ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದಂತ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಈ ಬಾರಿ ದ್ವಿತೀಯ ಬಹುಮಾನ ದೊರೆತಿದೆ. ಇದು ಮತ್ತೆ ಆತ್ಮ ನಿರ್ಭಾರ್ ಭಾರತವನ್ನು ನಿರ್ಮಿಸಲು ಸಹಕಾರಿ ಆಗಲಿದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತ ಪಡಿಸಿದ್ದಾರೆ.ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ, ಕರ್ನಾಟಕದ ಸ್ತಭ್ದ ಚಿತ್ರ ‘ಸಾಂಪ್ರದಾಯಕ ಕರಕುಶಲ ವಸ್ತುಗಳ ತೊಟ್ಟಿಲು’ ಎರಡನೇ ಸ್ಥಾನಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ. ಈ ಗೌರವವೂ ನಮ್ಮೆಲ್ಲರನ್ನು ಆಗಲು ಪ್ರೇರೇಪಿಸಲಿ. ನಮ್ಮ ರಾಜ್ಯದ ಕರಕುಶಲಕರ್ಮಿಗಳಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಿ ಎಂಬುದಾಗಿತ ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada