ಬಾಗಲಕೋಟೆ.ಯಾವುದೇ ತಪ್ಪು ಮಾಡದಿದ್ದರೂ ಅಮಾಯಕರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಕೆಲವರು ಸೃಷ್ಟಿ ಮಾಡಿದ ಅಶಾಂತಿಯ ವಾತಾವರಣದಿಂದ ಕೆರೂರಿನಲ್ಲಿ ಉದ್ರಿಕ್ರ ವಾತಾವರಣ ನಿರ್ಮಾಣವಾಗಿದೆ. ಯಾವುದೇ ತಪ್ಪು ಮಾಡದಿದ್ದರೂ ಅಮಾಯಕರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ನಮ್ಮ ಮನಸ್ಸಿಗೆ ಭಾರಿ ನೋವಾಗಿತ್ತು.
ಈ ನೋವಿನಲ್ಲಿ ಸಿದ್ದರಾಮಯ್ಯ ಅವರ ಮಂದೆ ಅನುಚಿತವಾಗಿ ನಡೆದುಕೊಳ್ಳಬೇಕಾಯಿತು. ಇದಕ್ಕಾಗಿ ನಾವು ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ. ಸಿದ್ದರಾಮಯ್ಯ ಅವರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇವೆ.
ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿಸುವ ಯಾವುದೇ ಉದ್ದೇಶ ನಮ್ಮದಾಗಿರಲಿಲ್ಲ. ಅವರಿಗೆ ಅವಮಾನ ಮಾಡುವ ಉದ್ದೇಶವೂ ಎಳ್ಳಷ್ಟು ನಮ್ಮಲ್ಲಿ ಇರಲಿಲ್ಲ.
ನಡೆದಿರುವ ಘಟನೆಗಳ ಹಿನ್ನೆಲೆಯಲ್ಲಿ ನಮ್ಮ ಮನಸ್ಸಿಗೆ ತೀವ್ರ ಘಾಸಿಯಗಿದೆ. ಸಿದ್ದರಾಮಯ್ಯ ಅವರು ಹಣ ನೀಡುವುದಕ್ಕಿಂತ ಅವರು ನಮಗೆ ನ್ಯಾಯ ಒದಗಿಸಿಕೊಡಬೇಕು ಎಂಬುದೇ ನಮ್ಮ ಕಳಕಳಿಯ ಮನವಿ. ಸಿದ್ದರಾಮಯ್ಯ ಅವರು ನಮ್ಮ ಸಮುದಾಯದ ನಾಯಕರು. ಸದಾ ನಮ್ಮ ಸಮುದಾಯದ ಪರ ನಿಲ್ಲುವ ರಾಜಕಾರಣಿ ಅವರು. ಈ ರೀತಿ ಇರುವಾಗ ಅವರಿಗೆ ಅವಮಾನ ಮಾಡುವ ಮಟ್ಟಕ್ಕೆ ನಾವು ಹೋಗುವುದಿಲ್ಲ.
ಆಕಸ್ಮಿಕವಾಗಿ ನಡೆದಿರುವ ಘಟನೆ ಇದಾಗಿಯೇ ಹೊರತು ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿಸುವ ಉದ್ದೇಶ ನಮ್ಮದಾಗಿರಲಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇವೆ.

– ಶ್ರೀಮತಿ ಬಿಸ್ಮಿಲ್ಲಾ ಹನೀಫಸಾಬ ಚಿಕ್ಕೂರ

-ರಾಜೇಸಾಬ ಜಾಫರಸಾಬ ಮಳಗಲಿ

-ದಾವಲಮಲ್ಲಿಕ್ ಮೆಹಬೂಬಸಾಬ ಮಳಗಲಿ

-ರಫೀಕ ಕರೀಮಸಾಬ ಮಳಗಲಿ

-ಹನೀಫ ಚಾಂದಸಾಬ ಚಿಕ್ಕೂರ

-ಶ್ರೀಮತಿ ರಾಜಮಾ ರೆಹಮಾನಸಾಬ ಕಲಾದಗಿ

-ಶ್ರೀಮತಿ ಯಾಸ್ಮೀನ ರಾಜೇಸಾಬ ಮಳಗಲಿ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರು:ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ

Sun Jul 17 , 2022
ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕುಖ್ಯಾತ ರೌಡಿ ಶೀಟರ್ ಕಾವೂರಿನ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಾಲ್ ಮತ್ತಾತನ ಪತ್ನಿ ಅಂಜನಾಳನ್ನು ಸಿಸಿಬಿ ಪೊಲೀಸರು ಮಂಗಳೂರಲ್ಲಿ ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಎಸ್ಸೈ ರಾಜೇಂದ್ರ ಬಿ. […]

Advertisement

Wordpress Social Share Plugin powered by Ultimatelysocial