ಪನಾಮಾ ಪೇಪರ್ಸ್​ ಲೀಕ್ ಪ್ರಕರಣ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತೆ ಸಂಕಷ್ಟ

ಪನಾಮಾ ಪೇಪರ್ಸ್​ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್  ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ  ಸೋಮವಾರ ಸಮನ್ಸ್ ಜಾರಿ ಮಾಡಿದೆ.ಜಾರಿ ನಿರ್ದೇಶಾನಾಲಯ  ಸಂಸ್ಥೆಯು ತನಿಖೆ ನಡೆಸುತ್ತಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ನಟಿ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.ಪನಾಮಾ ಪೇಪರ್ಸ್’ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಈ ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಿದೆ. 2016ರಿಂದಲೂ ಪನಾಮಾ ಪೇಪರ್ಸ್​ ಲೀಕ್​ ಪ್ರಕರಣ ಸದ್ದು ಮಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.ಮೂಲಗಳ ಪ್ರಕಾರ ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಲಾಗಿದೆ. ಮುಂಬೈನಲ್ಲಿರುವ ಅವರ ‘ಪ್ರತೀಕ್ಷಾ’ ನಿವಾಸಕ್ಕೆ ಸಮನ್ಸ್​ ತಲುಪಿದೆ. 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುಂಡಾಟಿಕೆ ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಾಗುತ್ತದೆ:ಸಿಎಂ ಬೊಮ್ಮಾಯಿ

Mon Dec 20 , 2021
ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದರು.ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳಯುವಂತೆ […]

Advertisement

Wordpress Social Share Plugin powered by Ultimatelysocial