ಬಸವರಾಜ ಬೊಮ್ಮಾಯಿ ಅಪ್ರಸ್ತುತ ಸ್ಥಾನಮಾನದ ಮುಖ್ಯಮಂತ್ರಿ: ಚೇತನ್ ಅಹಿಂಸಾ!

ಪ್ರಧಾನಿ ನರೇಂದ್ರ ಮೋದಿಯವರು ಫೆ. 27ರಂದು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಮೋದಿ ಅವರು ಹೊಗಳಿಕೆಯ ಮಾತುಗಳನ್ನಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ಸಿಎಂ ಬೊಮ್ಮಾಯಿ ಅವರನ್ನು ನಟ ಚೇತನ್ ಅಹಿಂಸಾ ಅವರು ಟೀಕಿಸಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಫೆ. 27ರಂದು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ   ಅವರನ್ನು ಮೋದಿ ಅವರು ಹೊಗಳಿಕೆಯ ಮಾತುಗಳನ್ನಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಟ ಚೇತನ್ ಅಹಿಂಸಾ ಅವರು ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಅವರನ್ನು ಒಮ್ಮೆಯೂ ಪ್ರಸ್ತಾಪಿಸದೇ ಯಡಿಯೂರಪ್ಪವನ್ನು ಮಾತ್ರ ಉಲ್ಲೇಖಿಸಿದ್ದಾರೆ. ಬೊಮ್ಮಾಯಿ ಅವರು ಅಪ್ರಸ್ತುತ ಸ್ಥಾನಮಾನದ ಮುಖ್ಯಮಂತ್ರಿ ಎಂದು ಜರಿದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಚೇತನ್ ಅಹಿಂಸಾ, ‘ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಯವರು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಒಮ್ಮೆಯೂ ಕೂಡ ಪ್ರಸ್ಥಾಪಿಸದೆ ಬಿಎಸ್ ಯಡಿಯೂರಪ್ಪರವರನ್ನು ಮತ್ತೆ-ಮತ್ತೆ ಉಲ್ಲೇಖಿಸಿದ್ದಾರೆ. ಬಿಜೆಪಿಯ ಮುಖ್ಯ ವರಿಷ್ಠರಿಗೆ ಗೊತ್ತು: 1) ಅಧಿಕಾರವನ್ನು ಉಳಿಕೊಳ್ಳಲು ಬಿಎಸ್​ವೈ ಅವರ ಲಿಂಗಾಯತ ಲಾಬಿಗಳನ್ನು ಓಲಾಯಿಸುವುದೊಂದೇ ದಾರಿ; 2) ಬೊಮ್ಮಾಯಿ ಸರ್ಕಾರವು 20 ತಿಂಗಳಲ್ಲಿ ಯಾವುದೇ ಮೌಲ್ಯಯುತವಾದ ಕೊಡುಗೆ ನೀಡಿಲ್ಲ. ಬೊಮ್ಮಾಯಿ ಅವರು ಅಪ್ರಸ್ತುತ ಸ್ಥಾನಮಾನದ ಮುಖ್ಯಮಂತ್ರಿ’ ಎಂದು ಟೀಕಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶೀಘ್ರದಲ್ಲೇ ಅಲ್ಲು ಅಭಿಮಾನಿಗಳಿಗೆ ಗುಡ್ ನ್ಯೂಸ್:

Wed Mar 1 , 2023
‘ಪುಷ್ಪ’ ಸಿನಿಮಾ ರಿಲೀಸ್ ಆಗಿದ್ದೇ ಆಗಿದ್ದು, ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿಬಿಟ್ರು. ಸಿನಿಮಾ ಒಂದು ಮಟ್ಟಕ್ಕೆ ಸದ್ದು ಮಾಡುತ್ತೆ ಅನ್ನೋ ನಿರೀಕ್ಷೆಯಿದ್ದರೂ, ಈ ಮಟ್ಟಕ್ಕೆ ಬಾಕ್ಸಾಫೀಸ್‌ ಕೊಳ್ಳೆ ಹೊಡೆಯುತ್ತೆ ಅನ್ನೋದನ್ನು ಚಿತ್ರತಂಡಕ್ಕೆ ಅಂದಾಜು ಇರಲಿಲ್ಲ. ‘ಪುಷ್ಪ’ ರಿಲೀಸ್ ಆದ್ಮೇಲೆ ಅದರ ಕ್ರೇಜ್ ಮತ್ತಷ್ಟು ಹೆಚ್ಚಾಯ್ತು. ವಿಶ್ವದ ಹಲವೆಡೆ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಮ್ಯಾನರಿಸಂ ಹಾಗೂ ಸ್ಟೈಲ್ ಸದ್ದು ಮಾಡಿತ್ತು. ಇಷ್ಟೇ ಗಲ್ಲಾಪೆಟ್ಟಿಗೆಯಲ್ಲೂ ಚಮತ್ಕಾರ ಮಾಡಿತ್ತು. […]

Advertisement

Wordpress Social Share Plugin powered by Ultimatelysocial