ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು.

ಕೊಳ್ಳೇಗಾಲ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೊಂಡ ಬಳಿಕ ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು.ಪಟ್ಟಣದ ಎಸ್.ವಿ.ಕೆ ಕಾಲೇಜು ಸಮೀಪದ ಹೆದ್ದಾರಿಯ ರಸ್ತೆಯ ವೃತ್ತದಲ್ಲಿ ಇತ್ತೀಚೆಗೆ ಪ್ರತಿಷ್ಟಾಪನೆ ಮಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಳೆಯ ನಡುವೆಯೂ ಸಹಾ ಮಾಲಾರ್ಪಣೆ ಮಾಡಿ ಬಳಿಕ ಕೊಳ್ಳೇಗಾಲದ ಜನರ ಉದ್ದೇಶಿಸಿ ಮಾತನಾಡಿದರು.ಗುತ್ತಿಗೆದಾರ ಓಲೆ ಮಹದೇವ ಸ್ವಂತ ಖರ್ಚಿನಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಿರುವುದು ಇತಿಹಾಸ ಸೇರಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ ಓಲೆ ಮಹದೇವು ಪುಣ್ಯ ಮಾಡಿದ್ದರು ಎಂದು ತಿಳಿಸಿದರು.ಇಂದು ಅಂಬೇಡ್ಕರ್ ನೀಡಿದ ಸಂವಿಧಾನ ಮಾರ್ಗ ದರ್ಶನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ಸೇವೆ ಮಾಡುತ್ತಿದೆ. ಅವರಿಂದಾಗಿ ಮಾತ್ರ ಇಂದು ನಾವೆಲ್ಲ ಜನಪ್ರತಿನಿಧಿಗಳಾಗಿ ನಿಮ್ಮ ಸೇವೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.ಎಲ್ಲರೂ ಅಂಬೇಡ್ಕರ್ ಅವರ ಆಶಯ ಹಾಗೂ ಆದರ್ಶ ಗಳನ್ನು ಅಳವಡಿಸಿಕೊಂಡು ಜೀವನ ನಡೆಸೋಣ. ಬಿಜೆಪಿ ಸರ್ಕಾರ ಹಲವಾರು ಯೋಜನೆಗಳ ಮೂಲಕ ಅಂಬೇಡ್ಕರ್ ಅವರ ಚಿಂತನೆಗಳಲ್ಲಿ ದೇಶ ನಡೆಸುತ್ತಿದ ಎಂದರು.ಈ ವೇಳೆ ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಸನ್ಮಾನಿಸಿ ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಎನ್.ಮಹೇಶ್, ನಿರಂಜನ್ ಕುಮಾರ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ದತ್ತೇಶ್ ಕುಮಾರ್, ಪ್ರತಿಮೆ ನಿರ್ಮಾತೃ ಓಲೆ ಮಹಾದೇವ ಇತರರು ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿಯಲ್ಲಿ ನಮ್ಮ‌ ಕ್ಲೀನಿಕ್ ಉದ್ಘಾಟನೆ ಹಿನ್ನೆಲೆ.

Wed Dec 14 , 2022
ಸಿಎಂ ಸೇರಿದಂತೆ ಹಲವು ಸಚಿವರು ಹುಬ್ಬಳ್ಳಿಗೆ ಆಗಮನ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಸಚಿವರ ದಂಡು ಆಗಮನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮ ಹುಬ್ಬಳ್ಳಿಯ ಭೈರಿದೇವರಕೊಪ್ಪದ ರೇಣುಕಾನಗರದಲ್ಲಿ ನಡೆಯಲಿರುವ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಿಂದ ಲೋಕಾರ್ಪಣೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಚಿವ ಡಾ.ಕೆ. ಸುಧಾಕರ್, ಸಚಿವ ಆಚಾರ ಹಾಲಪ್ಪ ಸೇರಿ ಹಲವರು ಭಾಗಿ. ಇತ್ತೀಚಿನ […]

Advertisement

Wordpress Social Share Plugin powered by Ultimatelysocial