ಬೆಂಗಳೂರಲ್ಲಿ 45 ಮಂದಿ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಅಪಘಾತ :

 

ಬೆಂಗಳೂರು: ಮೆಟ್ರೋ ಪಿಲ್ಲರ್​​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬಸ್​ನಲ್ಲಿದ್ದ 45 ಪ್ರಯಾಣಿಕರ ಪೈಕಿ 29 ಮಂದಿ ಗಾಯಗೊಂಡ ಘಟನೆ ಭಾನುವಾರ ಮಧ್ಯರಾತ್ರಿ ಬೆಂಗಳೂರಲ್ಲಿ ಸಂಭವಿಸಿದೆ.
ಮಡಿಕೇರಿಯಿಂದ ಬೆಂಗಳೂರಿಗೆ ಬಂದ ಕೆಎಸ್​ಆರ್​ಟಿಸಿ ಬಸ್​ ಕೆಂಗೇರಿ ಬಳಿ ಮೈಸೂರು ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಬಳಿ 4 ಅಡಿ ಎತ್ತರದ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ಮೆಟ್ರೋ ಪಿಲ್ಲರ್​ಗೆ ಡಿಕ್ಕಿಯಾಗಿದೆ.

ರಸ್ತೆ ಗುಂಡಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್​ ಮೆಟ್ರೋಪಿಲ್ಲರ್​ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಗಾಯಗೊಂಡ 29 ಪ್ರಯಾಣಿಕರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಿನೇಶ್ ಕಾರ್ತಿಕ್‌ಗಾಗಿ ಈ ತ್ಯಾಗಕ್ಕೆ ಸಿದ್ಧವಾಗಿದ್ದ ನಾಯಕ:

Mon May 9 , 2022
  ಭಾನುವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಈ ಆವೃತ್ತಿಯಲ್ಲಿಯೇ ಎಸ್‌ಆರ್‌ಹೆಚ್ ವಿರುದ್ಧ ಅನುಭವಿಸಿದ್ದ ಹೀನಾಯ ಸೋಲಿಗೆ ಆರ್‌ಸಿಬಿ ಸೇಡು ತೀರಿಸಿಕೊಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಆರ್‌ಸಿಬಿ ಅಮೋಘ ಪ್ರದರ್ಶನ ನೀಡಿ ಪಂದ್ಯವನ್ನು ಸಂಪೂರ್ಣವಾಗಿ ಅಂತಿಮ ಕ್ಷಣದವರೆಗೂ ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ […]

Advertisement

Wordpress Social Share Plugin powered by Ultimatelysocial