ಜೂನ್ 3ಕ್ಕೆ ತೆರೆಮೇಲೆ ಸಂದೀಪ್ ಉನ್ನಿಕೃಷ್ಣನ್ ಜೀವನಚರಿತ್ರೆ ಮೇಜರ್ ರಿಲೀಸ್…

ಬೆಂಗಳೂರಿನಲ್ಲಿ ಸಂದೀಪ್ ಅಭಿಮಾನಿಗಳಿಗಾಗಿ ಫ್ರೀ ಶೋ ಆಯೋಜಿಸಿದ್ದ ಚಿತ್ರತಂಡ

ಹುತಾತ್ಮ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜೀವನ ಕುರಿತಾಗಿ ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಮೇಜರ್ ಸಿನಿಮಾ‌ ಬರ್ತಾ ಇದೆ. ಇದೇ ತಿಂಗಳ ಮೂರಕ್ಕೆ ಸಿನಿಮಾ ತೆರೆಗೆ ಬರ್ತಿದೆ. ಹೀಗಾಗಿ ಇಡೀ ತಂಡ ಬೆಂಗಳೂರಿಗೆ ಆಗಮಿಸಿ ಪ್ರಚಾರ ನಡೆಸಿತು.ತೆಲುಗು ನಟ ಅಡಿವಿ ಶೇಷ್ ಸಂದೀಪ್ ಉನ್ನಿಕೃಷ್ಣನ್ ಪಾತ್ರ ನಿರ್ವಹಿಸುವುದರ ಜೊತೆಗೆ ಸಿನಿಮಾಗೆ ಕಥೆ ಕೂಡ ಬರೆದಿದ್ದು, ಪ್ರಿನ್ಸ್ ಮಹೇಶ್ ಬಾಬು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಅಡಿವಿ ಶೇಷ್, ಸಂದೀಪ್ ಸರ್ ಪಾತ್ರ ಮಾಡುವುದು‌ ದೊಡ್ಡ ಚಾಲೆಂಜ್ ಆಗಿತ್ತು. ನಾನು ಲೆಫ್ಟ್ ಹ್ಯಾಂಡ್, ಸಂದೀಪ್ ಸಾರ್ ರೈಟ್ ಹ್ಯಾಂಡ್. ಸಂದೀಪ್ ಸಾರ್ ಬಾಲ್ಯ, ಕಾಲೇಜ್ ಮತ್ತು ಸೇನೆಗೆ ಸೇರುವ ವಯಸ್ಸು ಮಾಡೋದು ಕಷ್ಟ ಆಯಿತು. ತೂಕ ಕಡಿಮೆ ಮಾಡಿಕೊಂಡು ನಂತರ ಮತ್ತೆ ತೂಕ ಜಾಸ್ತಿ ಮಾಡಿಕೊಳ್ಳಬೇಕಿತ್ತು. ಅದು ನನಗೆ ಸವಾಲಿನ ಕೆಲಸವಾಗಿತ್ತು. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಪ್ರಿನ್ಸ್ ಮಹೇಶ್ ಬಾಬು ಈ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು. ಕನ್ನಡದಲ್ಲಿ ಕಿಚ್ಚ ಸುದೀಪ್ ಹಾಗೂ ರಕ್ಷಿತ್ ಶೆಟ್ಟಿ ನನ್ನ ಫೇವರೇಟ್ ನಟರು ಎಂದರು.ಮೇಜರ್ ಸಂದೀಪ್ ತಂದೆ-ತಾಯಿ ಬೆಂಗಳೂರಿನಲ್ಲಿ ವಾಸವಾಗಿರುವುದರಿಂದ ಅವರ ಪೋಷಕರು ಹಾಗೂ ಅಭಿಮಾನಿಗಳಿಗಾಗಿ ಚಿತ್ರತಂಡ ಬೆಂಗಳೂರಿನಲ್ಲಿ ಉಚಿತ ಶೋ ಆಯೋಜಿಸಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ತೂತು ಮಡಿಕೆ' ಟೈಟಲ್ ಟ್ರ್ಯಾಕ್ ರಿಲೀಸ್....ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದೆ ಹಾಡು!

Thu Jun 2 , 2022
ಪ್ರತಿಭಾನ್ವಿತ ತಂಡವೇ ಸೇರಿ ತಯಾರಿಸುವ ತೂತು ಮಡಿಕೆ ಸಿನಿಮಾ ರಿಲೀಸ್ ಹೊಸ್ತಿಲಿನಲ್ಲಿ ನಿಂತಿದ್ದು, ಚಿತ್ರತಂಡ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಮೋಷನ್ ಪೋಸ್ಟರ್ ಹಾಗೂ ಯಾಮಾರಿದೆ ಹೃದಯ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ತೂತು ಮಡಿಕೆ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ.ನಿತಿನ್ ನಾರಾಯಣ್ ಕ್ಯಾಚಿ-ಮ್ಯಾಚಿ ಸಾಹಿತ್ಯವಿರುವ ಹಾಡಿಗೆ, ಚೇತನ್ ನಾಯ್ಕ್ ಧ್ವನಿಯಾಗಿದ್ದು, ಸ್ವಾಮಿನಾಥನ್ ಆರ್.ಕೆ ಸಂಗೀತದ ಕಂಪು ಹಾಡಿನ ಇಂಪನ್ನು ಮತ್ತಷ್ಟು ಹೆಚ್ಚಿಸಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಯಾಮಾರಿದೆ […]

Advertisement

Wordpress Social Share Plugin powered by Ultimatelysocial