ಬಸವಲಿಂಗಯ್ಯ ಹಿರೇಮಠ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲೂರು ಗ್ರಾಮದಲ್ಲಿ 1959ರಲ್ಲಿ ಜನಿಸಿದರು. ತಮ್ಮ ಐದನೇ ವಯಸ್ಸಿನಲ್ಲಿಯೇ ಹಾರ್ಮೋನಿಯಮ್ ನುಡಿಸುತ್ತ ಭಜನೆ ಸಂಗೀತದಲ್ಲಿ ಪಾಲ್ಗೊಳ್ಳುತ್ತಿದ್ದರು. ಶಾಲಾ, ಕಾಲೇಜು ದಿನಗಳಲ್ಲಿ ಗ್ರಾಮೀಣ ರಂಗಭೂಮಿ ನಾಟಕಗಳಲ್ಲಿ ನಟನಾಗಿ, ಹಾಡುಗಾರನಾಗಿ ರಾಜ್ಯಾದ್ಯಂತ ಸಂಚರಿಸಿ ಪ್ರದರ್ಶನ ನೀಡಿದ್ದರು. ಜಾನಪದ ವಿಷಯವನ್ನು ಆಯ್ದುಕೊಂಡು ಎಂ. ಎ. ಪದವಿ ಗಳಿಸಿದ್ದರು.
ಬಸವಲಿಂಗಯ್ಯ ಹಿರೇಮಠ ನಟ, ಗಾಯಕ, ಸಂಗೀತ ನಿರ್ದೇಶಕ ಹೀಗೆ ಹತ್ತು ಹಲವು ಪ್ರತಿಭಾನ್ವಿತ ರೂಪ ತಳೆದಿದ್ದವರು. ಇವರು ದಾಸ, ಶರಣ, ತತ್ವಪದಗಳು, ಬಯಲಾಟ ಈ ಎಲ್ಲ ಪ್ರಕಾರದ ಸಾಹಿತ್ಯವನ್ನು ದೇಶ ವಿದೇಶಗಳಲ್ಲಿ ಪಸರಿಸಿದ್ದರು.
ಬಸವಲಿಂಗಯ್ಯ ಹಿರೇಮಠ 1983ರಲ್ಲಿ ನೀನಾಸಂ, ಜನಸ್ಪಂದನ ಶಿಬಿರಗಳ ಮೂಲಕ ರಂಗಭೂಮಿಗೆ ಪ್ರವೇಶ ಪಡೆದರು. ಬಿ.ವಿ.ಕಾರಂತರೊಂದಿಗೆ ರಂಗಸಂಗೀತ ಕುರಿತು ಅಭ್ಯಾಸ ಮಾಡಿ, ಧಾರವಾಡದಲ್ಲಿ ಜಾನಪದ ಸಂಶೋಧನಾ ಕೇಂದ್ರ ಸ್ಥಾಪಿಸಿದರು. ಕುಲಗೋಡು ತಮ್ಮಣ್ಣ ವಿರಚಿತ 12 ಗಂಟೆಗಳ ಅವಧಿಯ ‘ಶ್ರೀ ಕೃಷ್ಣ ಪಾರಿಜಾತ’ವನ್ನು ಮೂರು ಗಂಟೆ ಕಾಲಕ್ಕೆ ಅಳವಡಿಸಿ ಪ್ರೇಕ್ಷಕರಿಗೆ ಮನ ಮುಟ್ಟುವಂತೆ ಮಾಡಿ ಸಾವಿರಾರು ಪ್ರದರ್ಶನಗಳು ಕಾಣುವಂತೆ ಮಾಡಿದರು. ಪತ್ತಾರ ಮಾಸ್ತರರ ‘ಸಂಗ್ಯಾ ಬಾಳ್ಯಾ’ ಪದ್ಯಕ್ಕೆ ರಂಗರೂಪ ನೀಡಿದ್ದರು.
ಬಸವಲಿಂಗಯ್ಯ ಹಿರೇಮಠ ತಾವು ಸ್ಥಾಪಿಸಿದ ಜಾನಪದ ಸಂಶೋಧನಾ ಸಂಸ್ಥೆ ಮೂಲಕ ನೂರಾರು ಯುವ ಕಲಾವಿದರಿಗೆ ಜಾನಪದ ಕಲಾ ತರಬೇತಿ ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: