ಹೆಣ್ಣು ಮಗು ಹುಟ್ಟಿದಕ್ಕೆ ತಂದೆ ಆತ್ಮಹತ್ಯ…

ನವದೆಹಲಿ: ಮಕ್ಕಳೇ ಇಲ್ಲ ಎಂದು ಕೊರಗುವವರ ಮಧ್ಯೆ ಹೆಣ್ಣು ಮಗು ಜನಿಸದ್ದಕ್ಕೆ ಬೇಸರಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗರ್ತಲಾದಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯನ್ನು ಕಳೆದುಕೊಂಡ ಆಘಾತದಲ್ಲಿ ಪತ್ನಿಯೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.23 ವರ್ಷದ ಸುಪ್ರಿಯಾ ದಾಸ್ ನಾಲ್ಕು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.ಇದಕ್ಕಾಗಿ ಸುಪ್ರಿಯಾಳ ಅತ್ತೆ ಮನೆಯವರು ತೀರಾ ಅಸಮಾಧಾನ ವ್ಯಕ್ತಪಡಿಸಿದ್ದರು. ಗಂಡು ಮಗು ಜನಿಸುತ್ತದೆ ಎಂದು ಬಯಸಿದ್ದ ಸುಪ್ರಿಯಾಳ ಪತಿ ಗೋವಿಂದ ದಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಣ್ಣು ಮಗು ಜನಸಿದ್ದಕ್ಕೆ ಪತ್ನಿಯೊಂದಿಗೆ ಸತತವಾಗಿ ಜಗಳ ಮಾಡಿದ ಗೋವಿಂದ ದಾಸ್ ತನಗೆ ತಾನೇ ಬೆಂಕಿ ಸುಟ್ಟುಕೊಂಡು ಆತ್ಮಹತ್ಯೆ ಮಾಡಿದ್ದಾನೆ. ಹೆಣ್ಣು ಮಗು ಹೆತ್ತಿದ್ದಕ್ಕೆ ಚುಚ್ಚಿ ಮಾತ ನಾಡಿದ,ಅತ್ತೆಯಿಂದಾಗಿ ಸುಪ್ರಿಯಾ ಅಗರ್ತಲಾದ ವೈದ್ಯಕೀಯ ಕಾಲೇಜಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಗೌತಮನಗರದಲ್ಲಿ ಘಟನೆ ನಡೆದಿದ್ದು, ಅಗರ್ತಲಾದಿಂದ ದಕ್ಷಿಣಕ್ಕೆ 130 ಕಿಲೋ ಮೀಟರ್ ದೂರದಲ್ಲಿ ದಕ್ಷಿಣ ತ್ರಿಪುರಾ ಜಿಲ್ಲೆಯಲ್ಲಿ ಬೆಲೋನಿಯಾ ಉಪ ವಿಭಾಗದಲ್ಲಿ ಘಟನೆ ನಡೆದಿದೆ. ಮಗು ಹುಟ್ಟಿದಾಗಿನಿಂದಲೂ, ಹೆಣ್ಣು ಮಗು ಕುಟುಂಬಕ್ಕೆ ಅಶುಭ ಎಂದು ಸುಪ್ರಿಯಾಳ ಅತ್ತೆ ದೂಷಿ ಸುತ್ತಿದ್ದರು ಎಂದು ನೆರೆಹೊರೆಯ ಜನರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬೊಲಿವಿಯಾದಲ್ಲಿ ಭೀಕರ ಬಸ್ ಅಪಘಾತ: 11 ಮಂದಿ ದುರ್ಮರಣ

Sun Jan 30 , 2022
ಸುಕ್ರೆ: ಬೊಲಿವಿಯಾದ ಕೊಚಬಾಂಬದ ಕಮಿ ಮತ್ತು ಕ್ವಿಲ್ಲಾಕೊಲೊ ಪಟ್ಟಣಗಳ ನಡುವಿನ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ಸೊಂದು ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 11 ಜನರು ಸಾವನ್ನಪ್ಪಿ, 18 ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.ದುರ್ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಎಂದು ಕೊಚಬಾಂಬಾ ಪೋಲೀಸ್‌ ಇಲಾಖಾ ನಿರ್ದೇಶಕ ರೆಂಜೊ ಮರ್ಕಾಡೊ ಹೇಳಿದ್ದಾರೆ.ಶನಿವಾರ ಬೆಳಗಿನ ಜಾವ ದುರ್ಘಟನೆ ಸಂಭವಿಸಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು […]

Advertisement

Wordpress Social Share Plugin powered by Ultimatelysocial