ಮೊದಲ ದಿನ ಲೋಕಸಭೆಯಲ್ಲಿ ವಿತ್ತ ಸಚಿವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಕರ್ನಾಟಕ ಸೇರಿದಂತೆ ೯ ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ೨೦೨೪ ರ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಫೆ. ೧ರಂದು ಪ್ರಕಟವಾಗುವ ಕೇಂದ್ರ ಮುಂಗಡ ಪತ್ರದಲ್ಲಿ ಬರಪೂರ ಯೋಜನೆ ಪ್ರಕಟಿಸುವ ಮೂಲಕ ಜನ ಮನ ಗೆಲ್ಲಲು ಕೇಂದ್ರ ಸರ್ಕಾರ ಮುಂದಾಗಿದೆ.ನಾಳೆಯಿಂದ ಎರಡು ಹಂತದಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿದೆ. ನಾಡಿದ್ದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ೨೦೨೩-೨೪ನೇ ಸಾಲಿನ ಮುಂಗಡ ಪತ್ರ ಮಂಡನೆ ಮಾಡಲಿದ್ದು . ಈ ಭಾರಿಯೂ ಕಾಗದ ರಹಿತ ಮುಂಗಡ ಪತ್ರ ಮಂಡನೆಯಾಗಲಿದೆ.ಜನರ ನಿರೀಕ್ಷೆ ಹುಸಿಯಾಗದಂತೆ ಸ್ವಚ್ಛತೆ ಮತ್ತು ಸುರಕ್ಷತೆ ಖಚಿತಪಡಿಸಿಕೊಳ್ಳುವ ಜೊತೆಗೆ “ರೈಲ್ವೆ ಪ್ರಯಾಣ ದರ ಏರಿಕೆಯಾಗದಂತೆ ನೋಡಿಕೊಳ್ಳುವುದು ಪ್ಲಾಟ್ಫಾರ್ಮ್ ಟಿಕೆಟ್ ದರವನ್ನು ೫೦ ರೂ.ನಿಂದ ೧೦ ರೂ.ಗೆ ಇಳಿಸುವ ಸಾಧ್ಯತೆ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಆಶಯ ಮತ್ತು ಚುನಾವಣೆಯನ್ನು ಗೆಲ್ಲುವ ಕಾರ್ಯತಂತ್ರದ ಭಾಗವಾಗಿ ಬಜೆಟ್ ಮಂಡನೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.ಅದರಲ್ಲಿಯೂ ಈ ವರ್ಷ ನಡೆಯಲಿರುವ ೯ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಕೇಂದ್ರ ಮುಂಗಡ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡನೆಗೆ ಸಿದ್ದತೆ ಮಾಡಿಕೊಂಡಿದ್ದು ಚುನಾವಣೆ ನಡೆಯುವ ರಾಜ್ಯಗಳಿಗೆ ಬರಪೂರ ಕೊಡುಗೆ ಹರಿದು ಬರುವ ನಿರೀಕ್ಷೆ ಇದೆ.
ಇದೇ ಸಂದರ್ಭದಲ್ಲಿ ೨೦೨೩-೨೪ ನೇ ಸಾಲಿನ ಆರ್ಥಿಕತೆಯನ್ನು ಅಂದಾಜು ಮಾಡುವ ಹಣಕಾಸು ವರದಿಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ.
https://play.google.com/store/apps/details?id=com.speed.newskannada