ಅವರು ತಾಲ್ಲೂಕಿನ ಬೂಕನಕೆರೆ ಹೋಬಳಿ ವಿಠಲಾಪುರ ಗ್ರಾಮ ಪಂಚಾಯಿತಿಯ ಹಿಂದಿನ ಅಧ್ಯಕ್ಷೆಯಾಗಿದ್ದ ಸಾಕಮ್ಮ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಎರಡು ವರ್ಷದಿಂದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತಿರುವ ಪಲ್ಲವಿ ಗಣೇಶ್ ಇಂದು ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೀತಾ ತಿಳಿಸಿದರು.ನೂತನವಾಗಿ ಪ್ರಭಾರ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಪ್ರಭಾರ ಅಧ್ಯಕ್ಷೆ ಪಲ್ಲವಿ ಗಣೇಶ್ ನನ್ನ ಅವಧಿಯಲ್ಲಿ ಪಕ್ಷಭೇದ ಮರೆತು ಸರ್ವ ಸದಸ್ಯರು ಜೊತೆಗೂಡಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಪ್ರತಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ವಿದ್ಯುತ್ ದೀಪಗಳು, ಕುಡಿಯುವ ನೀರು, ಜಾನುವಾರು ನೀರು ಕುಡಿಯುವ ತೊಟ್ಟಿ, ಜಾನುವಾರು ಕೊಟ್ಟಿಗೆ ಹಾಗೂ ಕೆರೆ-ಕಟ್ಟೆ ಅಭಿವೃದ್ಧಿ ಇದರ ಜೊತೆಗೆ ಸರ್ಕಾರ ಇಲಾಖೆಯಿಂದ ಬರುವ ಸವಲತ್ತುಗಳನ್ನು ಸದುಪಯೋಗ ಮಾಡಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡುತ್ತಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ಗ್ರಾಮಗಳ ಅಭಿವೃದ್ಧಿ ಶ್ರಮಿಸಿ,ಕ್ಷೇತ್ರದ ಶಾಸಕರ ಸಹಕಾರದಿಂದ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸುತ್ತ ನನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಲೋಪದೋಷಗಳು ಬರದ ಹಾಗೆ ಸರ್ಕಾರದಿಂದ ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸಿಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪಿ ಡಿ ಕುಮಾರ್ ಪಿ ಜಿ ಡಿ ಕೊಪ್ಪಲು,ರಾಧ ಹರೀಶ್, ಕೆ ಪಿ ಕುಮಾರ್,ಸವಿತಾ ಸಂತೋಷ್ ಕುಮಾರ್, ಮುಖಂಡ ಪ್ರಜ್ವಲ್, ಸೇರಿದಂತೆ ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada