ನಟ ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವು ಬಾಕ್ಸ್ ಆಫೀಸ್ನಲ್ಲಿ ಮಾಡಿರುವ ಸಾಧನೆ ಎಂಥದ್ದು ಎಂಬುದು ಎಲ್ಲರಿಗೂ ಗೊತ್ತಿದೆ. ಅವರೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈ ಮಧ್ಯೆ ‘ಕಾಂತಾರ’ ಸಿನಿಮಾ ರಿಲೀಸ್ಗೂ ಮುನ್ನ ರಿಷಬ್ ಶೆಟ್ಟಿ ಒಂದಷ್ಟು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ‘ಕಾಂತಾರ’ ತೆರೆಕಂಡ ಬಳಿಕ ಆ ಸಿನಿಮಾಗಳಲ್ಲಿ ಒಂದಷ್ಟು ಬದಲಾವಣೆ ಆಗಿದೆ. ಅದರಲ್ಲಿ ಮೊದಲನೆಯದು, ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ! ಹೌದು, ರಕ್ಷಿತ್ ಶೆಟ್ಟಿ ಅವರ ಪರಮ್ವಾ ಸ್ಟುಡಿಯೋಸ್ ಬ್ಯಾನರ್ ಮೂಲಕ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಘೋಷಣೆ ಆಗಿತ್ತು. ರಿಷಬ್ ಶೆಟ್ಟಿ ಕೂಡ ಆ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತವಾಗಿತ್ತು. ಅದರಲ್ಲೀಗ ಬದಲಾವಣೆ ಆಗಿದ್ದು, ರಿಷಬ್ ಸಿನಿಮಾದಿಂದ ಹೊರನಡೆದಿದ್ದಾರೆ.ರಿಷಬ್ ಶೆಟ್ಟಿ ಜಾಗಕ್ಕೆ ‘ಲೂಸ್ ಮಾದ’ ಯೋಗಿ
‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ದಿಗಂತ್, ರಿಷಬ್ ಶೆಟ್ಟಿ ಅಚ್ಯುತ್ ಕುಮಾರ್ ಮುಖ್ಯಭೂಮಿಕೆಯಲ್ಲಿ ಇದ್ದರು. ಆದರೆ ಈಗ ರಿಷಬ್ ಶೆಟ್ಟಿ ಅವರು ಸಿನಿಮಾದಿಂದ ಹೊರನಡೆದಿದ್ದು, ಆ ಜಾಗಕ್ಕೆ ಲೂಸ್ ಮಾದ ಯೋಗಿ ನಟಿಸಲಿದ್ದಾರೆ. ಆದರೆ ಈ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಪರಮ್ವಾ ಸ್ಟುಡಿಯೋಸ್ ಬ್ಯಾನರ್ ಕಡೆಯಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.ರಕ್ಷಿತ್ ಶೆಟ್ಟಿ ಅವರ ಬ್ಯಾನರ್ ಸಿನಿಮಾಗಳಲ್ಲಿ ಬರಹಗಾರರಾಗಿ ಕೆಲಸ ಮಾಡಿದ್ದ ಅಭಿಜಿತ್ ಮಹೇಶ್ ‘ಬ್ಯಾಚುಲರ್ ಪಾರ್ಟಿ’ ಸಿನಿಮಾಗೆ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದರು. ಸೆಪ್ಟೆಂಬರ್ ತಿಂಗಳಲ್ಲಿ ‘ಬ್ಯಾಚುಲರ್ ಪಾರ್ಟಿ’ ಸಿನಿಮಾವು ಸೆಟ್ಟೇರಿತ್ತು. ಆ ವೇಳೆ ಮಾತನಾಡಿದ್ದ ರಿಷಬ್ ಶೆಟ್ಟಿ, ‘ನಾನು, ಅಭಿಜಿತ್ ಮಹೇಶ್ ಒಟ್ಟಾಗಿ ‘ಕಿರಿಕ್ ಪಾರ್ಟಿ’ಯಲ್ಲಿ ಕೆಲಸ ಮಾಡಿದವರು. ಈಗ ಮತ್ತೊಮ್ಮೆ ಒಟ್ಟಾಗಿ ಸೇರಿದ್ದೇವೆ. ಅಭಿಜಿತ್ ಮಹೇಶ್ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಒಳ್ಳೆಯ ಪಾತ್ರ ನೀಡಿದ್ದಾರೆ.