ಕರ್ನಾಟಕ ಪೊಲೀಸರ ಬಹುದಿನದ ಬೇಡಿಕೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ

 

ಬೆಂಗಳೂರು, ಡಿಸೆಂಬರ್ 21ಕರ್ನಾಟಕ ಪೊಲೀಸರ ಬಹುದಿನದ ಬೇಡಿಕೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಕೆಲವು ಷರತ್ತುಗಳೊಂದಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ನಿರ್ಬಂಧಿತವಾಗಿದ್ದ ಅಂತರ ಜಿಲ್ಲಾ ವರ್ಗಾವಣೆಗೆ ಅನುಮೋದನೆ ನೀಡಲಾಯಿತುಕೇರಂ, ಚೆಸ್ ಆಟಗಳಿಗೆ ಪೊಲೀಸ್ ಅನುಮತಿ ಅನಗತ್ಯ; ಹೈಕೋರ್ಟ್ಪೊಲೀಸ್ ಇಲಾಖೆಗೆ ಸೇರಿ ಮೂರು ವರ್ಷ ಪೂರ್ಣಗೊಂಡವರು, ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷ ಸೇವೆ ಸಲ್ಲಿಕೆ ಮಾಡಿದ ಸಿಬ್ಬಂದಿ ಇತರ ಜಿಲ್ಲೆ ಅಥವ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ.ಪೊಲೀಸ್ ನೇಮಕಾತಿ ಇತಿಹಾಸದಲ್ಲಿ ಪಿಎಸ್‌ಐ ಹಗರಣ ಒಂದು ಕಪ್ಪು ಚುಕ್ಕೆ-ಆರಗ ಜ್ಞಾನೇಂದ್ರ ಮೊದಲು ರಾಜ್ಯ ನಾಗರಿಕ ಸೇವಾ ನಿಯಮದ ಅಡಿ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶವಿತ್ತು. ಪತಿ/ ಪತ್ನಿ ಸರ್ಕಾರಿ ಉದ್ಯೋಗಿಯಾಗಿದ್ದರೆ ಇಬ್ಬರೂ ಒಂದೇ ಜಿಲ್ಲೆಗೆ ವರ್ಗಾವಣೆಗೊಳ್ಳಲು ಅವಕಾಶವಿತ್ತುಮಂಗಳೂರಿನಲ್ಲಿ ವಕೀಲನ ಮೇಲೆ ದೌರ್ಜನ್ಯ ಆರೋಪ: ಪೊಲೀಸ್ ಅಧಿಕಾರಿ ಅಮಾನತು 2021ರಲ್ಲಿ ರಾಜ್ಯ ನಾಗರಿಕ ಸೇವಾ ತಿದ್ದುಪಡಿ ನಿಯಮದ ಬಳಿಕ ಅಂತರ ಜಿಲ್ಲಾ ವರ್ಗಾವಣೆ ರದ್ದುಗೊಳಿಸಲಾಗಿತ್ತು. ಆದ್ದರಿಂದ ಪೊಲೀಸರು ಅಂತರ ಜಿಲ್ಲಾ ವರ್ಗಾವಣೆಗೆ ಒಪ್ಪಿಗೆ ನೀಡಬೇಕು ಎಂದು ಒತ್ತಾಯಿಸಿದ್ದರು.ಪಿಎಸ್‌ಐ, ಎಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್, ಇಲಾಖೆಯ ಗ್ರೂಪ್ ಸಿ, ಡಿ ವೃಂದದ ಸಿಬ್ಬಂದಿಗೆ ಇದರಿಂದಾಗಿ ಅನುಕೂಲವಾಗಲಿದೆ. ಅಂತರ ಜಿಲ್ಲಾ ವರ್ಗಾವಣೆಗೆ ರದ್ದಾಗಿದ್ದರಿಂದ ಕೌಟುಂಬಿಕ ಜೀವನಕ್ಕೆ ತೊಂದರೆ ಉಂಟಾಗಿತ್ತು.ಬೆಂಗಳೂರು ಕಮೀಷನರೇಟ್‌ನಲ್ಲಿ ಉದ್ಯೋಗ ಸಲ್ಲಿಸುತ್ತಿರುವ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶವಿತ್ತು. ಆದರೆ ಕಡ್ಡಾಯವಾಗಿ 7 ವರ್ಷ ಸೇವೆ ಪೂರೈಸಿರಬೇಕು ಎಂಬ ನಿಯಮವಿತ್ತು.ಎರಡು ವರ್ಷದಲ್ಲಿ ನಿವೃತ್ತಿ ಹೊಂದುವವರಿಗೆ, ವಿಧವೆಯರಿಗೆ, ಪತ್ನಿ/ ಮಕ್ಕಳು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಮಾತ್ರ ಅಂತರ ಜಿಲ್ಲಾ ವರ್ಗಾವಣೆ ಮಾಡಲು ಅವಕಾಶ ನೀಡಲಾಗಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

'ಕ್ರಾಂತಿ' ಟಪ್ಪಾಂಗುಚಿ ಸಾಂಗ್

Fri Dec 23 , 2022
  ಸ್ಯಾಂಡಲ್‌ವುಡ್‌ನಲ್ಲಿ ‘ಕ್ರಾಂತಿ’ ಗಾನ ಬಜಾನಾ ಶುರುವಾಗಿದೆ. ಈಗಾಗಲೇ ಚಿತ್ರದ 2 ಸಾಂಗ್ ರಿಲೀಸ್ ಆಗಿದೆ. 3ನೇ ಸಾಂಗ್‌ ಹೊರಬರುವ ಸಮಯ ಹತ್ತಿರ ಬರ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಭಿಮಾನಿಗಳ ಸಮ್ಮುಖದಲ್ಲೇ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತಿದೆ.ಇದೀಗ ಮತ್ತೊಂದು ಹಾಡನ್ನು ಅದೇ ರೀತಿ ಲೋಕಾರ್ಪಣೆ ಮಾಡಲು ಚಿತ್ರತಂಡ ನಿರ್ಧರಿಸಿದೆ.ವಿ. ಹರಿಕೃಷ್ಣ ನಿರ್ದೇಶನದ ‘ಕ್ರಾಂತಿ’ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೋಡಿಯಾಗಿ ರಚಿತಾ ರಾಮ್ ಮಿಂಚಿದ್ದಾರೆ. ‘ಕ್ರಾಂತಿ’ ಥೀಮ್ ಸಾಂಗ್ ‘ಧರಣಿ’, […]

Advertisement

Wordpress Social Share Plugin powered by Ultimatelysocial