಪಂಜಾಬ್, ಗುಜರಾತ್ ನಲ್ಲಿ ಈ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಶಾಸಕರು, ಕುಟುಂಬಸ್ಥರನ್ನ ಹೊರಗಿಟ್ಟು ಚುನಾವಣೆ ಎದುರಿಸಲಾಗಿತ್ತು. ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದು ಹೇಳಿದ್ದಾರೆ.
ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೆ ಟಿಕೇಟ್ ನೀಡಲಿಲ್ಲ. ಗುಜರಾತ್ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನು ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಅಧಿಕಾರಕ್ಕೇರಿದ್ದೇವೆ ಎಂಬ ಮಾತುಗಳನ್ನಾಡಿದ್ದಾರೆ.
ಬಿಜೆಪಿಯಲ್ಲಿ ಮಾತ್ರ ಇಂತಹ ಪ್ರಯೋಗಗಳು ನಡೆಯುತ್ತವೆ ಎಂದು ಮೈಸೂರಿನ ಬಿಜೆಪಿ ಪ್ರಮುಖರ ಸಭೆಯಲ್ಲಿ ಸಂತೋಷ್ ಮಾರ್ಮಿಕ ನುಡಿಗಳನ್ನಾಡಿದ್ದಾರೆ.
ಬಿ.ಎಲ್.ಸಂತೋಷ್ ಹೇಳಿಕೆ ಬೆನ್ನಲ್ಲೆ ಕಮಲ ಪಾಳಯದಲ್ಲಿ ಸಂಚಲ ಸೃಷ್ಟಿಯಾಗಿದ್ದು, ಹಲವು ಪ್ರಶ್ನೆಗಳು ಉತ್ತರಕ್ಕಾಗಿ ಹುಡುಕಾಟ ನಡೆಸುತ್ತಿವೆ.
ರಾಜ್ಯಕ್ಕೂ ಅನ್ವಯ ಆಗುತ್ತಾ ನಾಯಕತ್ವ ಬದಲಾವಣೆ ಸೂತ್ರ? ರಾಜ್ಯದ 2023ರ ವಿಧಾನಸಭಾ ಚುನಾವಣೆಗೂ ಇದೇ ರೀತಿ ಮಾಸ್ಟರ್ ಪ್ಲಾನ್ ಮಾಡ್ತಾರಾ? ಹಾಲಿ ಶಾಸಕರಿಗೆ ಟಿಕೇಟ್ ಕೈತಪ್ಪುವ ಬಗ್ಗೆ ಬಿ.ಎಲ್.ಸಂತೋಷ್ ಮುನ್ಸೂಚನೆ ನೀಡಿದ್ರಾ ಅನ್ನೋ ಚರ್ಚೆಗಳು ಪ್ರಾರಂಭಗೊಂಡಿವೆ.
ಇನ್ನೂ ಬಿ.ಎಲ್.ಸಂತೋಷ್ ಹೇಳಿಕೆಗೆ ಶಾಸಕ ಸಿ.ಟಿ.ರವಿ ಮಂಡ್ಯದ ಮದ್ದೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಎಲ್.ಸಂತೋಷ್ ಯಾವ ಉದ್ದೇಶದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ.
ಗೆಲ್ಲುವ ಸಾಧ್ಯತೆ ಇರುವರಿಗೆ ಪಕ್ಷ ಬೆಂಬಲ ಕೊಡುತ್ತದೆ. ದುರ್ಬಲ ಇರೋ ಕಡೆ ಬದಲಾವಣೆ ಮಾಡಲಾಗುತ್ತದೆ. ಇದು ಹಿಂದಿನಿಂದ ಬಂದಿರುವ ಪದ್ಧತಿ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ
ಗೆಲ್ಲುವ ಸಾಮರ್ಥ್ಯ ಇರುವವರಿಗೆ ನಮ್ಮ ಪಾರ್ಟಿ ಬೆಂಬಲ ಕೊಡುತ್ತಲೆ ಬಂದಿದೆ. ಸಾಮರ್ಥ್ಯ ಇದ್ದವರು ಎಲ್ಲಿದ್ರು ಸಕ್ಸಸ್ ಆಗುತ್ತಾರೆ. ದುರ್ಬಲರಿಗೆ ಮಣೆ ಹಾಕುವುದಿಲ್ಲ. ಕರ್ನಾಟಕ್ಕೆ ಕರ್ನಾಟಕವೇ ಮಾದರಿ. ಇಲ್ಲಿ ಗುಜರಾತ್ ಪಂಜಾಬ್ ಮಾದರಿ ಅನ್ನುವುದು ಇಲ್ಲ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: