ಬೆಂಗಳೂರು, ಅಕ್ಟೋಬರ್ 14: ಕಳೆದೊಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಗುರುವಾರ ನಗರದಲ್ಲಿ ಸುರಿದ ಮಳೆಗೆ ಮಡಿವಾಳ ಕೆರೆ ತುಂಬಿ ಹರಿದಿದೆ.
ಮಡಿವಾಳ ಕೆರೆ ತುಂಬಿರುವುದರಿಂದ ಬಿಟಿಎಂ ಲೇಔಟ್, ಎಚ್ಎಸ್ಆರ್ ಲೇಔಟ್, ಅನುಗ್ರಹ ಲೇಔಟ್, ಮತ್ತು ಮಡಿವಾಳ ಪ್ರದೇಶಗಳು ಸೇರಿದಂತೆ ಹಲವು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಈ ಮಧ್ಯೆ ಮುಂದಿನ ಮೂರು ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.