೨೦೦೨ರ ಗುಜರಾತ್ ದಂಗೆಗಳ ಕುರಿತು ಬಿಬಿಸಿಯ ಸಾಕ್ಷ್ಯಚಿತ್ರವನ್ನು ನಿಷೇಧಿಸಿರುವ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಫೆ.೬ ರಂದು ಆಲಿಸಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.
೨೦೦೨ರ ಗುಜರಾತ್ ಗಲಭೆಯ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ’ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಅನ್ನು ದೇಶದಲ್ಲಿ ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ನಿಷೇಧ ಮಾಡಿದೆ.ತುರ್ತಾಗಿ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಸಲ್ಲಿಕೆಯಾಗಿದ್ದ ಪಿಐಎಲ್ ಅನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಫೆಬ್ರವರಿ ೬ ರಂದು ಪ್ರಕರಣವನ್ನು ಪಟ್ಟಿ ಮಾಡಲು ಸಮ್ಮತಿ ನೀಡಿದ್ದಾರೆ ವಕೀಲ ಎಂಎಲ್ ಶರ್ಮಾ ಅವರು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿಸಿದ್ದು ಕೇಂದ್ರ ಸರ್ಕಾರ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಿರುವ ಕ್ರಮ ದುರುದ್ದೇಶಪೂರಿತ, ಅನಿಯಂತ್ರಿತ ಮತ್ತು ಅಸಂವಿಧಾನಿಕ ಎಂದು ಹೇಳಿದ್ದಾರೆ.
ಜೊತೆಗೆ ಈ ನಿಷೇಧ ಆರ್ಟಿಕಲ್ ೧೯(೧)(ಎ) ಅಡಿಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ವಾದಿಸಲಾಯಿತು.ಗುಜರಾತ್ ಗಲಭೆಗೆ ಕಾರಣರಾದವರ ವಿರುದ್ಧವೂ ತನಿಖೆ ನಡೆಸುವಂತೆ ಮನವಿಯಲ್ಲಿ ಕೋರಲಾಗಿದೆ.
ಹಿರಿಯ ಪತ್ರಕರ್ತ ಎನ್. ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್ಗಳೊಂದಿಗೆ ಟ್ವೀಟ್ಗಳನ್ನು ತೆಗೆದುಹಾಕುವ ಕುರಿತು ಸಲ್ಲಿಸಿರುವ ಪ್ರತ್ಯೇಕ ಅರ್ಜಿಯ ವಿಚಾರಣೆಯೂ ನಡೆಯಲಿದೆ.
ಸಾಕ್ಷ್ಯಚಿತ್ರದ ಲಿಂಕ್ಗಳನ್ನು ನಿರ್ಬಂಧಿಸಲು ಕೇಂದ್ರವು ಇತ್ತೀಚೆಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಾದ ಟ್ವಿಟ್ಟರ್, ಯೂಯೂಬ್ ಗೆ ನಿರ್ದೇಶಿಸಿದೆ.ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಾಕ್ಷ್ಯಚಿತ್ರವನ್ನು “ಪ್ರಚಾರದ ತುಣುಕು” ಎಂದು ಕಸದ ಬುಟ್ಟಿಗೆ ಹಾಕಿದೆ, ಅದು ವಸ್ತುನಿಷ್ಠತೆಯನ್ನು ಹೊಂದಿರುವುದಿಲ್ಲ ಮತ್ತು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿತ್ತು.ಬಿಬಿಸಿ ಸಾಕ್ಷ್ಯಚಿತ್ರ ೨೦೦೨ ರಲ್ಲಿ ಗುಜರಾತ್ ಗಲಭೆ ೨೦೦೨ ರಲ್ಲಿ ಭಾರತದ ಪ್ರಜೆಯ ಹತ್ಯೆಯ ನೈಜ ಸಂಗತಿಗಳನ್ನು ಒಳಗೊಂಡಿರುವ ಬಹಿರಂಗಪಡಿಸುವುದನ್ನು ನೋಡಲು ನಿಷೇಧಿಸಿದೆ.
https://play.google.com/store/apps/details?id=com.speed.newskannada