6 ತಿಂಗಳ ಹಿಂದಷ್ಟೇ ಸಂಚಾರಕ್ಕೆ ಮುಕ್ತವಾಗಿದ್ದ ಕೆಳಸೇತುವೆಯ ರಸ್ತೆ

 

ಬಾಗಲಕೋಟೆ: ನಿರಂತರ ಮಳೆಯಿಂದಾಗಿ ಕೆಳಸೇತುವೆಯ ರಸ್ತೆ ತಡೆಗೋಡೆ ಕುಸಿದಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ-ಗದಗ ಜಿಲ್ಲೆ ಕೊಣ್ಣೂರ ಮಧ್ಯದ ಹಳ್ಳದ ಸೇತುವೆಯ ತಡೆಗೋಟೆ ಕುಸಿದಿರುವುದರಿಂದ ಜನರು ಪರದಾಡುವಂತಾಗಿದೆ.

ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆ ಇದಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕೆಳಸೇತುವೆ ನಿರ್ಮಾಣಕ್ಕೆ ಅನುಮತಿ ದೊರೆತಿತ್ತು, ಆರು ತಿಂಗಳ ಹಿಂದೆಯಷ್ಟೇ ಕಾಮಗಾರಿ ಮುಗಿದು ಸಂಚಾರಕ್ಕೆ ಮುಕ್ತವಾಗಿತ್ತು.

ಸದ್ಯ ಗೋವನಕೊಪ್ಪ-ಕೊಣ್ಣುರು ಸಂಪರ್ಕ ಕಡಿತಗೊಂಡಿದ್ದು, ಕಳಪೆ ಕಾಮಗಾರಿಯಿಂದಲೇ ಈ ಸೇತುವೆ ತಡೆಗೋಡೆ ಕುಸಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ 1,374 ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ; 4.8 ಪ್ರತಿಶತ ಧನಾತ್ಮಕತೆಯ ದರ

Sun Jul 17 , 2022
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 1,374 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ನಾಲ್ಕು ತಿಂಗಳ ಅಂತರದ ನಂತರ ಮೂರು ಸಾವುಗಳು ದಾಖಲಾಗಿವೆ. ಬೆಂಗಳೂರಿನಲ್ಲಿ ಇಬ್ಬರು ವೈರಸ್‌ಗೆ ಬಲಿಯಾಗಿದ್ದು, ಬಳ್ಳಾರಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಒಟ್ಟು 777 ಮಂದಿ ಕೋವಿಡ್ ಪೀಡಿತರನ್ನು ಬಿಡುಗಡೆ ಮಾಡಲಾಗಿದೆ. 7,296 ಜನರು ಆಸ್ಪತ್ರೆ ಮತ್ತು ಆಯಾ ನಿವಾಸಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಸೋಂಕಿತರಲ್ಲಿ ಹೆಚ್ಚಿನವರು […]

Advertisement

Wordpress Social Share Plugin powered by Ultimatelysocial