ಬಾಗಲಕೋಟೆ: ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆಂದು ತೆರಳಿದ್ದ ಮೂವರು ವಾಪಸ್ ಮನೆಗೆ ಬರುವಾಗ ದುರಂತ ಅಂತ್ಯಕಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮಕ್ಕೆ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆ ಮೂವರು ಕಾರಿನಲ್ಲಿ ಬಂದಿದ್ದರು. ಅಂತ್ಯಸಂಸ್ಕಾರ ಮುಗಿದ ಬಳಿಕ ರಾತ್ರಿ ವಾಪಸ್ ಕಾರಿನಲ್ಲಿ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದರು.ಈ ವೇಳೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ಬಳಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಸಾವಪ್ಪಿದ್ದಾರೆ.ಗದಗ ಜಿಲ್ಲೆ ಹಡಗಲಿ ಗ್ರಾಮದ ಬಸನಗೌಡ ಪಾಟಿಲ್, ಮಂಜುನಾಥ ಮಾರನಬಸರಿ ಮತ್ತು ಸಂಗಮ್ಮ ಪಾಟಿಲ್ ಮೃತ ದರ್ದೈವಿಗಳು. ಜಾಲಿಹಾಳ ಗ್ರಾಮದ ಬಳಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ರ್ವ ಮಹಿಳೆ ಗದಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada